AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದ ದೆಹಲಿ ಹೈಕೋರ್ಟ್​

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್​ ತಿರಸ್ಕರಿಸಿದೆ.

ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದ ದೆಹಲಿ ಹೈಕೋರ್ಟ್​
ಅರವಿಂದ್ ಕೇಜ್ರಿವಾಲ್
ನಯನಾ ರಾಜೀವ್
|

Updated on:Apr 04, 2024 | 12:46 PM

Share

ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್(Arvind Kejriwal) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾದ ಮತ್ತೊಂದು ಮನವಿಯನ್ನು ಸತತ ಮೂರನೇ ಬಾರಿಗೆ ದೆಹಲಿ ಹೈಕೋರ್ಟ್​ ತಿರಸ್ಕರಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಪ್ರಜಾಪ್ರಭುತ್ವವು ತನ್ನದೇ ಆದ ಹಾದಿಯನ್ನು ತೆಗೆದುಕೊಳ್ಳಲಿ, ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ.

ಕಳೆದ ವಾರ, ಅಬಕಾರಿ ನೀತಿ ಸಂಬಂಧಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ನ್ಯಾಯಾಲಯಕ್ಕೆ ಒಂದು ಮನವಿ ಸಲ್ಲಿಸಲಾಯಿತು.

ಸಿಎಂ ಆಗಿ ಮುಂದುವರಿಯಬೇಕೇ ಅಥವಾ ಬೇಡವೇ ಎಂಬುದು ಅವರಿಗೆ ಬಿಟ್ಟಿದ್ದು ಎಂದು ದೆಹಲಿ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ. ರಾಷ್ಟ್ರಪತಿ ಆಳ್ವಿಕೆ ಅಥವಾ ರಾಜ್ಯಪಾಲರ ಆಳ್ವಿಕೆಯನ್ನು ನ್ಯಾಯಾಲಯವು ಹೇರಿರುವ ಯಾವುದೇ ಪೂರ್ವನಿದರ್ಶನವಿದೆಯೇ? ಎಂದು ಪೀಠ ಹೇಳಿದೆ.

ಮತ್ತಷ್ಟು ಓದಿ: ಇಡಿ ಬಂಧನ ವಿರೋಧಿಸಿ ಕೇಜ್ರಿವಾಲ್ ಅರ್ಜಿ; ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ವಿಷ್ಣು ಗುಪ್ತಾ ಈ ಅರ್ಜಿ ಸಲ್ಲಿಸಿದ್ದಾರೆ. ಗುಪ್ತಾ ಬಳಿಕ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡರು ಮತ್ತು ಲೆಫ್ಟಿನೆಂಟ್ ಗವರ್ನರ್ ಮುಂದೆ ಪ್ರಸ್ತುತಿ ಮಾಡುವುದಾಗಿ ಹೇಳಿದರು.

ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ನಾವು ಹೇಗೆ ಘೋಷಿಸಬಹುದು? ಎಲ್‌ಜಿ ಅದನ್ನು ನಿರ್ಧರಿಸಲು ಸಂಪೂರ್ಣ ಸಮರ್ಥರಾಗಿದ್ದಾರೆ. ಅವರಿಗೆ ನಮ್ಮ ಮಾರ್ಗದರ್ಶನ ಅಗತ್ಯವಿಲ್ಲ. ಅವರು ಕಾನೂನಿನ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದು ನ್ಯಾಯಾಲಯ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:45 pm, Thu, 4 April 24

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್