AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NSE ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್

ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ ಸಂಬಂಧಿಸಿದಂತೆ ಎನ್‌ಎಸ್‌ಇ ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

NSE ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣಗೆ ಜಾಮೀನು ಮಂಜೂರು ಮಾಡಿದ ದೆಹಲಿ ಹೈಕೋರ್ಟ್
Chitra Ramakrishna
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2023 | 11:35 AM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ಹಗರಣಕ್ಕೆ (Money laundering scam) ಸಂಬಂಧಿಸಿದಂತೆ ಎನ್‌ಎಸ್‌ಇ ಮಾಜಿ ಅಧ್ಯಕ್ಷೆ ಚಿತ್ರಾ ರಾಮಕೃಷ್ಣ (Chitra Ramakrishna) ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅಕ್ರಮ ಫೋನ್ ಕದ್ದಾಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ ಮಾಜಿ ಸಿಇಒ ಚಿತ್ರಾ ರಾಮಕೃಷ್ಣ ಅವರಿಗೆ ದೆಹಲಿ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ. ಚಿತ್ರಾ ರಾಮಕೃಷ್ಣ ಅವರು ಈಗಾಗಲೇ ಫೋನ್ ಕದ್ದಾಲಿಕೆ ಆರೋಪದ ಮೇಲೆ ಸಿಬಿಐ ಪ್ರಕರಣದಲ್ಲಿ ಜಾಮೀನಿನ ಮೇಲೆ ಇದ್ದಾರೆ.

ಜಾಮೀನು ಅರ್ಜಿಯನ್ನು ಪರಿಶೀಲನೆ ಮಾಡಲಾಗಿದ್ದು. ಅರ್ಜಿದಾರರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಹೇಳಿದರು. ಎನ್‌ಎಸ್‌ಇ ಸಹ-ಸ್ಥಳ ಹಗರಣದಲ್ಲಿ ಸಿಬಿಐನಿಂದ ಈ ಹಿಂದೆ ಬಂಧಿಸಲ್ಪಟ್ಟಿದ್ದ ಮಾಜಿ ಎನ್‌ಎಸ್‌ಇ ವ್ಯವಸ್ಥಾಪಕ ನಿರ್ದೇಶಕರನ್ನು ಪ್ರಸ್ತುತ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಕಳೆದ ವರ್ಷ ಜುಲೈ 14 ರಂದು ಬಂಧಿಸಿತ್ತು. ಸಿಬಿಐ ಪ್ರಕರಣದಲ್ಲಿ ಆಕೆಗೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಇದನ್ನೂ ಓದಿ: Chitra Ramakrishna: ಅಪರಿಚಿತ ಯೋಗಿ ಇಶಾರೆಯಂತೆ 3 ವರ್ಷ ಎನ್​ಎಸ್​ಇ ಮುನ್ನಡೆಸಿದ ಮಾಜಿ ಸಿಇಒ ಚಿತ್ರಾ ವಿಚಿತ್ರ ಸ್ಟೋರಿ

ಜಾರಿ ನಿರ್ದೇಶನಾಲಯ (ED) ಪ್ರಸ್ತುತ ಪ್ರಕರಣದಲ್ಲಿ ಆಕೆಯ ಜಾಮೀನು ಅರ್ಜಿಯನ್ನು ವಿರೋಧಿಸಿದ್ದು, ಚಿತ್ರಾ ರಾಮಕೃಷ್ಣ ಈ ಪ್ರಕರಣದ ಮುಖ್ಯ ಸಾಕ್ಷಿಯಾಗಿದ್ದಾರೆ, ಜೊತೆಗೆ ಅವರ ಬಗ್ಗೆ ಇರುವ ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಹೇಳಿತ್ತು. E.D (ಜಾರಿ ನಿರ್ದೇಶನಾಲಯ) ಪ್ರಕಾರ, ಫೋನ್ ಟ್ಯಾಪಿಂಗ್ ಪ್ರಕರಣವು 2009 ರಿಂದ 2017 ರ ಅವಧಿಗೆ ಸಂಬಂಧಿಸಿದ್ದು, ಮಾಜಿ ಎನ್‌ಎಸ್‌ಇ ಸಿಇಒ ರವಿ ನಾರಾಯಣ್, ರಾಮಕೃಷ್ಣ, ಕಾರ್ಯನಿರ್ವಾಹಕ ಉಪಾಧ್ಯಕ್ಷ ರವಿ ವಾರಣಾಸಿ ಮತ್ತು ಮುಖ್ಯಸ್ಥ (ಆವರಣ) ಮಹೇಶ್ ಹಲ್ದಿಪುರ್, ಇತರರು ಎನ್‌ಎಸ್‌ಇ ಮತ್ತು ಅದರ ಉದ್ಯೋಗಿಗಳನ್ನು ವಂಚಿಸಲು ಸಂಚು ರೂಪಿಸಿದ್ದರು. ಈ ಉದ್ದೇಶಕ್ಕಾಗಿ, ಎನ್‌ಎಸ್‌ಇಯ ಸೈಬರ್ ದೌರ್ಬಲ್ಯಗಳ ಆವರ್ತಕ ಅಧ್ಯಯನ ಮಾಡುವ ನೆಪದಲ್ಲಿ ಎನ್‌ಎಸ್‌ಇ ಉದ್ಯೋಗಿಗಳ ಫೋನ್ ಕರೆಗಳನ್ನು ಅಕ್ರಮವಾಗಿ ತಡೆಹಿಡಿಯಲು iSEC ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ತೊಡಗಿಸಿಕೊಂಡಿತ್ತು.

ಜಾಮೀನು ಕೋರಿ ಚಿತ್ರಾ ರಾಮಕೃಷ್ಣ ಅವರು ತಮ್ಮ ವಿರುದ್ಧ ಯಾವುದೇ ನಿಗದಿತ ಅಪರಾಧವನ್ನು ಮಾಡಲಾಗಿಲ್ಲ ಮತ್ತು ಆರೋಪಗಳು ಮನಿ ಲಾಂಡರಿಂಗ್ ತಡೆ ಕಾಯ್ದೆಯ ಕಠಿಣತೆಯೊಳಗೆ ಬರುವುದಿಲ್ಲ ಎಂದು ವಾದಿಸಿದ್ದರು. ಚಿತ್ರಾ ರಾಮಕೃಷ್ಣ ಅವರು 2009 ರಲ್ಲಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ  (MD) NSE ಆಗಿ ನೇಮಕಗೊಂಡರು ಮತ್ತು ಮಾರ್ಚ್ 31, 2013 ರವರೆಗೆ ಆ ಹುದ್ದೆಯಲ್ಲಿ ಮುಂದುವರಿಯುತ್ತಾರೆ. ನಂತರ ಏಪ್ರಿಲ್ 1, 2013 ರಂದು MD ಮತ್ತು CEO ಆಗಿ ಭರ್ತಿ ಪಡೆಯುತ್ತಾರೆ. NSE ನಲ್ಲಿ ಅವರ ಅಧಿಕಾರಾವಧಿಯು ಡಿಸೆಂಬರ್ 2016 ರಲ್ಲಿ ಕೊನೆಗೊಂಡಿತು.

Published On - 11:02 am, Thu, 9 February 23

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು