AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುರ್ತು ವಿಚಾರಣೆ ಇಲ್ಲ, ಮುಂದಿನ ವಾರ ಅರವಿಂದ್ ಕೇಜ್ರಿವಾಲ್ ಅರ್ಜಿ ಆಲಿಸಲಿದೆ ದೆಹಲಿ ಹೈಕೋರ್ಟ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನ ಮದ್ಯ ನೀತಿ ಪ್ರಕರಣದಲ್ಲಿ ಗುರುವಾರ ಬಂಧಿಸಲಾಯಿತು.ಮರುದಿನ ಅಂದರೆ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಅವರ ಬಂಧನದ ವಿರುದ್ಧ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು ಭಾನುವಾರದೊಳಗೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆಯೂ ಕೋರಿದ್ದರು

ತುರ್ತು ವಿಚಾರಣೆ ಇಲ್ಲ, ಮುಂದಿನ ವಾರ ಅರವಿಂದ್ ಕೇಜ್ರಿವಾಲ್ ಅರ್ಜಿ ಆಲಿಸಲಿದೆ ದೆಹಲಿ ಹೈಕೋರ್ಟ್
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on:Mar 23, 2024 | 8:58 PM

Share

ದೆಹಲಿ ಮಾರ್ಚ್ 23: ತಮ್ಮ ಬಂಧನ ಹಾಗೂ ಜಾರಿ ನಿರ್ದೇಶನಾಲಯಕ್ಕೆ (ED) ಏಳು ದಿನಗಳ ಕಾಲ ಕಸ್ಟಡಿಗೆ ನೀಡಿರುವ ಕೆಳ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮನವಿಯನ್ನು ದೆಹಲಿ ಹೈಕೋರ್ಟ್ (Delhi High Court) ತಿರಸ್ಕರಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥರನ್ನು ಮದ್ಯ ನೀತಿ ಪ್ರಕರಣದಲ್ಲಿ ಗುರುವಾರ ಬಂಧಿಸಲಾಯಿತು.ಮರುದಿನ ಅಂದರೆ ಶುಕ್ರವಾರ ರೋಸ್ ಅವೆನ್ಯೂ ನ್ಯಾಯಾಲಯವು ಅವರನ್ನು ಮಾರ್ಚ್ 28 ರವರೆಗೆ ಇಡಿ ವಶಕ್ಕೆ ನೀಡಿತು. ಅವರ ಬಂಧನದ ವಿರುದ್ಧ ಶನಿವಾರ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದು ಭಾನುವಾರದೊಳಗೆ ಪ್ರಕರಣದ ತುರ್ತು ವಿಚಾರಣೆ ನಡೆಸುವಂತೆಯೂ ಕೋರಿದ್ದರು.

ಆದಾಗ್ಯೂ, ಹೋಳಿಗಾಗಿ ಎರಡು ರಜಾದಿನಗಳ ನಂತರದ ಮೊದಲ ಕೆಲಸದ ದಿನವಾದ ಬುಧವಾರ ಪುನಃ ವಿಚಾರಣೆ ನಡೆಸಲಾಗುವುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ.

ಶನಿವಾರ ಸಲ್ಲಿಸಿದ ಅರ್ಜಿಯಲ್ಲಿ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ರಿಮಾಂಡ್ ಆದೇಶವನ್ನು ಕಾನೂನುಬಾಹಿರ ಎಂದು ಹೇಳಿದ್ದಾರೆ. ಎಎಪಿ ಮುಖ್ಯಸ್ಥರಿಗೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ಗುರುವಾರ ನಿರಾಕರಿಸಿದ್ದು, ಕೆಲವು ಗಂಟೆಗಳ ನಂತರ ಇಡಿ ಅವರನ್ನು ವಶಕ್ಕೆ ತೆಗೆದುಕೊಂಡಿತು. “ನಾವು ಎರಡೂ ಕಡೆಯವರನ್ನು ಕೇಳಿದ್ದೇವೆ. ನಾವು ಈ ಹಂತದಲ್ಲಿ ರಕ್ಷಣೆ ನೀಡಲು ಒಲವು ತೋರುತ್ತಿಲ್ಲ. ಪ್ರತಿವಾದಿಯು (ಇಡಿ) ಉತ್ತರವನ್ನು ಸಲ್ಲಿಸಲು ಸ್ವತಂತ್ರವಾಗಿದೆ” ಎಂದು ಇಬ್ಬರು ನ್ಯಾಯಾಧೀಶರ ಪೀಠ ಹೇಳಿತ್ತು.

ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿರುವ ಎಎಪಿ ರಾಷ್ಟ್ರೀಯ ಸಂಚಾಲಕರು ತಮ್ಮ ಬಂಧನ ಮತ್ತು ರಿಮಾಂಡ್ ಆದೇಶವನ್ನು ಪ್ರಶ್ನಿಸಿ, ಇದು  ಕಾನೂನುಬಾಹಿರ ಎಂದು ಕರೆದರು. ಕೇಜ್ರಿವಾಲ್ ಅವರು ಕಸ್ಟಡಿಯಿಂದ ತಕ್ಷಣ ಬಿಡುಗಡೆಗೆ ಅರ್ಹರಾಗಿದ್ದಾರೆ, ಭಾನುವಾರದೊಳಗೆ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶರಿಂದ ತುರ್ತು ವಿಚಾರಣೆಯನ್ನು ಕೋರಿ ಅರ್ಜಿ ಸಲ್ಲಿಸಲಾಗಿತ್ತು

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ಶುಕ್ರವಾರ ಮಾರ್ಚ್ 28 ರವರೆಗೆ 6 ದಿನಗಳ ಇಡಿ ಕಸ್ಟಡಿಗೆ ಕಳುಹಿಸಲಾಗಿದೆ. ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಗುರುವಾರ ರಾತ್ರಿ ಅವರ ನಿವಾಸದಿಂದ ಇಡಿ ಅವರನ್ನು ಬಂಧಿಸಿದೆ.

ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ಬಂಧನದ ಬಗ್ಗೆ ಜರ್ಮನಿಯ ಹೇಳಿಕೆ ‘ಅನಗತ್ಯ ಹಸ್ತಕ್ಷೇಪ’: ಕೇಂದ್ರ ಸರ್ಕಾರ

ಬಿಜೆಪಿ ಸರ್ಕಾರ ಇಡೀ ಪ್ರತಿಪಕ್ಷವನ್ನು ಜೈಲಿಗೆ ಹಾಕುವಲ್ಲಿ ನಿರತವಾಗಿದೆ:ಸೌರಭ್ ಭಾರದ್ವಾಜ್

ಎಎಪಿ ನಾಯಕ ಸೌರಭ್ ಭಾರದ್ವಾಜ್ ಅವರು ಬಿಜೆಪಿ ನೇತೃತ್ವದ ಸರ್ಕಾರದ ಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, “ಬಿಜೆಪಿ ಸರ್ಕಾರ ಇಡೀ ಪ್ರತಿಪಕ್ಷವನ್ನು ಜೈಲಿಗೆ ಹಾಕುವಲ್ಲಿ ನಿರತವಾಗಿದೆ ಎಂದು ಭಾರತ ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನರಿಗೆ ತಿಳಿದಿದೆ” ಎಂದು ಹೇಳಿದ್ದಾರೆ. ಸೌರಭ್ ಭಾರದ್ವಾಜ್ ಭಾರತದ ಪರಿಸ್ಥಿತಿಯನ್ನು ರಷ್ಯಾ, ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾದಂತಹ ದೇಶಗಳಿಗೆ ಹೋಲಿಸಿದ್ದಾರೆ. ಸೌರಭ್ ಭಾರದ್ವಾಜ್ ಪ್ರಮುಖ ವಿರೋಧ ಪಕ್ಷದ ನಾಯಕರ ಬಂಧನ ಮತ್ತು ಬೆದರಿಕೆ ತಂತ್ರಗಳನ್ನು ಎತ್ತಿ ತೋರಿಸುತ್ತಾ, “ನಮ್ಮ ಪ್ರಮುಖ 4 ನಾಯಕರು ಸುಳ್ಳು ಪ್ರಕರಣಗಳ ಅಡಿಯಲ್ಲಿ ಜೈಲಿನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 23 March 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​