AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರಾಧ್ಯ ಬಚ್ಚನ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿದ ಯುಟ್ಯೂಬ್ ಚಾನೆಲ್​​​ಗೆ ನಿರ್ಬಂಧ; ವಿಡಿಯೊ ತೆಗೆದು ಹಾಕಲು ಗೂಗಲ್​​ಗೆ ನಿರ್ದೇಶಿಸಿದ ದೆಹಲಿ ಹೈಕೋರ್ಟ್

ಆರಾಧ್ಯ ಮತ್ತು ಆಕೆಯ ಅಪ್ಪ ನೀಡಿದ ದೂರಿನ ವಿಚಾರಣೆ ನಡೆಸಿದ ಕೋರ್ಟ್, ಆರಾಧ್ಯ ಬಚ್ಚನ್ ತೀವ್ರ ಅಸ್ವಸ್ಥರಾಗಿದ್ದಾರೆ ಮತ್ತು ಆಕೆ ಇನ್ನಿಲ್ಲ ಎಂಬ ವಿಷಯಗಳನ್ನು ಪ್ರಕಟಿಸಿದ ಯುಟ್ಯೂಬ್ ಚಾನೆಲ್​​ಗಳ ವಿಡಿಯೊಗಳನ್ನು ಪ್ಲಾಟ್​​ಫಾರ್ಮ್​​​ನಿಂದ ತೆಗೆದು ಹಾಕಬೇಕು ಎಂದು ಗೂಗಲ್​​ಗೆ ನಿರ್ದೇಶಿಸಿದೆ.

ಆರಾಧ್ಯ ಬಚ್ಚನ್ ಬಗ್ಗೆ ತಪ್ಪು ಮಾಹಿತಿ ಪ್ರಕಟಿಸಿದ ಯುಟ್ಯೂಬ್ ಚಾನೆಲ್​​​ಗೆ ನಿರ್ಬಂಧ; ವಿಡಿಯೊ ತೆಗೆದು ಹಾಕಲು ಗೂಗಲ್​​ಗೆ ನಿರ್ದೇಶಿಸಿದ ದೆಹಲಿ ಹೈಕೋರ್ಟ್
ಐಶ್ವರ್ಯಾ ರೈ ಜತೆ ಆರಾಧ್ಯ ಬಚ್ಚನ್
ರಶ್ಮಿ ಕಲ್ಲಕಟ್ಟ
|

Updated on: Apr 20, 2023 | 4:46 PM

Share

ದೆಹಲಿ: ಬಾಲಿವುಡ್ ದಂಪತಿ ಅಭಿಷೇಕ್ ಬಚ್ಚನ್ (Abhishek Bachchan) ಮತ್ತು ಐಶ್ವರ್ಯಾ ರೈ ಬಚ್ಚನ್ (Aishwarya Rai Bachchan) ಪುತ್ರಿ ಆರಾಧ್ಯ ಬಚ್ಚನ್​​ನ (Aaradhya Bachchan) ಆರೋಗ್ಯದ ಬಗ್ಗೆ ತಪ್ಪಾದ ಮಾಹಿತಿ ಪ್ರಸಾರ ಮಾಡಿದ ಹಲವಾರು ಯುಟ್ಯೂಬ್ ಚಾನೆಲ್​​ಗಳನ್ನು ನಿರ್ಬಂಧಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆರಾಧ್ಯ ಮತ್ತು ಆಕೆಯ ಅಪ್ಪ ನೀಡಿದ ದೂರಿನ ವಿಚಾರಣೆ ನಡೆಸಿದ ಕೋರ್ಟ್, ಆರಾಧ್ಯ ಬಚ್ಚನ್ ತೀವ್ರ ಅಸ್ವಸ್ಥರಾಗಿದ್ದಾರೆ ಮತ್ತು ಆಕೆ ಇನ್ನಿಲ್ಲ ಎಂಬ ವಿಷಯಗಳನ್ನು ಪ್ರಕಟಿಸಿದ ಯುಟ್ಯೂಬ್ ಚಾನೆಲ್​​ಗಳ ವಿಡಿಯೊಗಳನ್ನು ಪ್ಲಾಟ್​​ಫಾರ್ಮ್​​​ನಿಂದ ತೆಗೆದು ಹಾಕಬೇಕು ಎಂದು ಗೂಗಲ್​​ಗೆ ನಿರ್ದೇಶಿಸಿದೆ. ಪ್ರತಿಯೊಂದು ಮಗುವನ್ನೂ ಘನತೆ ಗೌರವದಿಂದ ನೋಡಿಕೊಳ್ಳಬೇಕು. ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿಯ ಪ್ರಸಾರವು ಕಾನೂನು ವಿರುದ್ಧವಾದುದು ಎಂದು ನ್ಯಾಯಾಲಯ ಹೇಳಿದೆ.

ಮಧ್ಯಂತರ ಆದೇಶ ನೀಡಿದ ಕೋರ್ಟ್, ಅಪ್‌ಲೋಡ್ ಮಾಡಿದವರ ವಿವರಗಳ ಬಗ್ಗೆ ಫಿರ್ಯಾದಿದಾರರಿಗೆ ತಿಳಿಸಲು ಗೂಗಲ್ಲ್​​ಗೆ ಹೇಳಿದೆ. ಅದೇ ವೇಳೆ ನಮ್ಮ ಗಮನಕ್ಕೆ ತಂದಾಗಲೆಲ್ಲಾ ಇದೇ ರೀತಿಯ ವಿಡಿಯೊಗಳನ್ನು ಸಹ ತೆಗೆದುಹಾಕಲಾಗುವುದು ಎಂದು ಗೂಗಲ್ ಸ್ಪಷ್ಟಪಡಿಸಿದೆ.

1 ರಿಂದ 9 ರವರೆಗಿನ ಪ್ರತಿವಾದಿಗಳು (ಯೂಟ್ಯೂಬ್ ಚಾನೆಲ್‌ಗಳು) ಫಿರ್ಯಾದಿಯ ಆರೋಗ್ಯ ಅಥವಾ ದೈಹಿಕ ಸ್ಥಿತಿಗೆ ಸಂಬಂಧಿಸಿದ ಯಾವುದೇ ಸಾರ್ವಜನಿಕ ವೇದಿಕೆಯಲ್ಲಿ ಯಾವುದೇ ವಿಷಯವನ್ನು ಪ್ರಕಟಿಸುವುದು, ಹಂಚಿಕೊಳ್ಳುವುದು ಮತ್ತು ಪ್ರಸಾರ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿದೆ.

ಪ್ರತಿವಾದಿ ಸಂಖ್ಯೆ 10 (ಗೂಗಲ್) ತಕ್ಷಣವೇ ಅರ್ಜಿಯಲ್ಲಿ ಉಲ್ಲೇಖಿಸಲಾದ ಎಲ್ಲಾ ವಿಡಿಯೊಗಳನ್ನು ಪಟ್ಟಿಯಿಂದ ತೆಗೆದುಹಾಕಬೇಕು ಮತ್ತು ನಿಷ್ಕ್ರಿಯಗೊಳಿಸಬೇಕು ಎಂದು ಅದು ಹೇಳಿದೆ.

ಮಗುವಿನ ಬಗ್ಗೆ ತಪ್ಪು ಮಾಹಿತಿಯನ್ನು ಹರಡುವುದು ವಿಕೃತ ಮನಸ್ಥಿತಿ ಮತ್ತು ಮಗುವಿನ ಹಿತಾಸಕ್ತಿಗಳಲ್ಲಿ ಸಂಪೂರ್ಣ ನಿರಾಸಕ್ತಿ ಯನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯ ಟೀಕಿಸಿದೆ.

ಮಧ್ಯವರ್ತಿ ನಿಯಮಗಳ ದೃಷ್ಟಿಯಿಂದ ತನ್ನ ಯೂಟ್ಯೂಬ್ ಪ್ಲಾಟ್‌ಫಾರ್ಮ್‌ನಲ್ಲಿ ಅಂತಹ ಆಕ್ಷೇಪಾರ್ಹ ವಿಷಯದೊಂದಿಗೆ ವ್ಯವಹರಿಸುವ ಬಗ್ಗೆ ಅದರ ನೀತಿಯನ್ನು ವಿವರವಾಗಿ ತಿಳಿಸಲು ನ್ಯಾಯಾಲಯವು ಗೂಗಲ್ ಗೆ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ಕೇಳಿದೆ.

ಇದನ್ನೂ ಓದಿ:  Madhya Pradesh: ಮಗಳ ಚಿಕಿತ್ಸೆಗಾಗಿ ರಕ್ತ ಮಾರಾಟ ಮಾಡುತ್ತಿದ್ದ ತಂದೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ

ಆದಾಗ್ಯೂ ವಿಚಾರಣೆಗೊಳಪಟ್ಟಿರುವ ವಿಷಯಕ್ಕೆ ಪ್ರವೇಶವನ್ನು ನಿರ್ಬಂಧಿಸಲು ಕೇಂದ್ರಕ್ಕೆ ನಿರ್ದೇಶಿಸಿದ್ದು, ಮಧ್ಯವರ್ತಿಗಳಿಗೆ ಕಾನೂನು ಚೌಕಟ್ಟನ್ನು ಅನುಸರಿಸುವಂತೆ ಮಾಡಲು Google ಬದ್ಧವಾಗಿದೆ ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಕನ್ನಡದಲ್ಲೇ ಮಾತು ಆರಂಭಿಸಿದ ನೀರಜ್ ಚೋಪ್ರಾ ಬೆಂಗಳೂರಿನ ಬಗ್ಗೆ ಹೇಳಿದ್ದೇನು?
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಪತ್ನಿಯೊಂದಿಗೆ ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ನಟ ದರ್ಶನ್
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು
ಟ್ರಿನಿಡಾಡ್ ಮತ್ತು ಟೊಬಾಗೊ ಪ್ರಧಾನಿ ಕಮಲಾರನ್ನು ಬಿಹಾರದ ಮಗಳು