AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ವರ್ಷಗಳ ತೆರಿಗೆ ಮರು ಮೌಲ್ಯಮಾಪನದ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ತೆರಿಗೆ ಇಲಾಖೆಯ ಪರವಾಗಿ ಜೊಹೆಬ್ ಹೊಸೈನ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಮಾರ್ಚ್ 20 ರಂದು ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

3 ವರ್ಷಗಳ ತೆರಿಗೆ ಮರು ಮೌಲ್ಯಮಾಪನದ ವಿರುದ್ಧ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Mar 22, 2024 | 8:00 PM

Share

ದೆಹಲಿ ಮಾರ್ಚ್ 22: ಆದಾಯ ತೆರಿಗೆ ಇಲಾಖೆಯು 2014 ರಿಂದ 2017 ರವರೆಗೆ ಸತತ ಮೂರು ವರ್ಷಗಳ ಕಾಲ ಕಾಂಗ್ರೆಸ್ (Congress) ವಿರುದ್ಧ ಆರಂಭಿಸಿರುವ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ (Delhi High Court) ಶುಕ್ರವಾರ ತಿರಸ್ಕರಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೇಂದ್ರ ಕುಮಾರ್ ಕೌರವ್ ಅವರ ಪೀಠ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನು ಸಿಂಘ್ವಿ ಮತ್ತು ತೆರಿಗೆ ಇಲಾಖೆಯ ಪರವಾಗಿ ಜೊಹೆಬ್ ಹೊಸೈನ್ ಅವರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಮಾರ್ಚ್ 20 ರಂದು ಈ ವಿಷಯದಲ್ಲಿ ತನ್ನ ಆದೇಶವನ್ನು ಕಾಯ್ದಿರಿಸಿತ್ತು.

ಮರು-ಮೌಲ್ಯಮಾಪನ ಪ್ರಕ್ರಿಯೆಗಳನ್ನು ಕಾಂಗ್ರೆಸ್ ವಿರೋಧಿಸಿದ್ದು, ತೆರಿಗೆ ಇಲಾಖೆಯು “ಮಿತಿಯಿಂದ ನಿರ್ಬಂಧಿಸಲ್ಪಟ್ಟಿದೆ” ಎಂದು ಹೇಳಿದೆ. ಆದರೆ ತೆರಿಗೆ ಇಲಾಖೆಯು ತೆರಿಗೆ ಪ್ರಾಧಿಕಾರದಿಂದ ಯಾವುದೇ ಶಾಸನಬದ್ಧ ನಿಬಂಧನೆಗಳ ಉಲ್ಲಂಘನೆಯಾಗಿಲ್ಲ ಎಂದು ಹೇಳಿದೆ. ವಶಪಡಿಸಿಕೊಂಡ ವಸ್ತುಗಳ ಪ್ರಕಾರ, ಕಾಂಗ್ರೆಸ್‌ನ ‘ಮರೆಯಾಗಿಟ್ಟ ‘ ಆದಾಯ 520 ಕೋಟಿ ರೂ. ಈ ತಿಂಗಳ ಆರಂಭದಲ್ಲಿ, ದೆಹಲಿ ಹೈಕೋರ್ಟ್ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಆದೇಶವನ್ನು ಎತ್ತಿಹಿಡಿದಿದೆ. 100 ಕೋಟಿ ರೂ.ಗಿಂತ ಹೆಚ್ಚಿನ ಬಾಕಿ ವಸೂಲಿಗಾಗಿ ತೆರಿಗೆ ಇಲಾಖೆಯ ನೋಟಿಸ್‌ಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್‌ನ ಅರ್ಜಿಯನ್ನು ತಿರಸ್ಕರಿಸಿತು.

ಈ ಆದೇಶದಲ್ಲಿ ಮಧ್ಯಪ್ರವೇಶಿಸಲು ನಮಗೆ ಯಾವುದೇ ಆಧಾರವಿಲ್ಲ ಎಂದು ನ್ಯಾಯಮೂರ್ತಿ ಯಶವಂತ್ ವರ್ಮಾ ಮತ್ತು ನ್ಯಾಯಮೂರ್ತಿ ಪುರುಷೇಂದ್ರ ಕುಮಾರ್ ಕೌರವ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಹೇಳಿದೆ.

ರಾಜಕೀಯ ಸೇಡು ಎಂದ ಕಾಂಗ್ರೆಸ್

ಗುರುವಾರ ಸುದ್ದಿಗೋಷ್ಠಿಯಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಆಡಳಿತಾರೂಢ ಬಿಜಿಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಪಕ್ಷವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿದರು.”ಭಾರತದ ಶೇಕಡಾ 20 ರಷ್ಟು ಜನರು ನಮಗೆ ಮತ ಹಾಕುತ್ತಾರೆ. ನಾವು ಯಾವುದಕ್ಕೂ ಎರಡು ರೂಪಾಯಿ ಪಾವತಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ನಮ್ಮನ್ನು ದುರ್ಬಲಗೊಳಿಸಲು ಸಂಚು ರೂಪಿಸಲಾಗಿದೆ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಒಡಿಶಾದಲ್ಲಿ ಬಿಜೆಡಿ ಜೊತೆ ಮೈತ್ರಿ ಇಲ್ಲ, ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಬಿಜೆಪಿ ನಿರ್ಧಾರ

“ನಾವು ಯಾವುದೇ ಪ್ರಚಾರ ಕಾರ್ಯವನ್ನು ಮಾಡಲು ಸಾಧ್ಯವಿಲ್ಲ. ನಮ್ಮ ನಾಯಕರು ದೇಶದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ವಿಮಾನಯಾನ ಮಾಡಲು ಸಾಧ್ಯವಿಲ್ಲ. ವಿಮಾನ ಹಾರಾಟ ಮರೆತುಬಿಡಿ, ಅವರು ರೈಲು ಟಿಕೆಟ್ ಖರೀದಿಸಲು ಸಹ ಸಾಧ್ಯವಿಲ್ಲ,” ಎಂದು ಗಾಂಧಿ ಅವರು ತೆರಿಗೆ ಪ್ರಕರಣದ ಬಗ್ಗೆ ಹೇಳಿದ್ದಾರೆ.

ಆದರೆ, ರಾಜಕೀಯ ಸೇಡಿನ ಆರೋಪವನ್ನು ಬಿಜೆಪಿ ತಳ್ಳಿಹಾಕಿದ್ದು, ತೆರಿಗೆ ವಂಚನೆಯಲ್ಲಿ ಕಾಂಗ್ರೆಸ್ ತಪ್ಪಿತಸ್ಥರಾಗಿದ್ದು, ಆ ಕಾರಣದಿಂದಾಗಿ ಕ್ರಮವನ್ನು ಎದುರಿಸಬೇಕಾಯಿತು ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ