AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಣೆ

ಜನವರಿ 1, 2023 ರವರೆಗೆ ನಗರದಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಸೆಪ್ಟೆಂಬರ್‌ನಲ್ಲಿ ಹೊರಡಿಸಿದ ಆದೇಶವನ್ನು...

ಪಟಾಕಿ ನಿಷೇಧ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಗೆ ದೆಹಲಿ ಹೈಕೋರ್ಟ್ ನಿರಾಕರಣೆ
ದೆಹಲಿ ಹೈಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 20, 2022 | 4:31 PM

Share

ದೆಹಲಿಯಲ್ಲಿ (Delhi) ಪಟಾಕಿ (Fire Crackers) ಮಾರಾಟ ಮತ್ತು ಖರೀದಿಯ ಮೇಲಿನ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ (Delhi High Court) ಗುರುವಾರ ನಿರಾಕರಿಸಿದೆ. ಹಸಿರು ಪಟಾಕಿ ತಯಾರಿಸುವ ಪಟಾಕಿ ತಯಾರಿಕಾ ಕಂಪನಿ ಈ ಅರ್ಜಿ ಸಲ್ಲಿಸಿತ್ತು. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಹೈಕೋರ್ಟ್ ಪೀಠವು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು, “ಈ ಅರ್ಜಿಯನ್ನು ಪರಿಗಣಿಸಲು ಒಲವು ಹೊಂದಿಲ್ಲ” ಎಂದು ಹೇಳಿದೆ. ಜನವರಿ 1, 2023 ರವರೆಗೆ ನಗರದಲ್ಲಿ ಪಟಾಕಿ ತಯಾರಿಕೆ, ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಸೆಪ್ಟೆಂಬರ್‌ನಲ್ಲಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಲು ಅರ್ಜಿಯಲ್ಲಿ ಕೋರಲಾಗಿದೆ. ಕಳೆದ ಎರಡು ವರ್ಷಗಳಿಂದ ಇದೇ ರೀತಿಯನ್ನು ಅನುಸರಿಸಲಾಗುತ್ತಿದೆ. ಆದರೆ, ಇದೇ ವಿಷಯದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಇದೇ ರೀತಿಯ ಅರ್ಜಿ ವಿಚಾರಣೆಗೆ ಬಾಕಿ ಇರುವ ಕಾರಣ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಏತನ್ಮಧ್ಯೆ, ದೆಹಲಿಯಲ್ಲಿ ಪಟಾಕಿಗಳನ್ನು ತಯಾರಿಸುವುದು, ಸಂಗ್ರಹಿಸುವುದು, ಮಾರಾಟ ಮಾಡಿದರೆ  5,000 ರೂಪಾಯಿಗಳವರೆಗೆ ದಂಡ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್ 9 ಬಿ ಅಡಿಯಲ್ಲಿ ಮೂರು ವರ್ಷಗಳ ಜೈಲು  ಶಿಕ್ಷೆ ವಿಧಿಸಲಾಗುತ್ತದೆ ಎಂದು ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ. ದೆಹಲಿಯಲ್ಲಿ ದೀಪಾವಳಿಯಂದು ಪಟಾಕಿ ಸಿಡಿಸಿದರೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 200 ರೂಪಾಯಿ ದಂಡ ವಿಧಿಸಲಾಗುವುದು ಎಂದು ರೈ ಹೇಳಿದ್ದಾರೆ.

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ