AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸುವಿನ ಕುರಿತ ಅಧ್ಯಯನಕ್ಕೆ ಗೋವನ್ನೇ ಸಾಕಿದ ದೆಹಲಿಯ ಹಂಸರಾಜ್​ ಕಾಲೇಜು

ದೆಹಲಿಯ ಕಾಲೇಜ್​ವೊಂದರಲ್ಲಿ ಹಸುವಿನ ಬಗ್ಗೆ ಅಧ್ಯಯನ ನಡೆಸಲು ಯೋಜನೆ ರೂಪಿಸಲಾಗಿದ. ಇದಕ್ಕಾಗಿ ಗೋ ರಕ್ಷಣೆ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಹಸುವಿನ ಕುರಿತ ಅಧ್ಯಯನಕ್ಕೆ ಗೋವನ್ನೇ ಸಾಕಿದ ದೆಹಲಿಯ ಹಂಸರಾಜ್​ ಕಾಲೇಜು
ಹಸು
TV9 Web
| Edited By: |

Updated on:Jan 27, 2022 | 2:20 PM

Share

ಭಾರತದಲ್ಲಿ ಗೋವಿಗೆ ಪವಿತ್ರ ಸ್ಥಾನವಿದೆ. ದೇವರೆಂದು ಪೂಜಿಸುತ್ತೇವೆ. ಇದೀಗ ದೆಹಲಿಯ ಕಾಲೇಜ್​ವೊಂದರಲ್ಲಿ ಹಸುವಿನ ಬಗ್ಗೆ ಅಧ್ಯಯನ ನಡೆಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಗೋ ರಕ್ಷಣೆ ಮತ್ತು ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ದೆಹಲಿಯ ಹಂಸರಾಜ್​ ಕಾಲೇಜಿನ (Hansraj College) ಕ್ಯಾಂಪಸ್​ನಲ್ಲಿ ಈ ಗೋ ರಕ್ಷಣೆ ಮತ್ತು ಸಂಶೋಧನಾ ಕೇಂದ್ರ (cow protection and research centre) ವನ್ನು ಸ್ಥಾಪಿಸಲಾಗಿದ್ದು, ಅಧ್ಯಯನಕ್ಕಾಗಿ ಒಂದು ಹಸುವನ್ನೂ ಸಾಕಲಾಗಿದೆ. ಈ ಕುರಿತು ಇಂಡಿಯನ್​ ಎಕ್ಸ್​ ಪ್ರೆಸ್​ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸುದ್ದಿ ಸಂಸ್ಥೆಯೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮ ಶರ್ಮಾ (Dr Rama Sharma) ಮಾತನಾಡಿ, ಹಸುವಿನ ವಿವಿಧ ಅಂಶಗಳ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನಲ್ಲಿ ಈ ಗೋ ಸಂರಕ್ಷಣಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಈಗಾಗಲೇ ಒಂದು ಹಸುವನ್ನು ಸಾಕಲಾಗಿದೆ. ಅಲ್ಲದೆ ಕಾಲೇಜಿನ ವಿದ್ಯಾರ್ಥಿಗಳಿಗೆ ಶುದ್ಧ ಹಾಲು ಮತ್ತು ತುಪ್ಪವನ್ನು ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಗೋಬರ್​ಗ್ಯಾಸ್​ಅನ್ನು ಕೂಡ ಸ್ಥಾಪಿಸಲಾಗುವುದು ಎಂದಿದ್ದಾರೆ. 

ಮುಂದುವರೆದು ಮಾತನಾಡಿ, ಒಂದು ಹಸುವಿನಿಂದ ಆರಂಭಿಸಲಾದ ಈ ಯೋಜನೆಯ ಉದ್ದೇಶ, ಅಂದರೆ ಸಂಶೋಧನೆ ಫಲಕಾರಿಯಾದರೆ ಸ್ವಾಮಿ ದಯಾನಂದ ಸರಸ್ವತಿ ಗೋ ಸಂವರ್ಧನ್ ಏವಂ ಅನುಸಂಧಾನ ಕೇಂದ್ರ ಎಂದು ನಾಮಕರಣ ಮಾಡಲಾಗುವುದು. ನಮ್ಮದು ಆರ್ಯ ಸಮಾಜದ ಅಡಿಯಲ್ಲಿ ಬರುವ ದಯಾನಂದ ಆಂಗ್ಲೋ ವೇದಿಕ್ ಟ್ರಸ್ಟ್​ನ ಕಾಲೇಜ್​ ಆಗಿದೆ. ಹೀಗಾಗಿ ಪ್ರತೀ ತಿಂಗಳ ಮೊದಲನೇ ದಿನ ಹವನವನ್ನು ಮಾಡುತ್ತೇವೆ. ಜತೆಗೆ ಆ ತಿಂಗಳಿನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವವರನ್ನು ಆಹ್ವಾನಿಸುತ್ತೇವೆ. ಇದಕ್ಕಾಗಿ ಪ್ರತೀ ತಿಂಗಳು ಮಾರುಕಟ್ಟೆಗೆ ತೆರಳಿ ತುಪ್ಪ ಮತ್ತು ಬೇಕಾದ ಸಾಮಗ್ರಿಗಳನ್ನು ತರಬೇಕು. ಇದೀಗ ಹಸುವನ್ನು ಸಾಕಿದ ಮೇಲೆ ಅದರಿಂದ ದೊರೆಯುವ ಹಾಲು ಮತ್ತು ತುಪ್ಪವನ್ನು ಬಳಕೆ ಮಾಡುತ್ತೇವೆ ಎಂದಿದ್ದಾರೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ  ಗೋ ಸಂರಕ್ಷಣಾ ಕೇಂದ್ರದ ಸ್ಥಾಪನೆಗೆ ಕಟ್ಟಡವನ್ನು ಮಂಜೂರು ಮಾಡಲಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ;

129 ಮಕ್ಕಳ ಜನನಕ್ಕೆ ಕಾರಣವಾದ ಜಗತ್ತಿನ ಆರೋಗ್ಯವಂತ ವೀರ್ಯ ದಾನಿ ಕ್ಲೈವ್ ಜೋನ್ಸ್

Published On - 2:16 pm, Thu, 27 January 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ