AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 […]

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ
ಅರವಿಂದ್ ಕೇಜ್ರಿವಾಲ್​
Lakshmi Hegde
|

Updated on: May 22, 2021 | 6:17 PM

Share

ದೆಹಲಿ: 18 ವರ್ಷ ಮೇಲ್ಪಟ್ಟವರಿಗೆ ಕೊವಿಡ್​ 19 ಲಸಿಕೆ ನೀಡುವುದನ್ನು ಇಂದಿನಿಂದ (ಶನಿವಾರ) ಸ್ಥಗಿತಗೊಳಿಸಲಾಗುತ್ತಿದೆ. ನಮ್ಮಲ್ಲಿ ಕೊರೊನಾ ಲಸಿಕೆ ಸಂಪೂರ್ಣವಾಗಿ ಖಾಲಿಯಾಗಿರುವ ಕಾರಣ ಲಸಿಕೆ ವಿತರಣಾ ಅಭಿಯಾನವನ್ನು ಮುಂದುವರಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​, ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವುದನ್ನು ಇಂದಿನಿಂದ ನಿಲ್ಲಿಸುತ್ತೇವೆ. ಈ ವರ್ಗದವರಿಗಾಗಿ ಮೀಸಲಿಟ್ಟಿದ್ದ ಲಸಿಕೆ ಖಾಲಿಯಾಗಿದೆ. ದೇಶದಲ್ಲಿರುವ ಕೊರೊನಾ ಲಸಿಕೆ ಸಾಕಾಗುತ್ತಿಲ್ಲ. ಹಾಗಾಗಿ ಕೇಂದ್ರ ಸರ್ಕಾರ ವಿದೇಶಗಳಿಂದ ಇನ್ನು 24 ಗಂಟೆಯಲ್ಲಿ ಕೊರೊನಾ ವೈರಸ್​ ಲಸಿಕೆಗಳನ್ನು ಖರೀದಿಸಬೇಕು ಎಂದು ಅರವಿಂದ್​ ಕೇಜ್ರಿವಾಲ್ ಹೇಳಿದ್ದಾರೆ.

ಹಲವು ರಾಷ್ಟ್ರಗಳಲ್ಲಿ ಅಲ್ಲಿನ ಅಗತ್ಯತೆಗಿಂತ ಜಾಸ್ತಿ ಕೊವಿಡ್ 19 ಲಸಿಕೆ ಇದೆ. ಅಂಥ ದೇಶಗಳ ಬಳಿ ಭಾರತ ಮನವಿ ಮಾಡಿಕೊಂಡು, ವ್ಯಾಕ್ಸಿನ್​ ಖರೀದಿಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ. ಹಾಗೇ, ವಿದೇಶಿ ಕಂಪನಿಗಳಿಗೆ ಭಾರತದಲ್ಲಿ ವ್ಯಾಕ್ಸಿನ್​ ತಯಾರಿಸಲು ಕೇಂದ್ರ ಸರ್ಕಾರ ಅನುಮತಿ ನೀಡಬೇಕು. ಹಾಗೇ, ಕೊವ್ಯಾಕ್ಸಿನ್​ ಲಸಿಕೆ ತಯಾರಿಕೆಯ ಫಾರ್ಮುಲಾವನ್ನು ಹಂಚಿಕೊಳ್ಳಲು ಭಾರತ್​ ಬಯೋಟೆಕ್​ ಒಪ್ಪಿಕೊಂಡಿರುವುದರಿಂದ, ಹೆಚ್ಚೆಚ್ಚು ಕಂಪನಿಗಳನ್ನು ಅದನ್ನು ಉತ್ಪಾದಿಸಲು ಶೀಘ್ರವೇ ಅನುವು ಮಾಡಿಕೊಡಬೇಕು ಎಂದೂ ಕೇಜ್ರಿವಾಲ್ ಕೇಂದ್ರಕ್ಕೆ ಸಲಹೆ ನೀಡಿದ್ದಾರೆ. ದೆಹಲಿಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಇನ್ನೂ 80 ಲಕ್ಷ ಡೋಸ್​ ಅಗತ್ಯವಿದೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: Cash with public: 2021ರ ಮೇ 7ರ ಕೊನೆಗೆ ಸಾರ್ವಕಾಲಿಕ ಗರಿಷ್ಠ ಮಟ್ಟ ಮುಟ್ಟಿದ ಜನರ ಬಳಿಯ ನಗದು ರೂ. 28.39 ಲಕ್ಷ ಕೋಟಿ

ಪ್ರಧಾನಿ ಸೂಚನೆಯಂತೆ ಆರ್​.ಆರ್​. ನಗರ ಕ್ಷೇತ್ರಕ್ಕೆ ಆಕ್ಸಿಜನ್​ ಟ್ಯಾಂಕ್​ ತರಿಸಿದ್ದೇವೆ: ಸ್ಥಳೀಯ ಶಾಸಕ ಮುನಿರತ್ನ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ