AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. 'ಫೇಸ್‌ಬೇಕ್' ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು...

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್
ಫೇಸ್​​ಬುಕ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 13, 2022 | 1:11 PM

Share

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ (Facebook) ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಸಿಹಿತಿನಿಸು ಅಂಗಡಿ ʼಫೇಸ್‌ಬೇಕ್‌ʼಗೆ (FaceBake) ದೆಹಲಿ ಹೈಕೋರ್ಟ್ (Delhi Court) ಶಾಶ್ವತ ನಿರ್ಬಂಧ ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮ ದೈತ್ಯ ಸಂಸ್ಥೆ ಮೆಟಾ ಈ ಅಂಗಡಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಫೇಸ್ ಬುಕ್ ಖ್ಯಾತ ಟ್ರೇಡ್ ಮಾರ್ಕ್. ಇದರ ರೀತಿಯಲ್ಲೇ ನೌಫೆಲ್ ಮಲೊಲ್ ಎಂಬವರು ತಮ್ಮ ಅಂಗಡಿಗೆ ಫೇಸ್ ಬೇಕ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಅವರು ಈ ಹೆಸರಿನ ಲಾಭ ಪಡೆದುಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. ‘ಫೇಸ್‌ಬೇಕ್’ ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು ಜಾರಿಗೊಳಿಸಿದ ನಂತರ, ಪ್ರತಿವಾದಿಯು ‘ಫೇಸ್‌ಕೇಕ್’ ಎಂದು ಗುರುತು ಬದಲಾಯಿಸಿ ಮೊಕದ್ದಮೆಯನ್ನು ಸಮರ್ಥಿಸದಿರಲು ನಿರ್ಧರಿಸಿದರು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ದೆಹಲಿ ನ್ಯಾಯಾಲಯವು ಪ್ರತಿವಾದಿಯ ವಾದವನ್ನೂ ಆಲಿಸಿ ಫೇಸ್‌ಬುಕ್‌ ಹೋಲುವ ಯಾವುದೇ ಹೆಸರು ಬಳಸದಂತೆ ನಿರ್ಬಂಧಿಸಿದೆ. ಅದೇ ವೇಳೆ ಈ ಪದವನ್ನು ಡೊಮೇನ್ ಹೆಸರಾಗಿ ಅಥವಾ ಇಮೇಲ್ ವಿಳಾಸವಾಗಿ ಬಳಸುವಂತಿಲ್ಲ. ಫೇಸ್ ಬುಕ್​​ನ್ನೇ ಹೋಲುವ ಯಾವುದೇ ದೃಶ್ಯ ಪ್ರಸ್ತುತ ಅಥವಾ ಯಾವುದೇ ಉತ್ಪನ್ನಗಳನ್ನು ನಿರ್ಬಂಧಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಪ್ರತಿವಾದಿಗೆ 50,000 ದಂಡವನ್ನೂ ವಿಧಿಸಿದೆ.

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು