AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: ಗಣರಾಜ್ಯೋತ್ಸವದ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮದ ಸಮೀಪವೇ ನಡೆದ ಬ್ಲಾಸ್ಟ್​

ಸ್ಫೋಟ ಸಂಭವಿಸಿದ ಕೆಲವೇ ಕಿ.ಮೀ ದೂರದಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು. ಗಣರಾಜ್ಯೋತ್ಸವದ ಸಮಾರೋಪ ಸಮಾರಂಭ ಭಾಗವಾಗಿ ನಡೆಯುತ್ತಿದ್ದ ಕಾರ್ಯಕ್ರಮದ ಕೇವಲ 1.7 ಕಿ.ಮೀ ದೂರದಲ್ಲೇ ಕೃತ್ಯ ನಡೆದಿದೆ. ದೆಹಲಿಯ ವಿಜಯ್ ​ಚೌಕ್​ನಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು.

ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: ಗಣರಾಜ್ಯೋತ್ಸವದ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮದ ಸಮೀಪವೇ ನಡೆದ ಬ್ಲಾಸ್ಟ್​
KUSHAL V
| Edited By: |

Updated on:Jan 30, 2021 | 4:54 PM

Share

ದೆಹಲಿ: ನಗರದ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸುಧಾರಿತ ಸ್ಫೋಟಕ (IED) ಬ್ಲಾಸ್ಟ್​ ಆಗಿರುವ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಭದ್ರತಾ ಲೋಪ ಸಂಭವಿಸಿದೆ ಎಂಬ ಮಾತು ಕೇಳಿಬಂದಿದೆ.

ಇದಕ್ಕೆ, ಕಾರಣ ಸ್ಫೋಟ ಸಂಭವಿಸಿದ ಕೆಲವೇ ಕಿ.ಮೀ ದೂರದಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು. ಗಣರಾಜ್ಯೋತ್ಸವದ ಸಮಾರೋಪ ಸಮಾರಂಭ ಭಾಗವಾಗಿ ನಡೆಯುತ್ತಿದ್ದ ಕಾರ್ಯಕ್ರಮದ ಕೇವಲ 1.7 ಕಿ.ಮೀ ದೂರದಲ್ಲೇ ಕೃತ್ಯ ನಡೆದಿದೆ. ದೆಹಲಿಯ ವಿಜಯ್ ​ಚೌಕ್​ನಲ್ಲಿ ಬೀಟಿಂಗ್​ ರೀಟ್ರೀಟ್​ ಕಾರ್ಯಕ್ರಮ ನಡೆಯುತ್ತಿತ್ತು.

ಜೊತೆಗೆ, ಸಮಾರಂಭದಲ್ಲಿ ರಾಷ್ಟ್ರಪತಿ ಕೋವಿಂದ್, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಸೇನೆಯ ಮೂರು ವಿಭಾಗಗಳ ಮುಖ್ಯಸ್ಥರು ಭಾಗಿಯಾಗಿದ್ದರು. ದೇಶದ ಪ್ರಮುಖ ಗಣ್ಯರಿದ್ದ ಸ್ಥಳದ ಕೆಲವೇ ಕಿ.ಮೀ ದೂರದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಭದ್ರತಾ ಲೋಪ ಎದುರಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಕರಣದ ಬಗ್ಗೆ ಮಾಹಿತಿ ಪಡೆದ ಅಮಿತ್​ ಶಾ ಇನ್ನು, ಘಟನೆಯ ಬೆನ್ನಲ್ಲೇ ಕೇಂದ್ರ ಗೃಹ‌ ಸಚಿವ ಅಮಿತ್ ಶಾ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ.ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದ ಅಮಿತ್​ ಶಾ ಗುಪ್ತಚರ ಇಲಾಖೆಯ ಅಧಿಕಾರಿಗಳ ಜೊತೆಯೂ ಚರ್ಚೆ ನಡೆಸಿದ್ದಾರೆ. ಇದಲ್ಲದೆ, ಸ್ಫೋಟದ ಬಗ್ಗೆ NIA ಮತ್ತು ದೆಹಲಿಯ ವಿಶೇಷ ತಂಡದಿಂದ ತನಿಖೆ ನಡೆಸಲಾಗುತ್ತಿದೆ.

ಈ ನಡುವೆ, ಇಸ್ರೇಲ್‌ ವಿದೇಶಾಂಗ ಸಚಿವರಿಗೆ ಭಾರತೀಯ ವಿದೇಶಾಂಗ ಇಲಾಖೆಯ ಸಚಿವ ಜೈಶಂಕರ್‌ ಕರೆಮಾಡಿ ಮಾತನಾಡಿದ್ದಾರೆ. ರಾಯಭಾರ ಕಚೇರಿ ಸಿಬ್ಬಂದಿಗೆ ಸೂಕ್ತ ಭದ್ರತೆ ನೀಡುವ ಭರವಸೆ ಸಹ ನೀಡಿದ್ದಾರೆ. ಜೈಶಂಕರ್‌ ಎಲ್ಲಾ ಸಿಬ್ಬಂದಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಭರವಸೆ ಕೊಟ್ಟಿದ್ದಾರೆ.

Blast at Embassy Of Israel In India ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ ಸ್ಫೋಟ: 5-6 ವಾಹನಗಳು ಜಖಂ

ದೆಹಲಿಯ ಇಸ್ರೇಲ್‌ ರಾಯಭಾರ ಕಚೇರಿ ಬಳಿ IED ಸ್ಫೋಟ: ವಾಹನದಲ್ಲಿ ಬಂದು ಬಾಂಬ್​ ಎಸೆದು ಹೋಗಿರುವ ಶಂಕೆ

Published On - 8:03 pm, Fri, 29 January 21

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ