AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 […]

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ
ಅರವಿಂದ್ ಕೇಜ್ರಿವಾಲ್​
Lakshmi Hegde
|

Updated on: May 22, 2021 | 6:17 PM

Share

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 ಗಂಟೆಯಲ್ಲಿ ಕೊರೊನಾ ವೈರಸ್​ ಲಸಿಕೆಗಳನ್ನು ಖರೀದಿಸಬೇಕು ಎಂದು ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ.

ಹಲವು ರಾಷ್ಟ್ರಗಳಲ್ಲಿ ಅಲ್ಲಿನ ಅಗತ್ಯತೆಗಿಂತ ಜಾಸ್ತಿ ಕೊವಿಡ್ 19 ಲಸಿಕೆ ಇದೆ. ಅಂಥ ದೇಶಗಳ ಬಳಿ ಭಾರತ ಮನವಿ ಮಾಡಿಕೊಂಡು, ವ್ಯಾಕ್ಸಿನ್​ ಖರೀದಿಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ. ಹಾಗೇ, ವಿದೇಶಿ ಕಂಪನಿಗಳಿಗೆ ಭಾರತದಲ್ಲಿ ವ್ಯಾಕ್ಸಿನ್​ ತಯಾರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಹಾಗೇ, ಕೊವ್ಯಾಕ್ಸಿನ್​ ಲಸಿಕೆ ತಯಾರಿಕೆಯ ಫಾರ್ಮುಲಾವನ್ನು ಹಂಚಿಕೊಳ್ಳಲು ಭಾರತ್​ ಬಯೋಟೆಕ್​ ಒಪ್ಪಿಕೊಂಡಿರುವುದರಿಂದ, ಹೆಚ್ಚೆಚ್ಚು ಕಂಪನಿಗಳನ್ನು ಅದನ್ನು ಉತ್ಪಾದಿಸಲು ಶೀಘ್ರವೇ ಅನುವು ಮಾಡಿಕೊಡಬೇಕು ಎಂದೂ ಕೇಜ್ರಿವಾಲ್ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಇನ್ನೂ 80 ಲಕ್ಷ ಡೋಸ್​ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: Cash with public: 2021ರ ಮೇ 7ರ ಕೊನೆಗೆ ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದ ಜನರ ಬಳಿಯ ನಗದು ರೂ. 28.39 ಲಕ್ಷ ಕೋಟಿ

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?