AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಳಿಯುವ ಹಕ್ಕು ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗ: ದೆಹಲಿ ಹೈಕೋರ್ಟ್ ವ್ಯಾಖ್ಯಾನ

ದೇಶದ ಎಲ್ಲ ಪ್ರಜೆಗಳಿಗೂ ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ತಿಳಿದುಕೊಳ್ಳುವ ಹಕ್ಕು ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವೇ ಆಗಿರುತ್ತದೆ ಎಂದು ದೆಹಲಿ ಹೈಕೋರ್ಟ್​ ಹೇಳಿದೆ.

ತಿಳಿಯುವ ಹಕ್ಕು ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗ: ದೆಹಲಿ ಹೈಕೋರ್ಟ್ ವ್ಯಾಖ್ಯಾನ
ದೆಹಲಿ ಹೈಕೋರ್ಟ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Nov 12, 2021 | 8:47 AM

Share

ದೆಹಲಿ: ಬಟ್ಟೆ, ಎಲೆಕ್ಟ್ರಾನಿಕ್ ಉಪಕರಣಗಳೂ ಸೇರಿದಂತೆ ಎಲ್ಲ ಉತ್ಪನ್ನಗಳ ಮೇಲೆ ಸಸ್ಯದಿಂದ ತಯಾರಾದದ್ದು ಅಥವಾ ಪ್ರಾಣಿಜನ್ಯ ಎಂಬ ಲೇಬಲ್ ಹಚ್ಚುವ ಕುರಿತು ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಬಗ್ಗೆ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯ ತಿಳಿಸಬೇಕು ಎಂದು ದೆಹಲಿ ಹೈಕೋರ್ಟ್ (Delhi High Court)​ ಸೂಚಿಸಿದೆ. ಉತ್ಪನ್ನಗಳ ತಯಾರಿಕೆಗೆ ಬಳಸಿರುವ ವಸ್ತುಗಳನ್ನು ಆಧರಿಸಿ ಈ ರೀತಿಯ ವರ್ಗೀಕರಣ ಮಾಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ

‘ಎಲ್ಲರಿಗೂ ಅವರ ಬೇಕೆನಿಸಿದ ಮಾಹಿತಿಯನ್ನು ತಿಳಿಯುವ ಮತ್ತು ನಂಬಿಕೆಗಳನ್ನು ಅನುಸರಿಸುವ ಹಕ್ಕು ಇರುತ್ತದೆ. ಈ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಪಿನ್ ಸಂಘಿ ನೇತೃತ್ವದ ನ್ಯಾಯಪೀಠವು ಅಭಿಪ್ರಾಯಪಟ್ಟಿತು. ಈ ರಾಮ್ ಗೋ ರಕ್ಷಾ ದಳವು ಈ ಅರ್ಜಿಯನ್ನು ಸಲ್ಲಿಸಿದೆ. ಹಸುಗಳ ಯೋಗಕ್ಷೇಮಕ್ಕೆ ಈ ಟ್ರಸ್ಟ್​ ಹೆಚ್ಚು ಗಮನ ನೀಡುತ್ತದೆ. ‘ಜನರು ಕೆಲವೊಮ್ಮೆ ತಮಗೆ ಗೊತ್ತಿಲ್ಲದೆ ಕೆಲ ಪ್ರಾಣಿಜ್ಯ ಉತ್ಪನ್ನಗಳನ್ನು ಬಳಸುವ ಅಪಾಯವಿದೆ. ಹೀಗಾಗಿ ಸ್ಪಷ್ಟ ನಿರ್ದೇಶನ ಬೇಕು’ ಎಂದು ಸಸ್ಯಾಹಾರ ಬಳಕೆಯನ್ನೂ ಪ್ರೋತ್ಸಾಹಿಸುವ ಈ ಟ್ರಸ್ಟ್​ ನ್ಯಾಯಾಲಯಕ್ಕೆ ಮನವಿ ಮಾಡಿದೆ.

‘ದೇಶದ ಎಲ್ಲ ಪ್ರಜೆಗಳಿಗೂ ಸಂವಿಧಾನ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದೆ. ತಿಳಿದುಕೊಳ್ಳುವ ಹಕ್ಕು ಸಹ ಅಭಿವ್ಯಕ್ತಿ ಸ್ವಾತಂತ್ರ್ಯದ ಭಾಗವೇ ಆಗಿರುತ್ತದೆ. ಅರ್ಜಿದಾರರು ಪ್ರಸ್ತಾಪಿಸಿರುವ ವಿಷಯವು ವ್ಯಕ್ತಿಯ ಜೀವಿಸುವ ಸ್ವಾತಂತ್ರ್ಯ ಮತ್ತು ತನ್ನಿಷ್ಟದ ನಂಬಿಕೆಗಳನ್ನು ಪಾಲಿಸುವ ಸ್ವಾತಂತ್ರ್ಯವನ್ನೂ ಒಳಗೊಳ್ಳುತ್ತದೆ’ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅಭಿಪ್ರಾಯಪಟ್ಟರು. ಮೂರು ವಾರಗಳ ಒಳಗೆ ಈ ಕುರಿತು ಪ್ರತಿಕ್ರಿಯಿಸಬೇಕೆಂದು ಸೂಚಿಸಿ ಆರೋಗ್ಯ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ನಾವು ಪ್ರತಿದಿನ ಬಳಸುವ ಹಲವು ಉತ್ಪನ್ನಗಳಲ್ಲಿ ನಮಗೆ ತಿಳಿಯದೇ ಪ್ರಾಣಿಜನ್ಯ ಉತ್ಪನ್ನಗಳು ಬಳಕೆಯಾಗಿರುವ ಅಥವಾ ಮಾಂಸಾಹಾರ ಬೆರೆತ ಆಹಾರ ಬಳಸುತ್ತಿರುವ ಸಾಧ್ಯತೆಯಿದೆ. ಪ್ರಾಣಿಜನ್ಯ ವಸ್ತುಗಳನ್ನು ಬಳಸಲು ನಮ್ಮ ನಂಬಿಕೆಗಳು ಅವಕಾಶ ನೀಡುವುದಿಲ್ಲ. ಹೀಗಾಗಿ ಈ ವಿಚಾರದಲ್ಲಿ ಸ್ಪಷ್ಟತೆ ಮೂಡಲು ಸೂಕ್ತ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರಾದ ರಜತ್ ಅನೇಜಾ ಮನವಿ ಮಾಡಿದ್ದರು. ಸಕ್ಕರೆಯ ಸಂಸ್ಕರಣೆ ವೇಳೆ ಮೂಳೆಗಳ ಪುಡಿ ಬಳಸುತ್ತಿರುವ ಶಂಕೆ ಹಲವರಿಗೆ ಇದೆ. ಇದು ಹಲವರ ಧಾರ್ಮಿಕ ನಂಬಿಕೆಗಳಿಗೆ ಘಾಸಿಯುಂಟು ಮಾಡುವ ಸಂಗತಿ. ಚೀನಾದಿಂದ ಆಮದಾಗುತ್ತಿರುವ ಕ್ರೆಯಾನ್​ನಂಥ ಕೆಲ ಉತ್ಪನ್ನಗಳಲ್ಲಿ ಪ್ರಾಣಿಜನ್ಯ ವಸ್ತುಗಳು ಬಳಕೆಯಾಗಿವೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸ್ಪಷ್ಟನೆ ಬೇಕಿದೆ ಎಂದು ಅವರು ನುಡಿದರು.

‘ಈಗಾಗಲೇ ಚಾಲ್ತಿಯಲ್ಲಿರುವ ಕಾನೂನು ಮತ್ತು ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನದೊಂದಿಗೆ ಉತ್ಪನ್ನಗಳ ತಯಾರಿಕೆಗೆ ಬಳಕೆಯಾಗಿರುವ ಕಚ್ಚಾವಸ್ತುಗಳನ್ನು ಆಧರಿಸಿ ಕಡ್ಡಾಯವಾಗಿ ಹಸಿರು, ಕೆಂಪು ಮತ್ತು ಬೂದು ಬಣ್ಣದ ಲೇಬಲ್ ಅಂಟಿಸುವುದನ್ನು ಖಾತ್ರಿಪಡಿಸಿಕೊಳ್ಳಬೇಕು. ಆಹಾರ ಉತ್ಪನ್ನಗಳು, ಸೌಂದರ್ಯ ಪ್ರಸಾದನ ತಯಾರಕರು, ಸುಗಂಧ ದ್ರವ್ಯ ಮತ್ತು ಮನೆಬಳಕೆ ಉತ್ಪನ್ನಗಳು, ಆಭರಣಗಳಿಗೂ ಇಂಥ ಲೇಬಲ್​ಗಳನ್ನು ಅಂಟಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ. ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಲಾಗಿದೆ.

ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್