AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ

Ramdev on Allopathy: ಅಲೋಪಥಿ ಪದ್ಧತಿ ಮತ್ತು ಅಲೋಪಥಿ ವೈದ್ಯರ ವಿರುದ್ಧ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೈಕೋರ್ಟ್ ಯೋಗಗುರು ಬಾಬಾ ರಾಮದೇವ್​ಗೆ ಇಂದು ನೋಟಿಸ್ ನೀಡಿದೆ.

Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ
ಯೋಗಗುರು ಬಾಬಾ ರಾಮ್​ದೇವ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 30, 2021 | 2:50 PM

Share

ನವದೆಹಲಿ: ಅಲೋಪಥಿ ವೈದ್ಯ ಪದ್ಧತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿವಾದಕ್ಕೀಡಾಗಿದ್ದ ಯೋಗಗುರು ಬಾಬಾ ರಾಮದೇವ್ (Swami Ramdev) ಅವರಿಗೆ ದೆಹಲಿ ಹೈಕೋರ್ಟ್ (Delhi High court) ನೋಟಿಸ್ ಜಾರಿಗೊಳಿಸಿದೆ. ಕೊರೋನಾಗೆ ಅಲೋಪಥಿ (Allopathy) ಔಷಧಗಳನ್ನು ತೆಗೆದುಕೊಂಡ ಲಕ್ಷಾಂತರ ಜನರು ಈಗಾಗಲೇ ಸಾವನ್ನಪ್ಪಿದ್ದಾರೆ. ಅಲೋಪಥಿಯೊಂದು ಅವಿವೇಕದ ವಿಜ್ಞಾನ ಎಂದು ಹೇಳಿಕೆ ನೀಡಿದ್ದಕ್ಕೆ ಬಾಬಾ ರಾಮದೇವ್ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಅನೇಕ ರಾಜ್ಯಗಳಲ್ಲಿ ಬಾಬಾ ರಾಮದೇವ್ ವಿರುದ್ಧ ಕೇಸ್​ಗಳು ಕೂಡ ದಾಖಲಾಗಿದ್ದವು.

ಅಸಂಬದ್ಧ ಹೇಳಿಕೆಗಳನ್ನು ನೀಡಿ ಜನರಲ್ಲಿ ಅಲೋಪಥಿ ಬಗ್ಗೆ ಭಯ ಹುಟ್ಟಿಸುತ್ತಿರುವ ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಹಲವು ವೈದ್ಯರು ದೇಶದ ನಾನಾ ಭಾಗಗಳಲ್ಲಿ ರಾಮದೇವ್ ವಿರುದ್ಧ ದೂರು ದಾಖಲಿಸಿದ್ದರು.

ಬಾಬಾ ರಾಮದೇವ್ ಅಲೋಪಥಿ ಕುರಿತು ನೀಡಿದ ಹೇಳಿಕೆ ಅವೈಜ್ಞಾನಿಕವಾಗಿದೆ ಎಂದು ಹೇಳಿದ್ದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಆ ಹೇಳಿಕೆಯನ್ನು ವಾಪಾಸ್ ಪಡೆಯುವಂತೆ ಬಾಬಾ ರಾಮದೇವ್​ಗೆ ಪತ್ರ ಬರೆದಿದ್ದರು. ತಮ್ಮ ಹೇಳಿಕೆ ವಿವಾದಕ್ಕೀಡಾದ ಬಳಿಕ ಎಚ್ಚೆತ್ತುಕೊಂಡಿದ್ದ ಬಾಬಾ ರಾಮದೇವ್ ಮೇ ತಿಂಗಳಲ್ಲಿ ಕ್ಷಮಾಪಣೆಯನ್ನೂ ಕೇಳಿದ್ದರು. ಹಾಗೇ, ವೈದ್ಯರು ಭೂಲೋಕದ ದೇವದೂತರು. ನಾನು ಕೂಡ ಕೊರೋನಾ ಲಸಿಕೆ ಪಡೆಯುತ್ತೇನೆ ಎಂದು ಹೇಳಿಕೆ ನೀಡಿ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದ್ದರು.

ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಯೋಗಗುರು ಬಾಬಾ ರಾಮದೇವ್​ಗೆ ಇಂದು ನೋಟಿಸ್ ಜಾರಿ ಮಾಡಿದೆ. ಅಲೋಪಥಿ ಪದ್ಧತಿ ಮತ್ತು ಅಲೋಪಥಿ ವೈದ್ಯರ ವಿರುದ್ಧ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಆಗಸ್ಟ್ 10ರಂದು ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

ಅಲೋಪತಿ ವಿರುದ್ಧ ಹೇಳಿಕೆ: ಜುಲೈ 12ಕ್ಕೆ ಬಾಬಾ ರಾಮ್​​ದೇವ್ ಮನವಿ ಆಲಿಸಲಿದೆ ಸುಪ್ರೀಂಕೋರ್ಟ್

(Swami Ramdev: Delhi High Court issues notice to Baba Ramdev over his Controversial Statement on allopathy)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ