AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ಹರ್ದೀಪ್ ಸಿಂಗ್​​ ಪುರಿ ಪತ್ನಿ ಲಕ್ಷ್ಮೀಪುರಿ ವಿರುದ್ಧ ಮಾಡಿರುವ ಟ್ವೀಟ್​ ಡಿಲೀಟ್ ಮಾಡಲು ಸಾಕೇತ್​ ಗೋಖಲೆಗೆ ಹೈಕೋರ್ಟ್ ಖಡಕ್​ ಸೂಚನೆ..

ಕಳೆದ ತಿಂಗಳು ಸಾಕೇತ್​ ಗೋಖಲೆ ಲಕ್ಷ್ಮೀ ಪುರಿ ವಿರುದ್ಧ ಗಂಭೀರ ಆರೋಪ ಮಾಡಿ ಟ್ವೀಟ್ ಮಾಡಿದ್ದರು. ಲಕ್ಷ್ಮೀಪುರಿ ಸ್ವಿಜರ್​ರ್ಲ್ಯಾಂಡ್​​ನಲ್ಲಿ ಆದಾಯಕ್ಕೂ ಮೀರಿ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಹೇಳಿದ್ದ ಅವರು ಲಕ್ಷ್ಮೀಪುರ ಮತ್ತು ಹರ್ದೀಪ್​ ಸಿಂಗ್​ ಪುರಿ ಆಸ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.

ಕೇಂದ್ರ ಸಚಿವ ಹರ್ದೀಪ್ ಸಿಂಗ್​​ ಪುರಿ ಪತ್ನಿ ಲಕ್ಷ್ಮೀಪುರಿ ವಿರುದ್ಧ ಮಾಡಿರುವ ಟ್ವೀಟ್​ ಡಿಲೀಟ್ ಮಾಡಲು ಸಾಕೇತ್​ ಗೋಖಲೆಗೆ ಹೈಕೋರ್ಟ್ ಖಡಕ್​ ಸೂಚನೆ..
ಸಾಕೇತ್ ಗೋಖಲೆ
TV9 Web
| Edited By: |

Updated on:Jul 13, 2021 | 12:37 PM

Share

ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ ಪತ್ನಿ, ವಿಶ್ವಸಂಸ್ಥೆಯ ಮಾಜಿ ಸಹಾಯಕ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಪುರಿ ವಿರುದ್ಧ ಮಾಡಿದ್ದ ಅಕ್ರಮ ಆಸ್ತಿ ಗಳಿಕೆ ಆರೋಪದ ಟ್ವೀಟ್​​ನ್ನು ಕೂಡಲೇ ಡಿಲೀಟ್​ ಮಾಡಬೇಕು ಎಂದು ದೆಹಲಿ ಹೈಕೋರ್ಟ್​ ಆರ್​ಟಿಐ ಕಾರ್ಯಕರ್ತ ಸಾಕೇತ್​​ ಗೋಖಲೆ ಅವರಿಗೆ ಸೂಚಿಸಿದೆ. ಅಲ್ಲದೆ, ಇನ್ನು ಮುಂದೆ ಲಕ್ಷ್ಮೀಪುರಿ ಮತ್ತು ಅವರ ಪತಿ ಹರ್ದೀಪ್​ ಸಿಂಗ್​ ಪುರಿ ವಿರುದ್ಧ ಮಾನಹಾನಿ, ಹಗರಣ ಅಥವಾ ವಾಸ್ತವದಲ್ಲಿ ತಪ್ಪಾಗಿರುವ ಯಾವುದೇ ಟ್ವೀಟ್​​ಗಳನ್ನು ಮಾಡದಂತೆ ಸಾಕೇತ್​ಗೆ ನಿರ್ಬಂಧ ಹೇರಿದೆ. ಲಕ್ಷ್ಮೀಪುರಿ ವಿರುದ್ಧ ಮಾಡಿರುವ ಟ್ವೀಟ್​​ನ್ನು 24ಗಂಟೆಯಲ್ಲಿ ಸಾಕೇತ್ ಗೋಖಲೆ ಡಿಲೀಟ್ ಮಾಡದಿದ್ದರೆ ಟ್ವಿಟರ್​ ಮುಂದಾಗಿ ಅದನ್ನು ಡಿಲೀಟ್​ ಮಾಡಬೇಕು ಮತ್ತು ಮುಂದಿನ ವಿಚಾರಣೆಯ ದಿನಾಂಕದೊಳಗೆ ಒಂದು ಅನುಸರಣಾ ದೂರನ್ನು ಕೋರ್ಟ್​ಗೆ ನೀಡಬೇಕು ಎಂದು ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಸಿ.ಹರಿಶಂಕರ್ ಟ್ವಿಟರ್​ಗೆ ಸೂಚಿಸಿದ್ದಾರೆ.​

ಸಾಕೇತ್ ಗೋಖಲೆ ಆರ್​ಟಿಐ ಕಾರ್ಯಕರ್ತ ಮತ್ತು ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಲಕ್ಷ್ಮೀಪುರಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಮಾಡಿದ್ದಾರೆ. ಸ್ವಿಜರ್​ಲ್ಯಾಂಡ್​ನಲ್ಲಿ ಬಹುಮೊತ್ತದ ಆಸ್ತಿ ಖರೀದಿಸಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ನಂತರ ತಮ್ಮ ವಿರುದ್ಧ ಗಂಭೀರ ಆರೋಪ ಮಾಡಿದ ಸಾಕೇತ್ ಗೋಖಲೆ ವಿರುದ್ಧ ಲಕ್ಷ್ಮೀ ಪುರಿ ದೆಹಲಿ ಹೈಕೋರ್ಟ್​ನಲ್ಲಿ 5 ಕೋಟಿ ರೂ.ನ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಅದರ ವಿಚಾರಣೆ ನಡೆಸಿದ್ದ ನ್ಯಾ.ಸಿ.ಹರಿಶಂಕರ್​ ತೀರ್ಪು ಕಾಯ್ದಿರಿಸಿದ್ದರು. ಹಿಂದಿನ ವಾರವೇ ಟ್ವೀಟ್​ ಡಿಲೀಟ್ ಮಾಡುವಂತೆ ಗೋಖಲೆಗೆ ಕೋರ್ಟ್ ಸೂಚಿಸಿತ್ತು. ಆದರೆ ಅದನ್ನು ನಿರಾಕರಿಸಿದ್ದರು. ಈ ಬಾರಿ ಮತ್ತೆ ಟ್ವೀಟ್​ ತೆಗೆದು ಹಾಕಲು ನ್ಯಾಯಾಧೀಶರು ಹೇಳಿದ್ದಾರೆ. ಒಂದೊಮ್ಮೆ ಸಾಕೇತ್​ ಗೋಖಲೆ 24 ಗಂಟೆಯೊಳಗೆ ಅದನ್ನು ಡಿಲೀಟ್​ ಮಾಡದೆ ಇದ್ದರೆ, ಟ್ವಿಟರ್​ ಅದನ್ನು ಡಿಲೀಟ್ ಮಾಡಿ, ಮತ್ತೆ ನ್ಯಾಯಾಲಯಕ್ಕೆ ದೂರು ಸಲ್ಲಿಸಲಿದೆ.

ಕಳೆದ ತಿಂಗಳು ಸಾಕೇತ್​ ಗೋಖಲೆ ಲಕ್ಷ್ಮೀ ಪುರಿ ವಿರುದ್ಧ ಗಂಭೀರ ಆರೋಪ ಮಾಡಿ ಟ್ವೀಟ್ ಮಾಡಿದ್ದರು. ಲಕ್ಷ್ಮೀಪುರಿ ಸ್ವಿಜರ್​ರ್ಲ್ಯಾಂಡ್​​ನಲ್ಲಿ ಆದಾಯಕ್ಕೂ ಮೀರಿ ಆಸ್ತಿ ಖರೀದಿ ಮಾಡಿದ್ದಾರೆ ಎಂದು ಹೇಳಿದ್ದ ಅವರು ಲಕ್ಷ್ಮೀಪುರ ಮತ್ತು ಹರ್ದೀಪ್​ ಸಿಂಗ್​ ಪುರಿ ಆಸ್ತಿ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಲ್ಲದೆ, ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್​ ಅವರನ್ನೂ ಟ್ಯಾಗ್​ ಮಾಡಿದ್ದರು. ಅದಕ್ಕೆ ಪ್ರತಿಯಾಗಿ ಲಕ್ಷ್ಮೀ ಪುರಿ ಹೈಕೋರ್ಟ್ ಮೆಟ್ಟಿಲೇರಿ, ಗೋಖಲೆ ವಿರುದ್ಧ 5 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನನ್ನ ವಿರುದ್ಧ ಮಾಡಲಾದ ಆರೋಪಗಳು ದುರುದ್ದೇಶದಿಂದ ಕೂಡಿದ್ದು, ಸತ್ಯವನ್ನು ತಿರುಚಲ್ಪಟ್ಟಿವೆ ಎಂದು ಹೇಳಿದ್ದರು. ಲಕ್ಷ್ಮೀ ಪುರಿ ಪರ ಹಿರಿಯ ನ್ಯಾಯವಾದಿ ಮನೀಂದರ್ ಸಿಂಗ್​ ಮತ್ತು ಸಾಕೇತ್​ ಗೋಖಲೆ ಪರ ಸರೀಮ್ ನವೇದ್​ ವಾದ ಮಂಡಿಸಿದ್ದರು.

ಇದನ್ನೂ ಓದಿ: ಕೇಂದ್ರ ಸಚಿವ ಹರ್ದೀಪ್​ ಸಿಂಗ್​ ಪುರಿ ಪತ್ನಿಯ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ ವ್ಯಕ್ತಿಗೆ ದೆಹಲಿ ಹೈಕೋರ್ಟ್​ನಿಂದ ತರಾಟೆ

Delhi Highcourt directs RTI Activist Saket Gokhale to delete tweets against Lakshmi Puri

Published On - 12:36 pm, Tue, 13 July 21

ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು