AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಎಎಸ್ ಕೋಚಿಂಗ್ ಸೆಂಟರ್​​ನಲ್ಲಿ 3 ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣ; ನಾಲ್ವರಿಗೆ ಜಾಮೀನು

ಯಾವುದೇ ಕೋಚಿಂಗ್ ಸೆಂಟರ್ ಮಂಜೂರಾತಿ ಇಲ್ಲದೆ ನಡೆಯದಂತೆ ನೋಡಿಕೊಳ್ಳಲು ಹಾಗೂ ಕೇಂದ್ರಗಳು ನಡೆಯಬೇಕಾದ ಸ್ಥಳವನ್ನು ಗುರುತಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೈಕೋರ್ಟ್ ಸೂಚಿಸಿದೆ. ಅದೇ ವೇಳೆ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠವು ಸಹ ಮಾಲೀಕರಿಗೆ ₹ 5 ಕೋಟಿ ಮೊತ್ತವನ್ನು ರೆಡ್‌ಕ್ರಾಸ್‌ಗೆ ಠೇವಣಿ ಮಾಡುವಂತೆ ಸೂಚಿಸಿದೆ.

ಐಎಎಸ್ ಕೋಚಿಂಗ್ ಸೆಂಟರ್​​ನಲ್ಲಿ 3 ಆಕಾಂಕ್ಷಿಗಳು ಸಾವಿಗೀಡಾದ ಪ್ರಕರಣ; ನಾಲ್ವರಿಗೆ ಜಾಮೀನು
ರಾವೂಸ್ ಐಎಎಸ್ ಕೋಚಿಂಗ್ ಸೆಂಟರ್
ರಶ್ಮಿ ಕಲ್ಲಕಟ್ಟ
|

Updated on: Sep 13, 2024 | 5:46 PM

Share

ದೆಹಲಿ ಸೆಪ್ಟೆಂಬರ್ 13: ಮೂವರು ಐಎಎಸ್ ಆಕಾಂಕ್ಷಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಓಲ್ಡ್ ರಾಜಿಂದರ್ ನಗರದ ಕೋಚಿಂಗ್ ಸೆಂಟರ್ ಬೇಸ್‌ಮೆಂಟ್‌ನ ನಾಲ್ವರು ಸಹ ಮಾಲೀಕರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರ ಪೀಠವು ಸಹ ಮಾಲೀಕರಿಗೆ ₹ 5 ಕೋಟಿ ಮೊತ್ತವನ್ನು ರೆಡ್‌ಕ್ರಾಸ್‌ಗೆ ಠೇವಣಿ ಮಾಡುವಂತೆ ಸೂಚಿಸಿದೆ. ಅವರು ನೆಲಮಾಳಿಗೆಯನ್ನು ಬಿಟ್ಟುಕೊಟ್ಟು ದುರಾಸೆಯ ಕೃತ್ಯ ಎಸಗಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಯಾವುದೇ ಕೋಚಿಂಗ್ ಸೆಂಟರ್ ಮಂಜೂರಾತಿ ಇಲ್ಲದೆ ನಡೆಯದಂತೆ ನೋಡಿಕೊಳ್ಳಲು ಹಾಗೂ ಕೇಂದ್ರಗಳು ನಡೆಯಬೇಕಾದ ಸ್ಥಳವನ್ನು ಗುರುತಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಸಮಿತಿಯನ್ನು ರಚಿಸುವಂತೆ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಹೈಕೋರ್ಟ್ ಸೂಚಿಸಿದೆ.

ಜುಲೈ 27 ರಂದು ಮಧ್ಯ ದೆಹಲಿಯ ಓಲ್ಡ್ ರಾಜಿಂದರ್ ನಗರದಲ್ಲಿ ಭಾರೀ ಮಳೆಯಿಂದಾಗಿ ರಾವೂಸ್ ಐಎಎಸ್ ಸ್ಟಡಿ ಸರ್ಕಲ್ ವಸತಿ ಕಟ್ಟಡದ ನೆಲಮಾಳಿಗೆಯಲ್ಲಿ ನೀರು ತುಂಬಿದ್ದರಿಂದ ಉತ್ತರ ಪ್ರದೇಶದ ಶ್ರೇಯಾ ಯಾದವ್ (25), ತೆಲಂಗಾಣದ ತಾನ್ಯಾ ಸೋನಿ (25) ಮತ್ತು ಕೇರಳದ ನೆವಿನ್ ಡೆಲ್ವಿನ್ (24) ಸಾವಿಗೀಡಾಗಿದ್ದರು.

ಬೇಸ್‌ಮೆಂಟ್‌ನ ಸಹ-ಮಾಲೀಕರಾದ ಪರ್ವಿಂದರ್ ಸಿಂಗ್, ತಜೀಂದರ್ ಸಿಂಗ್, ಹರ್ವಿಂದರ್ ಸಿಂಗ್ ಮತ್ತು ಸರಬ್ಜಿತ್ ಸಿಂಗ್ ಅವರು ಕೇವಲ ಬೇಸ್‌ಮೆಂಟ್‌ನ ಭೂಮಾಲೀಕರು ಮತ್ತು ಕೋಚಿಂಗ್ ಸೆಂಟರ್‌ಗೆ ಬಾಡಿಗೆ ಆಧಾರದ ಮೇಲೆ ಬಿಡಲಾಗಿದೆ ಎಂಬ ಆಧಾರದ ಮೇಲೆ ಜಾಮೀನು ಕೋರಿದರು. ಈ ಘಟನೆಯಲ್ಲಿ ಅವರು ಯಾವುದೇ ಪಾತ್ರವನ್ನು ಹೊಂದಿಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಆರೋಪಿಗಳ ಜಾಮೀನು ಅರ್ಜಿಯನ್ನು ಸಿಬಿಐ ವಿರೋಧಿಸಿತ್ತು. ತನಿಖೆಯು ಆರಂಭಿಕ ಹಂತದಲ್ಲಿದೆ ಮತ್ತು ಸ್ವತಂತ್ರ ಸಾಕ್ಷಿಗಳನ್ನು ಪರೀಕ್ಷಿಸುವವರೆಗೆ ನಾಲ್ವರಿಗೆ ಜಾಮೀನುನೀಡಬಾರದು ಎಂದು ವಾದಿಸಿತ್ತು.  ಘಟನೆ ನಡೆದ ಜುಲೈ 27ರಂದು ನೀರು ಹರಿಯಲು ಕಾರಣ ತಿಳಿಸುವಂತೆ ಗುರುವಾರ ಹೈಕೋರ್ಟ್ ಸಿಬಿಐಗೆ ಸೂಚಿಸಿತ್ತು.

ಇದನ್ನೂ ಓದಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ರಲ್ಲಿ ಕ್ಷಮೆಯಾಚಿಸಿದ ತಮಿಳುನಾಡಿನ ಹೋಟೆಲ್ ಮಾಲೀಕ, ಏನಿದು ಪ್ರಕರಣ?

ದೆಹಲಿಯಲ್ಲಿ ಮಳೆಯಾಗಿದೆ, ಆ ದಿನವೇಕೆ ಇಷ್ಟು ನೀರು? ಇದು ಮಳೆಯೇ ಅಥವಾ ಇನ್ನೇನಾದರೂ ಇದೆಯೇ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರು ನಾಲ್ವರು ಸಹ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೇಳಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​