AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Marital rape verdict ವೈವಾಹಿಕ ಅತ್ಯಾಚಾರ; ಭಿನ್ನ ನಿಲುವಿನ ತೀರ್ಪು ಕೊಟ್ಟ ದೆಹಲಿ ಹೈಕೋರ್ಟ್

ವೈವಾಹಿಕ ಅತ್ಯಾಚಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಎಂದು ನ್ಯಾಯಮೂರ್ತಿ ರಾಜೀವ್ ಶಕ್ಧರ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಆದರೆ ನ್ಯಾಯಮೂರ್ತಿ ಸಿ.ಹರಿಶಂಕರ್ ಅವರು ಸೆಕ್ಷನ್ 376 ಬಿ ಮತ್ತು 198 ಬಿ ವಿಧಿಗಳ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ.

Marital rape verdict ವೈವಾಹಿಕ ಅತ್ಯಾಚಾರ; ಭಿನ್ನ ನಿಲುವಿನ ತೀರ್ಪು ಕೊಟ್ಟ ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್
TV9 Web
| Edited By: |

Updated on:May 11, 2022 | 3:51 PM

Share

ದೆಹಲಿ: ವೈವಾಹಿಕ ಅತ್ಯಾಚಾರವನ್ನು(marital rape) ಅಪರಾಧ ಎಂದು ಪರಿಗಣಿಸಬೇಕೆಂದು ವಿನಂತಿಸಿ ಸಲ್ಲಿಸಿರುವ ಅರ್ಜಿಗಳ ಕುರಿತು ಅಂತಿಮ ತೀರ್ಪನ್ನು ದೆಹಲಿ ಹೈಕೋರ್ಟ್ (Delhi High Court) ಬುಧವಾರ ನೀಡಿದೆ. ನ್ಯಾಯಮೂರ್ತಿ ರಾಜೀವ್ ಶಕ್ಧರ್ ಮತ್ತು ನ್ಯಾಯಮೂರ್ತಿ ಹರಿಶಂಕರ್ ಅವರಿದ್ದ ದ್ವಿ ಸದಸ್ಯ ನ್ಯಾಯಪೀಠವು ಭಿನ್ನ ನಿಲುವಿನ ತೀರ್ಪು (Split Verdict) ನೀಡಿದ್ದು, ಸುಪ್ರೀಂಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆಯೆಂದು ಸ್ಪಷ್ಟಪಡಿಸಿದೆ. ವೈವಾಹಿಕ ಅತ್ಯಾಚಾರವು ಸಂವಿಧಾನದ ಆಶಯಗಳ ಉಲ್ಲಂಘನೆ ಎಂದು ನ್ಯಾಯಮೂರ್ತಿ ರಾಜೀವ್ ಶಕ್ಧರ್ ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ. ಆದರೆ ನ್ಯಾಯಮೂರ್ತಿ ಸಿ.ಹರಿಶಂಕರ್ ಅವರು ಸೆಕ್ಷನ್ 376 ಬಿ ಮತ್ತು 198 ಬಿ ವಿಧಿಗಳ ಸಾಂವಿಧಾನಿಕ ಸಿಂಧುತ್ವವನ್ನು ಎತ್ತಿಹಿಡಿದಿದ್ದಾರೆ. ಆದಾಗ್ಯೂ ಈ ವಿಷಯವು ಕಾನೂನಿನ ಗಣನೀಯ ಪ್ರಶ್ನೆಗಳನ್ನು ಒಳಗೊಂಡಿರುವುದರಿಂದ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಇಬ್ಬರೂ ನ್ಯಾಯಾಧೀಶರು ಒಪ್ಪಿಕೊಂಡರು. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್‌ಗೊಳಿಸುವಂತೆ ಕೋರುವ ಅರ್ಜಿಗಳು 2015 ಮತ್ತು 2017 ರಿಂದ ನ್ಯಾಯಾಲಯದ ಮುಂದೆ ಬಾಕಿ ಉಳಿದಿವೆ. ಆರ್​​ಐಟಿ ಫೌಂಡೇಶನ್ ಮತ್ತು ಆಲ್ ಇಂಡಿಯಾ ಡೆಮಾಕ್ರಟಿಕ್ ವುಮೆನ್ಸ್ ಅಸೋಸಿಯೇಷನ್ ನ್ಯಾಯಾಲಯದ ಮುಂದೆ ಪ್ರಮುಖ ಅರ್ಜಿದಾರರಾಗಿದ್ದರು.

ಅರ್ಜಿಗಳಿಗೆ ಹೊಸದಾಗಿ ಪ್ರತಿಕ್ರಿಯಿಸಲು ಹೆಚ್ಚಿನ ಸಮಯ ನೀಡುವಂತೆ ಕೇಂದ್ರದ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯವು ಪ್ರಕರಣದ ತೀರ್ಪನ್ನು ಫೆಬ್ರವರಿ 21 ರಂದು ಕಾಯ್ದಿರಿಸಿತ್ತು.

ಈ ವರ್ಷ ಪ್ರಕರಣದಲ್ಲಿ ಯಾವುದೇ ಮೌಖಿಕ ವಾದಗಳನ್ನು ಮಾಡದ ಕೇಂದ್ರವು 2017 ರ ಲಿಖಿತ ನಿಲುವನ್ನು ಅಂತಿಮವಾಗಿ ಪರಿಗಣಿಸಬಾರದು ಎಂದು ನ್ಯಾಯಾಲಯಕ್ಕೆ ತಿಳಿಸಿದ್ದು, ಈ ವಿಷಯದ ಬಗ್ಗೆ ಮಧ್ಯಸ್ಥಗಾರರೊಂದಿಗೆ ಮೊದಲು ಸಮಾಲೋಚನೆ ನಡೆಸಲು ಬಯಸಿದೆ. ಆದಾಗ್ಯೂ, ವಿಭಾಗೀಯ ಪೀಠವು “ವಿಷಯವನ್ನು ಹೀಗೆ ಸ್ಥಗಿತಗೊಳಿಸಲು ಬಿಡುವುದಿಲ್ಲ” ಎಂದು ಹೇಳಿದ್ದು  ಸಮಾಲೋಚನೆ ಪ್ರಕ್ರಿಯೆಯು ಮುಂದುವರಿಸಬಹುದು ಎಂದು ಸರ್ಕಾರಕ್ಕೆ ಹೇಳಿದೆ.

ಇದನ್ನೂ ಓದಿ
Image
ವೈವಾಹಿಕ ಅತ್ಯಾಚಾರವನ್ನು ಅಪರಾಧೀಕರಿಸುವ ಬಗ್ಗೆ ನಿಲುವು ಸ್ಪಷ್ಟಪಡಿಸಲು ಕಾಲಾವಕಾಶ ಕೇಳಿದ ಕೇಂದ್ರ; ದೆಹಲಿ ಹೈಕೋರ್ಟ್ ನಿರಾಕರಣೆ

ಫೆಬ್ರವರಿ 7 ರಂದು ನ್ಯಾಯಾಲಯವು 2015 ರಿಂದ ಬಾಕಿ ಉಳಿದಿರುವ ಈ ವಿಷಯದಲ್ಲಿ ತನ್ನ ನಿಲುವನ್ನು ಸ್ಪಷ್ಟಪಡಿಸಲು ಕೇಂದ್ರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿತ್ತು. ಸರ್ಕಾರವು 2017 ರಲ್ಲಿ ಅರ್ಜಿಗಳಿಗೆ ಪ್ರತ್ಯುತ್ತರ ನೀಡಿವಿರೋಧಿಸಿದ್ದರೂ, ರಾಜ್ಯಗಳು ಮತ್ತು ಇತರ ಮಧ್ಯಸ್ಥಗಾರರೊಂದಿಗಿನ ವಿಷಯದ ಕುರಿತು ಅದರ ಸಮಾಲೋಚನೆಯ ಫಲಿತಾಂಶಕ್ಕಾಗಿ ಕಾಯಲು ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಜನವರಿಯಲ್ಲಿ ನ್ಯಾಯಾಲಯವನ್ನು ಕೇಳಿದೆ. ಸಮಾಲೋಚನೆ ನಡೆಸಿದ ನಂತರ ನ್ಯಾಯಾಲಯದ ಮುಂದೆ ಹೊಸ ನಿಲುವನ್ನು ದಾಖಲಿಸಲು ಬಯಸುವುದಾಗಿ ಸರ್ಕಾರ ಹೇಳಿತ್ತು. ಜನವರಿ 7 ಮತ್ತು ಫೆಬ್ರವರಿ 21,23ರ ನಡುವೆ ನ್ಯಾಯಾಲಯವು ಐಪಿಸಿಯ ಸೆಕ್ಷನ್ 376 ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆಯಿಂದ ತಮ್ಮ ಹೆಂಡತಿಯರೊಂದಿಗೆ ಸಮ್ಮತಿಯಿಲ್ಲದ ಬಲವಂತದ ಸಂಭೋಗ ನಡೆಸುವ ಪುರುಷರನ್ನು ರಕ್ಷಿಸುವ ವಿನಾಯಿತಿ  ಪ್ರಶ್ನಿಸುವ ಅರ್ಜಿಗಳನ್ನು ಆಲಿಸಿತ್ತು.

Published On - 2:54 pm, Wed, 11 May 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ