AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 […]

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ
ಅರವಿಂದ್ ಕೇಜ್ರಿವಾಲ್​
Lakshmi Hegde
|

Updated on: May 22, 2021 | 6:17 PM

Share

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 ಗಂಟೆಯಲ್ಲಿ ಕೊರೊನಾ ವೈರಸ್​ ಲಸಿಕೆಗಳನ್ನು ಖರೀದಿಸಬೇಕು ಎಂದು ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ.

ಹಲವು ರಾಷ್ಟ್ರಗಳಲ್ಲಿ ಅಲ್ಲಿನ ಅಗತ್ಯತೆಗಿಂತ ಜಾಸ್ತಿ ಕೊವಿಡ್ 19 ಲಸಿಕೆ ಇದೆ. ಅಂಥ ದೇಶಗಳ ಬಳಿ ಭಾರತ ಮನವಿ ಮಾಡಿಕೊಂಡು, ವ್ಯಾಕ್ಸಿನ್​ ಖರೀದಿಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ. ಹಾಗೇ, ವಿದೇಶಿ ಕಂಪನಿಗಳಿಗೆ ಭಾರತದಲ್ಲಿ ವ್ಯಾಕ್ಸಿನ್​ ತಯಾರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಹಾಗೇ, ಕೊವ್ಯಾಕ್ಸಿನ್​ ಲಸಿಕೆ ತಯಾರಿಕೆಯ ಫಾರ್ಮುಲಾವನ್ನು ಹಂಚಿಕೊಳ್ಳಲು ಭಾರತ್​ ಬಯೋಟೆಕ್​ ಒಪ್ಪಿಕೊಂಡಿರುವುದರಿಂದ, ಹೆಚ್ಚೆಚ್ಚು ಕಂಪನಿಗಳನ್ನು ಅದನ್ನು ಉತ್ಪಾದಿಸಲು ಶೀಘ್ರವೇ ಅನುವು ಮಾಡಿಕೊಡಬೇಕು ಎಂದೂ ಕೇಜ್ರಿವಾಲ್ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಇನ್ನೂ 80 ಲಕ್ಷ ಡೋಸ್​ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: Cash with public: 2021ರ ಮೇ 7ರ ಕೊನೆಗೆ ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದ ಜನರ ಬಳಿಯ ನಗದು ರೂ. 28.39 ಲಕ್ಷ ಕೋಟಿ

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!