AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramdev: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​

Ramdev stupid science statement: ಇದಕ್ಕೂ ಮುನ್ನ ದೆಹಲಿ ವೈದ್ಯಕೀಯ ಒಕ್ಕೂಟವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೋವಿಡ್​ ಸಾಂಕ್ರಾಮಿಕ ರೋಗದ ಕಾಲದಲ್ಲಿ ವೈದ್ಯಲೋಕ ಅಹಿರ್ನಿಷಿ ದುಡಿಯುತ್ತಿದೆ. ಈ ಉದಾತ್ತ ಸೇವೆಯ ವೇಳೆ ಅನೇಕ ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ವೈದ್ಯಲೋಕವನ್ನು ಅಪಮಾನಿಸುತ್ತಿರುವ ರಾಮದೇವ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತ್ತು.

Ramdev: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​
ಯೋಗಗುರು ಬಾಬಾ ರಾಮ್​ದೇವ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Jun 03, 2021 | 4:47 PM

Share

ನವದೆಹಲಿ: ಅಲೋಪತಿ ವೈದ್ಯವನ್ನು ಸ್ಟುಪಿಡ್​ ಅಂದಿದ್ದ ಯೋಗ ಗುರು, ಪತಂಜಲಿ ಬಾಬಾ ರಾಮದೇವ್​​ಗೆ ದೆಹಲಿ ಹೈಕೋರ್ಟ್​ ಸಮನ್ಸ್​ ನೀಡಿದೆ. ಪತಂಜಲಿಯ ಕೊರೊನಿಲ್​ (Patanjali Coronil) ಔಷಧದ ವಿರುದ್ಧ ದೆಹಲಿ ವೈದ್ಯಕೀಯ ಒಕ್ಕೂಟ (Delhi Medical Association -DMA) ಸಲ್ಲಿಸಿದ್ದ ದೂರು ಅಂಗೀಕರಿಸಿದ ದೆಹಲಿ ಹೈಕೋರ್ಟ್ ಸಮನ್ಸ್​ ಜಾರಿ ಮಾಡಿದೆ. ಜೊತೆಗೆ ಮುಂದಿನ ವಿಚಾರಣೆ ಜುಲೈ 13ಕ್ಕೆ ನಿಗದಿಯಾಗಿದ್ದು, ಅಲ್ಲಿಯವರೆಗೂ ಪತಂಜಲಿಯ ಕೊರೊನಿಲ್ ಬಗ್ಗೆ ರಾಮದೇವ್ ಯಾವುದೇ ಪ್ರಚೋದನಕಾರಿ ಹೇಳಿಕೆ ನೀಡದಂತೆ ಅವರ ವಕೀಲರ ಮೂಲಕ ಸೂಚನೆ ನೀಡಿದೆ.

ಪತಂಜಲಿಯ ಕೊರೊನಿಲ್​ ಔಷಧವು ಕೊರೊನಾ ವೈರಸ್​​ ರೋಗಕ್ಕೆ (Covid-19) ರಾಮಬಾಣ ಅಂತೆಲ್ಲ ತಪ್ಪು ತಪ್ಪು ಮಾಹಿತಿ ನೀಡಿ, ಯೋಗ ಗುರು ರಾಮದೇವ್ ಪ್ರಚಾರ ಮಾಡುತ್ತಿದ್ದಾರೆ ಎಂದು ದೆಹಲಿ ವೈದ್ಯಕೀಯ ಒಕ್ಕೂಟ ತನ್ನ ದೂರಿನಲ್ಲಿ ಹೈಕೋರ್ಟ್​ ಗಮನ ಸೆಳೆದಿದೆ.

ಯೋಗ ಗುರು ರಾಮದೇವ್ ಅಲೋಪತಿ ವೈದ್ಯವನ್ನು ಸ್ಟುಪಿಡ್​ (stupid science) ಅಂದಿದ್ದಾರೆ. ಅಲ್ಲದೆ ಅಲೋಪತಿ ವೈದ್ಯರನ್ನು ಅವಹೇಳನ ಮಾಡುತ್ತಿದ್ದಾರೆ. ವಿಜ್ಞಾನ ಮತ್ತು ವೈದ್ಯರ ಬಗ್ಗೆ ಸಾರ್ವಜನಿಕವಾಗಿ ಹಾನಿಕಾರಕ ಮಾತುಗಳನ್ನಾಡುತ್ತಿದ್ದಾರೆ. ಹಾಗಾಗಿ ಇದು ವೈದ್ಯರ ನಾಗರಿಕ ಹಕ್ಕುಗಳನ್ನು ಕಾಪಾಡಿಕೊಳ್ಳುವ ಸಲುವಾಗಿ ಈ ದೂರು ದಾಖಲಿಸಿದ್ದೇವೆ ಎಂದು DMA ವಕೀಲ ರಾಜೀವ್ ದತ್ತಾ ತಿಳಿಸಿದ್ದಾರೆ.

ಇದಕ್ಕೂ ಮುನ್ನ ದೆಹಲಿ ವೈದ್ಯಕೀಯ ಒಕ್ಕೂಟವು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಕೋವಿಡ್​ ಸಾಂಕ್ರಾಮಿಕ ರೋಗದ ಕಾಲದಲ್ಲಿ ವೈದ್ಯಲೋಕ ಅಹಿರ್ನಿಷಿ ದುಡಿಯುತ್ತಿದೆ. ಈ ಉದಾತ್ತ ಸೇವೆಯ ವೇಳೆ ಅನೇಕ ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಹಾಗಾಗಿ ವೈದ್ಯಲೋಕವನ್ನು ಅಪಮಾನಿಸುತ್ತಿರುವ ರಾಮದೇವ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿತ್ತು.

ಕೇಂದ್ರ ಆರೋಗ್ಯ ಸಚಿವ ಹರ್ಷ ವರ್ಧನ್​ ಅವರು ಇದಕ್ಕೆ ಪ್ರತಿಕ್ರಿಯೆಯಾಗಿ ರಾಮದೇವ್ ಗೆ ಪತ್ರ ಬರೆದು ತಮ್ಮ ಮಾತುಗಳು ನಿಜಕ್ಕೂ ದುರದೃಷ್ಟಕರ ಎಂದು ಬಣ್ಣಿಸಿದ್ದರು. ಆರೋಗ್ಯ ಸಚಿವ ಹರ್ಷ ವರ್ಧನ್​ ಪತ್ರಕ್ಕೆ ಪ್ರತಿಕ್ರಿಯಿಸಿದ ರಾಮದೇವ್ ತಮ್ಮ ಮಾತುಗಳನ್ನು ವಾಪಸ್​ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದರು.

(Delhi high court issues summons to baba Ramdev over Patanjali Coronil and his stupid science statement)

ಅಲೋಪಥಿಕ್​ ವೈದ್ಯಕೀಯ ಪದ್ಧತಿಗೆ ಅಗೌರವ ತೋರಿದ ಆರೋಪ; ಬಾಬಾ ರಾಮ್​ದೇವ್​ ವಿರುದ್ಧ ಎಫ್​ಐಆರ್​

Published On - 4:45 pm, Thu, 3 June 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ