Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ಅಂಬಾನಿ ಒಡೆತನದ ಕಂಪನಿಗಳ ಖಾತೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿ: ಎಸ್​ಬಿಐಗೆ ದೆಹಲಿ ಹೈಕೋರ್ಟ್ ನಿರ್ದೇಶನ

ವಂಚನೆಯ ಖಾತೆಗಳು ಎಂದುವ ಬ್ಯಾಂಕ್ ಗಳು ಘೋಷಿಸಿರುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂತ್ ಹೊರಡಿಸಿದ 2016ರ ಸುತ್ತೋಲೆಯನ್ನು ಪ್ರಶ್ನಿಸಿ ರಿಲಯನ್ಸ್​ನ ಮೂರು ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು.

ಅನಿಲ್ ಅಂಬಾನಿ ಒಡೆತನದ ಕಂಪನಿಗಳ ಖಾತೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿ: ಎಸ್​ಬಿಐಗೆ ದೆಹಲಿ ಹೈಕೋರ್ಟ್ ನಿರ್ದೇಶನ
ಅನಿಲ್ ಅಂಬಾನಿ
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 4:26 PM

ನವದೆಹಲಿ: ಅನಿಲ್ ಅಂಬಾನಿ ಅವರ ಆರ್ ಕಾಂ, ರಿಲಯನ್ಸ್ ಟೆಲಿಕಾಂ ಮತ್ತು ರಿಲಯನ್ಸ್ ಇನ್​​ಫ್ರಾಟೆಲ್ ಕಂಪನಿಯ ಬ್ಯಾಂಕ್ ಖಾತೆಗಳನ್ನು ವಂಚನೆಯ ಖಾತೆ ಪಟ್ಟಿಗೆ ಸೇರಿಸಿರುವ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈ ಖಾತೆಗಳನ್ನು ಯಥಾಸ್ಥಿತಿಯಲ್ಲಿಡುವಂತೆ ಎಸ್​ಬಿಐಗೆ ಹೇಳಿದೆ.

ವಂಚನೆಯ ಖಾತೆಗಳು ಎಂದು ಬ್ಯಾಂಕ್​ಗಳು ಘೋಷಿಸಿರುವ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಹೊರಡಿಸಿದ 2016ರ ಸುತ್ತೋಲೆಯನ್ನು ಪ್ರಶ್ನಿಸಿ ರಿಲಯನ್ಸ್​ನ ಮೂರು ಕಂಪನಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದವು .

ನೈಸರ್ಗಿಕ ನ್ಯಾಯದ ನಿಯಮ ಪ್ರಕಾರ ಖಾತೆದಾರರಿಗೆ ಯಾವುದೇ ಪೂರ್ವ ಸೂಚನೆ ಅಥವಾ ಸಂವಹನವನ್ನು ನೀಡದೆ ಖಾತೆಯನ್ನು ವಂಚನೆ ಎಂದು ಘೋಷಿಸಲು ಸುತ್ತೋಲೆ ಬ್ಯಾಂಕುಗಳಿಗೆ ಅವಕಾಶ ನೀಡುತ್ತದೆ ಎಂದು ಅರ್ಜಿಯಲ್ಲಿ ಹೇಳಿದೆ.

2019ರಿಂದ ಸುತ್ತೋಲೆಯ ವಿರುದ್ಧ ಇದೇ ರೀತಿಯ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದೆ ಮತ್ತು ಆ ವಿಷಯಗಳಲ್ಲಿ ಅರ್ಜಿದಾರರನ್ನು ಹೈಕೋರ್ಟ್ ಕಾಪಾಡಿದೆ ಎಂದು ರಿಲಯನ್ಸ್ ಪರ ವಾದಿಸಿದ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

ಇದೇ ರೀತಿಯ ವಿಷಯಗಳಲ್ಲಿ ಈ ಹಿಂದೆ ಹೈಕೋರ್ಟ್ ಹೊರಡಿಸಿದ ಆದೇಶಗಳನ್ನು ಗಮನದಲ್ಲಿಟ್ಟುಕೊಂಡು, ಮೂರು ಕಂಪನಿಗಳ ಖಾತೆಗಳಿಗೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯ ದಿನಾಂಕದವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ ನ್ಯಾಯಮೂರ್ತಿ ಪ್ರತೀಕ್ ಜಲನ್ ನಿರ್ದೇಶನ ನೀಡಿದ್ದಾರೆ.

ಆರ್‌ಬಿಐ ಮತ್ತು ಮೂರು ಕಂಪನಿಗಳು ಸೇರಿದಂತೆ ಪ್ರತಿವಾದಿಗಳು ಜನವರಿ 11 ರೊಳಗೆ ಅರ್ಜಿಗೆ ತಮ್ಮ ಉತ್ತರಗಳನ್ನು ಸಲ್ಲಿಸಬಹುದು, ಜನವರಿ 13 ರಂದು ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ.

ಹಿಂದಿನ ನಿರ್ದೇಶಕರು ಮತ್ತು ಮೂರು ಕಂಪನಿಗಳ ಖಾತೆಗಳನ್ನು ವಂಚನೆ ಖಾತೆಗಳೆಂದು ಘೋಷಿಸುವ ಆಕ್ಷೇಪಾರ್ಹ ಕ್ರಮದಿಂದ ಸ್ವತಂತ್ರವಾಗಿ ಮೂರು ನಿರ್ದೇಶಕರ ವಿರುದ್ಧ ತನಿಖೆ ಅಥವಾ ದೂರು ದಾಖಲಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲು ಎಸ್‌ಬಿಐ ಮತ್ತು ಆರ್‌ಬಿಐಗೆ ಸ್ವಾತಂತ್ರ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಅನಿಲ್​ ಅಂಬಾನಿಯ RCom ಸಮೂಹವು ಬ್ಯಾಂಕುಗಳಿಗೆ ಕಟ್ಟಬೇಕಿದೆ 49 ಸಾವಿರ ಕೋಟಿ ರೂ ಸಾಲ! ಆದ್ರೆ..

ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಚಹಲ್​ ಚಮತ್ಕಾರ: 3 ಓವರ್​ಗಳಲ್ಲಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಯುಝಿ
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
ಕನಸಿನಲ್ಲಿ ಪದೇ ಪದೇ ಇಷ್ಟ ದೇವತೆಗಳು ಕಾಣಿಸಿಕೊಂಡರೆ ಏನರ್ಥ?
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Daily Horoscope: ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ ಎದುರಾಗಬಹುದು
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?