AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

​ ಬಿ.ವಿ.ಶ್ರೀನಿವಾಸ್​, ಬಿಜೆಪಿ ಎಂಪಿ ಗೌತಮ್​ ಗಂಭೀರ್​ಗೆ ಕ್ಲೀನ್​ಚಿಟ್​ ಕೊಟ್ಟ ದೆಹಲಿ ಪೊಲೀಸರ ಬಗ್ಗೆ ಹೈಕೋರ್ಟ್ ಅಸಮಾಧಾನ; ಹೆಚ್ಚಿನ ತನಿಖೆಗೆ ಸೂಚನೆ

ದೆಹಲಿ ಪೊಲೀಸರು ನೀಡಿದ ಈ ವರದಿ ತೃಪ್ತಿದಾಯಕವಾಗಿಲ್ಲ ಎಂದು ನ್ಯಾಯಾಧೀಶರಾದ ವಿಪಿನ್​ ಸಂಘಿ ಮತ್ತು ಜಸ್ಮೀತ್​ ಸಿಂಗ್​ ಅವರನ್ನೊಳಗೊಂಡ ಪೀಠ ಹೇಳಿದೆ. ಈ ವಿಚಾರದಲ್ಲಿ ಇನ್ನಷ್ಟು ತನಿಖೆ ಅಗತ್ಯವಿದೆ ಎಂದೂ ತಿಳಿಸಿದೆ.

​ ಬಿ.ವಿ.ಶ್ರೀನಿವಾಸ್​, ಬಿಜೆಪಿ ಎಂಪಿ ಗೌತಮ್​ ಗಂಭೀರ್​ಗೆ ಕ್ಲೀನ್​ಚಿಟ್​ ಕೊಟ್ಟ ದೆಹಲಿ ಪೊಲೀಸರ ಬಗ್ಗೆ ಹೈಕೋರ್ಟ್ ಅಸಮಾಧಾನ; ಹೆಚ್ಚಿನ ತನಿಖೆಗೆ ಸೂಚನೆ
ದೆಹಲಿ ಹೈಕೋರ್ಟ್
Lakshmi Hegde
|

Updated on: May 17, 2021 | 5:59 PM

Share

ದೆಹಲಿ: ಯುತ್​ ಕಾಂಗ್ರೆಸ್​ ಬಿ.ವಿ.ಶ್ರೀನಿವಾಸ್​, ಬಿಜೆಪಿ ಎಂಪಿ ಗೌತಮ್​ ಗಂಭೀರ್ ಮತ್ತಿತರಿಗೆ ಕ್ಲೀನ್​ಚಿಟ್​ ಕೊಟ್ಟ ದೆಹಲಿ ಪೊಲೀಸರ ವರದಿ ತೃಪ್ತಿ ತಂದಿಲ್ಲ ಎಂದು ದೆಹಲಿ ಹೈಕೋರ್ಟ್​ ತಿಳಿಸಿದೆ. ಶ್ರೀನಿವಾಸ್​, ಗೌತಮ್​ ಗಂಭೀರ್ ಸೇರಿ ಹಲವು ರಾಜಕಾರಣಿಗಳು ದೆಹಲಿಯಲ್ಲಿ ಮೆಡಿಕಲ್​ ಮಾಫಿಯಾ ನಡೆಸುತ್ತಿದ್ದಾರೆ. ಆಕ್ಸಿಜನ್​, ಕೊವಿಡ್​ 19 ಔಷಧ ಮತ್ತಿತರ ವಸ್ತುಗಳನ್ನು ಬ್ಲ್ಯಾಕ್​ ಮಾರ್ಕೆಟ್​ನಲ್ಲಿ ಮಾರಾಟ ಮಾಡುವ ದಂಧೆ ನಡೆಸುತ್ತಿದ್ದು, ಈ ಮೂಲಕ ಹಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಡಾ.ದೀಪಕ್​ ಎಂಬುವರು ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದ ಕೋರ್ಟ್ ದೆಹಲಿ ಪೊಲೀಸರ ಬಳಿಯೂ ವರದಿ ಕೇಳಿತ್ತು. ಅದಕ್ಕೆ ಪ್ರತಿಕ್ರಿಯೆ ನೀಡಿದ್ದ ದೆಹಲಿ ಪೊಲೀಸ್​ ಕ್ರೈಂ ಬ್ರ್ಯಾಂಚ್​, ಶ್ರೀನಿವಾಸ್ ಸೇರಿ ಹಲವು ರಾಜಕಾರಣಿಗಳ ವಿಚಾರಣೆ ನಡೆಸಿದ್ದೇವೆ. ಅವರ್ಯಾರೂ ಮೆಡಿಕಲ್​ ಮಾಫಿಯಾ ನಡೆಸುತ್ತಿಲ್ಲ. ಬದಲಿಗೆ ಸ್ವಯಂಪ್ರೇರಣೆಯಿಂದ ಕೊವಿಡ್​ 19 ರೋಗಿಗಳಿಗೆ ಸಹಾಯ ಮಾಡುತ್ತಿದ್ದಾರೆ. ಅದಕ್ಕೆ ಪ್ರತಿಯಾಗಿ ಹಣವನ್ನೂ ಪಡೆಯುತ್ತಿಲ್ಲ ಎಂಬುದು ಗೊತ್ತಾಗಿದೆ. ಇನ್ನು ಅವರು ವೈದ್ಯಕೀಯ ಔಷಧ, ಉಪಕರಣಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವ ದಂಧೆಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬುದಕ್ಕೆ ಸಾಕ್ಷಿಯೂ ಇಲ್ಲ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ಆದರೆ ದೆಹಲಿ ಪೊಲೀಸರು ನೀಡಿದ ಈ ವರದಿ ತೃಪ್ತಿದಾಯಕವಾಗಿಲ್ಲ ಎಂದು ನ್ಯಾಯಾಧೀಶರಾದ ವಿಪಿನ್​ ಸಂಘಿ ಮತ್ತು ಜಸ್ಮೀತ್​ ಸಿಂಗ್​ ಅವರನ್ನೊಳಗೊಂಡ ಪೀಠ ಹೇಳಿದೆ. ಈ ವಿಚಾರದಲ್ಲಿ ಇನ್ನಷ್ಟು ತನಿಖೆ ಅಗತ್ಯವಿದೆ ಎಂದೂ ತಿಳಿಸಿದೆ. ಕಾಳಸಂತೆಯಲ್ಲಿ ವೈದ್ಯಕೀಯ ಉಪಕರಣಗಳು, ಔಷಧಗಳ ಮಾರಾಟ ಅಪರಾಧ. ಯಾರೋ ರಾಜಕೀಯ ವ್ಯಕ್ತಿಗಳು ಇದರಲ್ಲಿ ಇದ್ದ ಮಾತ್ರಕ್ಕೆ ಅದನ್ನು ತನಿಖೆ ನಡೆಸದೆ ಇರಬಾರದು ಎಂದೂ ಹೇಳಿದೆ. ಇನ್ನಷ್ಟು ತನಿಖೆ ಮಾಡಿ, ಮೇ 24ರೊಳಗೆ ಸಂಪೂರ್ಣ ಸ್ಥಿತಿಗತಿಯ ವರದಿ ಸಲ್ಲಿಸಬೇಕು ಎಂದು ದೆಹಲಿ ಪೊಲೀಸರಿಗೆ ಸೂಚಿಸಿದೆ.

ಇದನ್ನೂ ಓದಿ: ಕೊವಿಶೀಲ್ಡ್ ಲಸಿಕೆ ಪಡೆದ ಬಳಿಕ ಈ ಸಮಸ್ಯೆಗಳು ಕಂಡುಬಂದರೆ ಎಚ್ಚರವಹಿಸಿ; ಕೇಂದ್ರ ಆರೋಗ್ಯ ಇಲಾಖೆ ಸೂಚನೆ

ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ