AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ಸಾವಿನ ಬಳಿಕ ಖಿನ್ನತೆಗೆ ಒಳಗಾದ ಮಹಿಳೆ, ಗರ್ಭಪಾತಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್​

ಪತಿಯ ಸಾವಿನ ಬಳಿಕ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ಅಂತಾ ಸಮಯದಲ್ಲಿ ಆಕೆಯ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ವಿಧವೆಯೊಬ್ಬರು ತನ್ನ 27 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಹೈಕೋರ್ಟ್​ ಮೊರೆ ಹೋಗಿದ್ದರು, ಅಷ್ಟೇ ಅಲ್ಲದೆ ತನ್ನ ಮಾನಸಿಕ ಸ್ಥಿತಿ ಬಗ್ಗೆಯೂ ಮಾಹಿತಿ ನೀಡಿದ್ದರು. ಗಂಡನ ಸಾವಿನಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಕೋರ್ಟ್​ಗೆ ಹೇಳಲಾಗಿತ್ತು.

ಪತಿ ಸಾವಿನ ಬಳಿಕ ಖಿನ್ನತೆಗೆ ಒಳಗಾದ ಮಹಿಳೆ, ಗರ್ಭಪಾತಕ್ಕೆ ಅನುಮತಿ ನೀಡಿದ ದೆಹಲಿ ಹೈಕೋರ್ಟ್​
ನಯನಾ ರಾಜೀವ್
|

Updated on: Jan 05, 2024 | 8:45 AM

Share

ಪತಿಯ ಸಾವಿನ ಬಳಿಕ ಮಹಿಳೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರೆ ಅಂತಾ ಸಮಯದಲ್ಲಿ ಆಕೆಯ ಗರ್ಭಪಾತ ಮಾಡಿಸಿಕೊಳ್ಳಬಹುದು ಎಂದು ದೆಹಲಿ ಹೈಕೋರ್ಟ್​ ಹೇಳಿದೆ. ವಿಧವೆಯೊಬ್ಬರು ತನ್ನ 27 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಹೈಕೋರ್ಟ್​ ಮೊರೆ ಹೋಗಿದ್ದರು, ಅಷ್ಟೇ ಅಲ್ಲದೆ ತನ್ನ ಮಾನಸಿಕ ಸ್ಥಿತಿ ಬಗ್ಗೆಯೂ ಮಾಹಿತಿ ನೀಡಿದ್ದರು. ಗಂಡನ ಸಾವಿನಿಂದ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾಳೆ ಎಂದು ಕೋರ್ಟ್​ಗೆ ಹೇಳಲಾಗಿತ್ತು.

ನ್ಯಾಯಮೂರ್ತಿ ಸುಬ್ರಹ್ಮಣ್ಯಂ ಪ್ರಸಾದ್ ಅವರು ಅರ್ಜಿದಾರರ ಮನೋವೈದ್ಯಕೀಯ ಮೌಲ್ಯಮಾಪನ ಮಾಡಿ ಆಕೆಯ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಅರ್ಜಿಯನ್ನು ಅಂಗೀಕರಿಸಿದರು. ಪತಿಯ ಸಾವಿನ ಬಳಿಕ ಮಹಿಳೆ ತೀವ್ರ ಆಘಾತಕ್ಕೊಳಗಾಗಿದ್ದಾಳೆ ಎಂದು ಏಮ್ಸ್​ನ ವೈದ್ಯರು ವರದಿ ನೀಡಿದ್ದರು. ಯಾವುದೇ ಸಮಯದಲ್ಲಿ ಮಾನಸಿಕ ಸಮತೋಲನವನ್ನು ಕಳೆದುಕೊಳ್ಳುವ ಸ್ಥಿತಿ ಅರ್ಜಿದಾರರದ್ದಾಗಿದೆ. ಆಕೆ ತನಗೆ ತಾನೇ ಹಾನಿಮಾಡಿಕೊಳ್ಳುವ ಸಾಧ್ಯತೆಯೂ ಇರಲಿದೆ.

ದೆಹಲಿ ಮೂಲದ ಮಹಿಳೆಯ ಪತಿ ಇತ್ತೀಚೆಗೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅಂದಿನಿಂದ ಆಕೆ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದಳು. ವೈದ್ಯಕೀಯ ವರದಿಯೂ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತೋರಿಸಿದೆ. ಅರ್ಜಿದಾರರು ಪತಿಯನ್ನು ಕಳೆದುಕೊಂಡ ದುಃಖದಲ್ಲಿದ್ದಾರೆ. ಅರ್ಜಿದಾರರ ಸ್ಥಿತಿಯಿಂದ ಮಾನಸಿಕ ಸಮತೋಲನ ಕಳೆದುಕೊಳ್ಳುವ ಅಪಾಯವಿದೆ. ಈ ಪ್ರಕ್ರಿಯೆಯಲ್ಲಿ ಅವಳು ತನಗೆ ತಾನೇ ಹಾನಿ ಮಾಡಿಕೊಳ್ಳಬಹುದು. ಈ ಹಂತದಲ್ಲಿ ನಾವು ಅವಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿಸುತ್ತೇವೆ. ಆಕೆಯ ಗರ್ಭಾವಸ್ಥೆಯಲ್ಲಿ ಮುಂದುವರಿಯುವುದು ಅಪಾಯಕಾರಿ ಎಂದು ನಾವು ಭಾವಿಸುತ್ತೇವೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

ಅರ್ಜಿದಾರರಿಗೆ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿ ನೀಡಬೇಕು ಎಂದು ಈ ನ್ಯಾಯಾಲಯವು ಅಭಿಪ್ರಾಯಪಟ್ಟಿದೆ ಏಕೆಂದರೆ ಅರ್ಜಿದಾರರಿಗೆ ಗರ್ಭಾವಸ್ಥೆಯಲ್ಲಿ ಮುಂದುವರಿಯಲು ಅವಕಾಶ ನೀಡುವುದರಿಂದ ಅರ್ಜಿದಾರರ ಮಾನಸಿಕ ಸ್ಥಿರತೆಯನ್ನು ಕುಗ್ಗಿಸಬಹುದು ಏಕೆಂದರೆ ಖಿನ್ನತೆಯಲ್ಲಿ ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ನ್ಯಾಯಮೂರ್ತಿ ಪ್ರಸಾದ್ ತಿಳಿಸಿದ್ದಾರೆ.

ಮತ್ತಷ್ಟು ಓದಿ:12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಕೇರಳ ಹೈಕೋರ್ಟ್: ವರದಿ

ಗರ್ಭಾವಸ್ಥೆಯನ್ನು ಮುಂದುವರಿಸುವಂತೆ ಒತ್ತಾಯಿಸುವುದು ಆಕೆಯ ಖಾಸಗಿತನದ ಮೇಲಿನ ದಾಳಿಯಾಗಿದೆ ಎಂದು ಆಕೆಯ ವಕೀಲರು ವಾದಿಸಿದ್ದರು. ಆಕೆಗೆ ಆತ್ಮಹತ್ಯೆ ಮಾಡಿಕೊಳ್ಳುವ ಆಲೋಚನೆಯೂ ಇತ್ತು, ತೀವ್ರ ಖಿನ್ನತೆಗೆ ಒಳಗಾಗಿದ್ದಳು ಎಂದು ವೈದ್ಯರು ತಿಳಿಸಿದ್ದಾರೆ.

ಮಹಿಳೆಯ ಪತಿ 2023ರ ಅಕ್ಟೋಬರ್ 9ರಂದು ನಿಧನರಾಗಿದ್ದಾರೆ, ಬಳಿಕ ಆಕೆ ನ್ಯಾಯಾಲಯದ ಮೆಟ್ಟಿಲೇರಿದ್ದಾಳೆ. ಅರ್ಜಿದಾರರು ಗರ್ಭಪಾತದ ಪ್ರಕ್ರಿಯೆಗೆ ಒಳಗಾಗುವ ಸ್ಥಿತಿಯಲ್ಲಿದ್ದಾರೆಯೇ ಎಂಬ ವರದಿಯನ್ನು ನೀಡುವಂತೆ ಪೀಠಕ್ಕೆ ಸೂಚಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ