AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. 'ಫೇಸ್‌ಬೇಕ್' ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು...

ಫೇಸ್‌ಬುಕ್​​​ ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಫೇಸ್‌ಬೇಕ್​​​ಗೆ ಶಾಶ್ವತ ನಿರ್ಬಂಧ ವಿಧಿಸಿದ ದೆಹಲಿ ಹೈಕೋರ್ಟ್
ಫೇಸ್​​ಬುಕ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 13, 2022 | 1:11 PM

Share

ಸಾಮಾಜಿಕ ಜಾಲತಾಣ ಫೇಸ್‌ಬುಕ್‌ (Facebook) ಹೋಲುವ ಯಾವುದೇ ಹೆಸರು ಬಳಸದಂತೆ ಬೆಂಗಳೂರು ಮೂಲದ ಸಿಹಿತಿನಿಸು ಅಂಗಡಿ ʼಫೇಸ್‌ಬೇಕ್‌ʼಗೆ (FaceBake) ದೆಹಲಿ ಹೈಕೋರ್ಟ್ (Delhi Court) ಶಾಶ್ವತ ನಿರ್ಬಂಧ ವಿಧಿಸಿದೆ ಎಂದು ಪಿಟಿಐ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮ ದೈತ್ಯ ಸಂಸ್ಥೆ ಮೆಟಾ ಈ ಅಂಗಡಿ ವಿರುದ್ಧ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನವೀನ್ ಚಾವ್ಲಾ ಫೇಸ್ ಬುಕ್ ಖ್ಯಾತ ಟ್ರೇಡ್ ಮಾರ್ಕ್. ಇದರ ರೀತಿಯಲ್ಲೇ ನೌಫೆಲ್ ಮಲೊಲ್ ಎಂಬವರು ತಮ್ಮ ಅಂಗಡಿಗೆ ಫೇಸ್ ಬೇಕ್ ಎಂದು ಹೆಸರಿಟ್ಟಿದ್ದಾರೆ. ಈ ಮೂಲಕ ಅವರು ಈ ಹೆಸರಿನ ಲಾಭ ಪಡೆದುಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

ಫೇಸ್​​ಬುಕ್​​ಗೆ ಹೋಲುವ ಈ ಹೆಸರು ಬಳಸಿರುವುದರಿಂದ ಬಳಕೆದಾರರು ಫಿರ್ಯಾದಿಯೊಂದಿಗೆ ಕೆಲವು ರೀತಿಯ ಸಂಪರ್ಕವನ್ನು ಹೊಂದಿದೆ ಎಂದು ತೋರಿಸಬಹುದು. ‘ಫೇಸ್‌ಬೇಕ್’ ಬಳಕೆಯ ವಿರುದ್ಧ ಮಧ್ಯಂತರ ತಡೆಯಾಜ್ಞೆಯನ್ನು ಜಾರಿಗೊಳಿಸಿದ ನಂತರ, ಪ್ರತಿವಾದಿಯು ‘ಫೇಸ್‌ಕೇಕ್’ ಎಂದು ಗುರುತು ಬದಲಾಯಿಸಿ ಮೊಕದ್ದಮೆಯನ್ನು ಸಮರ್ಥಿಸದಿರಲು ನಿರ್ಧರಿಸಿದರು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ದೆಹಲಿ ನ್ಯಾಯಾಲಯವು ಪ್ರತಿವಾದಿಯ ವಾದವನ್ನೂ ಆಲಿಸಿ ಫೇಸ್‌ಬುಕ್‌ ಹೋಲುವ ಯಾವುದೇ ಹೆಸರು ಬಳಸದಂತೆ ನಿರ್ಬಂಧಿಸಿದೆ. ಅದೇ ವೇಳೆ ಈ ಪದವನ್ನು ಡೊಮೇನ್ ಹೆಸರಾಗಿ ಅಥವಾ ಇಮೇಲ್ ವಿಳಾಸವಾಗಿ ಬಳಸುವಂತಿಲ್ಲ. ಫೇಸ್ ಬುಕ್​​ನ್ನೇ ಹೋಲುವ ಯಾವುದೇ ದೃಶ್ಯ ಪ್ರಸ್ತುತ ಅಥವಾ ಯಾವುದೇ ಉತ್ಪನ್ನಗಳನ್ನು ನಿರ್ಬಂಧಿಸಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ನ್ಯಾಯಾಲಯವು ಪ್ರತಿವಾದಿಗೆ 50,000 ದಂಡವನ್ನೂ ವಿಧಿಸಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ