AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ

Ramdev on Allopathy: ಅಲೋಪಥಿ ಪದ್ಧತಿ ಮತ್ತು ಅಲೋಪಥಿ ವೈದ್ಯರ ವಿರುದ್ಧ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೈಕೋರ್ಟ್ ಯೋಗಗುರು ಬಾಬಾ ರಾಮದೇವ್​ಗೆ ಇಂದು ನೋಟಿಸ್ ನೀಡಿದೆ.

Swami Ramdev: ಅಲೋಪಥಿ ಬಗ್ಗೆ ವಿವಾದಿತ ಹೇಳಿಕೆ; ದೆಹಲಿ ಹೈಕೋರ್ಟ್​ನಿಂದ ಬಾಬಾ ರಾಮ್​ದೇವ್​ಗೆ ನೋಟಿಸ್ ಜಾರಿ
ಯೋಗಗುರು ಬಾಬಾ ರಾಮ್​ದೇವ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jul 30, 2021 | 2:50 PM

Share

ನವದೆಹಲಿ: ಅಲೋಪಥಿ ವೈದ್ಯ ಪದ್ಧತಿಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ವಿವಾದಕ್ಕೀಡಾಗಿದ್ದ ಯೋಗಗುರು ಬಾಬಾ ರಾಮದೇವ್ (Swami Ramdev) ಅವರಿಗೆ ದೆಹಲಿ ಹೈಕೋರ್ಟ್ (Delhi High court) ನೋಟಿಸ್ ಜಾರಿಗೊಳಿಸಿದೆ. ಕೊರೋನಾಗೆ ಅಲೋಪಥಿ (Allopathy) ಔಷಧಗಳನ್ನು ತೆಗೆದುಕೊಂಡ ಲಕ್ಷಾಂತರ ಜನರು ಈಗಾಗಲೇ ಸಾವನ್ನಪ್ಪಿದ್ದಾರೆ. ಅಲೋಪಥಿಯೊಂದು ಅವಿವೇಕದ ವಿಜ್ಞಾನ ಎಂದು ಹೇಳಿಕೆ ನೀಡಿದ್ದಕ್ಕೆ ಬಾಬಾ ರಾಮದೇವ್ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಅನೇಕ ರಾಜ್ಯಗಳಲ್ಲಿ ಬಾಬಾ ರಾಮದೇವ್ ವಿರುದ್ಧ ಕೇಸ್​ಗಳು ಕೂಡ ದಾಖಲಾಗಿದ್ದವು.

ಅಸಂಬದ್ಧ ಹೇಳಿಕೆಗಳನ್ನು ನೀಡಿ ಜನರಲ್ಲಿ ಅಲೋಪಥಿ ಬಗ್ಗೆ ಭಯ ಹುಟ್ಟಿಸುತ್ತಿರುವ ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿತ್ತು. ಹಲವು ವೈದ್ಯರು ದೇಶದ ನಾನಾ ಭಾಗಗಳಲ್ಲಿ ರಾಮದೇವ್ ವಿರುದ್ಧ ದೂರು ದಾಖಲಿಸಿದ್ದರು.

ಬಾಬಾ ರಾಮದೇವ್ ಅಲೋಪಥಿ ಕುರಿತು ನೀಡಿದ ಹೇಳಿಕೆ ಅವೈಜ್ಞಾನಿಕವಾಗಿದೆ ಎಂದು ಹೇಳಿದ್ದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಆ ಹೇಳಿಕೆಯನ್ನು ವಾಪಾಸ್ ಪಡೆಯುವಂತೆ ಬಾಬಾ ರಾಮದೇವ್​ಗೆ ಪತ್ರ ಬರೆದಿದ್ದರು. ತಮ್ಮ ಹೇಳಿಕೆ ವಿವಾದಕ್ಕೀಡಾದ ಬಳಿಕ ಎಚ್ಚೆತ್ತುಕೊಂಡಿದ್ದ ಬಾಬಾ ರಾಮದೇವ್ ಮೇ ತಿಂಗಳಲ್ಲಿ ಕ್ಷಮಾಪಣೆಯನ್ನೂ ಕೇಳಿದ್ದರು. ಹಾಗೇ, ವೈದ್ಯರು ಭೂಲೋಕದ ದೇವದೂತರು. ನಾನು ಕೂಡ ಕೊರೋನಾ ಲಸಿಕೆ ಪಡೆಯುತ್ತೇನೆ ಎಂದು ಹೇಳಿಕೆ ನೀಡಿ ತಮ್ಮ ತಪ್ಪನ್ನು ತಿದ್ದಿಕೊಳ್ಳಲು ಮುಂದಾಗಿದ್ದರು.

ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಯೋಗಗುರು ಬಾಬಾ ರಾಮದೇವ್​ಗೆ ಇಂದು ನೋಟಿಸ್ ಜಾರಿ ಮಾಡಿದೆ. ಅಲೋಪಥಿ ಪದ್ಧತಿ ಮತ್ತು ಅಲೋಪಥಿ ವೈದ್ಯರ ವಿರುದ್ಧ ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಆಗಸ್ಟ್ 10ರಂದು ಈ ಕುರಿತು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇದನ್ನೂ ಓದಿ: Ramdev ವೈದ್ಯರು ಭೂಮಿಯ ಮೇಲಿನ ದೇವದೂತರು, ಕೊವಿಡ್ ಲಸಿಕೆ ತೆಗೆದುಕೊಳ್ಳುವೆ: ಬಾಬಾ ರಾಮ್‌ದೇವ್

ಅಲೋಪತಿ ವಿರುದ್ಧ ಹೇಳಿಕೆ: ಜುಲೈ 12ಕ್ಕೆ ಬಾಬಾ ರಾಮ್​​ದೇವ್ ಮನವಿ ಆಲಿಸಲಿದೆ ಸುಪ್ರೀಂಕೋರ್ಟ್

(Swami Ramdev: Delhi High Court issues notice to Baba Ramdev over his Controversial Statement on allopathy)

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ