AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನ ಹತ್ಯೆ ದಿನದ ಅಧಿಸೂಚನೆ ಸಂವಿಧಾನಕ್ಕೆ ಅವಮಾನವಲ್ಲ: ದೆಹಲಿ ಹೈಕೋರ್ಟ್​

ಸಂವಿಧಾನದ ಹತ್ಯೆ ದಿನವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಅಧಿಸೂಚನೆಯನ್ನು ಯಾವುದೇ ಸಂದರ್ಭದಲ್ಲೂ ಸಂವಿಧಾನಕ್ಕೆ ಅವಮಾನ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

ಸಂವಿಧಾನ ಹತ್ಯೆ ದಿನದ ಅಧಿಸೂಚನೆ ಸಂವಿಧಾನಕ್ಕೆ ಅವಮಾನವಲ್ಲ: ದೆಹಲಿ ಹೈಕೋರ್ಟ್​
ಸಂವಿಧಾನImage Credit source: The Hills Times
ನಯನಾ ರಾಜೀವ್
|

Updated on: Jul 26, 2024 | 1:21 PM

Share

ಜೂನ್ 25 ಅನ್ನು ಸಂವಿಧಾನದ ಹತ್ಯೆ ದಿನವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಅಧಿಸೂಚನೆಯನ್ನು ಯಾವುದೇ ಸಂದರ್ಭದಲ್ಲೂ ಸಂವಿಧಾನಕ್ಕೆ ಅವಮಾನ ಎಂದು ಕರೆಯಲಾಗುವುದಿಲ್ಲ ಎಂದು ಹೇಳಿದೆ.

1975ರ ಜೂನ್ 25ರಂದು ಕಾಂಗ್ರೆಸ್ ಸರ್ಕಾರ ಹೇರಿದ್ದ ತುರ್ತುಪರಿಸ್ಥಿತಿಗೆ ಅವಧಿಯಲ್ಲಿ ಪ್ರಾಣ ಕಳೆದುಕೊಂಡವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಕೇಂದ್ರ ಸರ್ಕಾರ ಜೂನ್ 25ರಂದು ಸಂವಿಧಾನ ಹತ್ಯೆ ದಿನವನ್ನಾಗಿ ಆಚರಿಸಲು ಅಧಿಸೂಚನೆ ಹೊರಡಿಸಿತ್ತು.

ಸರ್ಕಾರದ ಈ ನಿರ್ಧಾರಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿವೆ. ಈ ಆದೇಶದ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸಲ್ಲಿಸಲಾಗಿದ್ದು, ಶುಕ್ರವಾರ ಅದನ್ನು ತಿರಸ್ಕರಿಸಲಾಗಿದೆ.

ಮತ್ತಷ್ಟು ಓದಿ: ಕಾಂಗ್ರೆಸ್​ನ ಕರಾಳ ಘಟ್ಟ; ಸಂವಿಧಾನ ಹತ್ಯಾ ದಿನದ ಕುರಿತು ಪಿಎಂ ಮೋದಿ ಪ್ರತಿಕ್ರಿಯೆ

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರ ಪೀಠ, ಜುಲೈ 13 ರಂದು ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯು ಸಂವಿಧಾನದ 352 ನೇ ವಿಧಿ ಅಡಿಯಲ್ಲಿ ತುರ್ತು ಪರಿಸ್ಥಿತಿ ಘೋಷಣೆಗೆ ವಿರುದ್ಧವಾಗಿಲ್ಲ ಎಂದು ಹೇಳಿದೆ.

ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಅಧಿಸೂಚನೆಯು ಸಂವಿಧಾನವನ್ನು ಉಲ್ಲಂಘಿಸುವುದಿಲ್ಲ ಅಥವಾ ಅಗೌರವಗೊಳಿಸುವುದಿಲ್ಲ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!