AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Hit and Run: ಮರ್ಸಿಡೀಸ್ ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು, ಚಾಲಕ ಪರಾರಿ

ಕಾರೊಂದು ವೇಗವಾಗಿ ಬಂದು ಸೈಕಲ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ. ಪೊಲೀಸರು ಸಿಸಿಟಿವಿ ಪರಿಶೀಲಿಸಿ ತನಿಖೆ ಆರಂಭಿಸಿದ್ದಾರೆ.

Delhi Hit and Run: ಮರ್ಸಿಡೀಸ್ ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರ ಸಾವು, ಚಾಲಕ ಪರಾರಿ
ಕಾರುImage Credit source: India TV
ನಯನಾ ರಾಜೀವ್
|

Updated on: Aug 18, 2024 | 10:20 AM

Share

ವೇಗವಾಗಿ ಬಂದ ಮರ್ಸಿಡೀಸ್ ಕಾರೊಂದು ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ದೆಹಲಿಯ ಆಶ್ರಮ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ರಾಜೇಶ್ ಎಂದು ಪೊಲೀಸರು ಗುರುತಿಸಿದ್ದು, ದೆಹಲಿಯ ಆಗ್ನೇಯ ಪ್ರದೇಶದಲ್ಲಿ ಸೈಕಲ್​ನಲ್ಲಿ ಹೋಗುತ್ತಿದ್ದಾಗ ಅತಿವೇಗದಿಂದ ಬಂದ ವಾಹನವು ಹಿಂದಿನಿಂದ ಡಿಕ್ಕಿ ಹೊಡೆದಿದೆ.

ದುರದೃಷ್ಟವಶಾತ್ ರಾಜೇಶ್ ಸ್ಥಳದಲ್ಲೇ ಮೃತಪಟ್ಟರೆ, ಚಾಲಕ ಕಾರಿನೊಂದಿಗೆ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫುಟ್​ಪಾತ್ ​ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಸಂಸದರ ಮಗಳ ಕಾರು ರಾಜ್ಯಸಭಾ ಸಂಸದರ ಮಗಳ ಕಾರು ಫುಟ್​ಪಾತ್​ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ಹರಿದ ಕಾರಣ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಹಿಟ್​ ಆ್ಯಂಡ್​ ರನ್ ಪ್ರಕರಣದಲ್ಲಿ ವೈಎಸ್​ಆರ್​ ಕಾಂಗ್ರೆಸ್​ ಪಕ್ಷದ ರಾಜ್ಯಸಭಾ ಸಂಸದ ಬಿಡಾ ಮಸ್ತಾನ್ ರಾವ್ ಅವರ ಪುತ್ರಿ ಹೆಸರು ಕೇಳಿಬರುತ್ತಿದೆ.

ಈ ಘಟನೆಯಲ್ಲಿ ಸೂರ್ಯ ಎನ್ನುವ 21ವರ್ಷದ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಬಳಿಕ ಕೊನೆಯುಸಿರೆಳೆದಿದ್ದಾರೆ. ಆರೋಪಿ ಮಾಧುರಿಯನ್ನು ಚೆನ್ನೈನ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ, ಆದರೆ ಶೀಘ್ರವೇ ಅವರಿಗೆ ಜಾಮೀನು ಸಿಕ್ಕಿದೆ.

ಈ ಹಿಂದೆ ಮೇ 19ರಂದು ಪುಣೆಯ ಕಲ್ಯಾಣಿನಗರದಲ್ಲಿ ಅಪ್ರಾಪ್ತ ಬಾಲಕ ವೇದಾಂತ್ ಅಗರ್ವಾಲ್ ಎಂಬಾತ ತನ್ನ ಪೋರ್ಷೆ ಕಾರನ್ನು ಬೈಕ್​ಗೆ ಡಿಕ್ಕಿ ಹೊಡೆಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದೀಗ ಆತನ ತಂದೆ, ತಾಯಿ ಹಾಗೂ ಅಜ್ಜನನ್ನು ವಿವಿಧ ಪ್ರಕರಣಗಳಲ್ಲಿ ಬಂಧಿಸಲಾಗಿದೆ. ಈ ಪ್ರಕರಣ ಇಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.

ಮತ್ತಷ್ಟು ಓದಿ: 2016ರ ಹಿಟ್​ ಆ್ಯಂಡ್ ರನ್ ಪ್ರಕರಣ: ಮೃತ ವ್ಯಕ್ತಿಯ ಕುಟುಂಬಕ್ಕೆ 1.96 ಕೋಟಿ ರೂ. ಪರಿಹಾರ

ಈ ಪ್ರಕರಣ ಏನು? ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಫುಟ್​ ಪಾತ್​ನಲ್ಲಿ ಮಲಗಿದ್ದ ವ್ಯಕ್ತಿಯನ್ನು ನುಜ್ಜುಗುಜ್ಜುಗೊಳಿಸಿತ್ತು. ಇದರಿಂದಾಗಿ ಆತ ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಮಾಧುರಿ ತಕ್ಷಣವೇ ಸ್ಥಳದಿಂದ ಓಡಿಹೋಗಿದ್ದಾರೆ ಎಂಬುದು ತಿಳಿದುಬಂದಿದೆ. ಆದರೆ ಅವರ ಸ್ನೇಹಿತರೊಬ್ಬರು ಕಾರಿನಿಂದ ಇಳಿದು ಅಪಘಾತದ ನಂತರ ಜಮಾಯಿಸಿದ ಜನರೊಂದಿಗೆ ಜಗಳವಾಡಲು ಪ್ರಾರಂಭಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?