AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಜಾಮಾ ಮಸೀದಿಗೆ ಪುರುಷರಿಲ್ಲದೆ ಬರುವ ಮಹಿಳೆಯರಿಗೆ ನಿಷೇಧ; ವಿವಾದಾತ್ಮಕ ಆದೇಶಕ್ಕೆ ಭಾರೀ ವಿರೋಧ

ಜಾಮಾ ಮಸೀದಿಯ ಎಲ್ಲಾ 3 ಪ್ರವೇಶ ದ್ವಾರಗಳ ಮೇಲೆ ಸೂಚನಾ ಫಲಕವನ್ನು ಹಾಕಲಾಗಿದೆ. ಅದರಲ್ಲಿ 'ಜಾಮಾ ಮಸೀದಿಗೆ ಹುಡುಗಿಯರು ಅಥವಾ ಮಹಿಳೆಯರು ಏಕಾಂಗಿಯಾಗಿ ಬರುವಂತಿಲ್ಲ' ಎಂದು ಬರೆಯಲಾಗಿದೆ.

ದೆಹಲಿಯ ಜಾಮಾ ಮಸೀದಿಗೆ ಪುರುಷರಿಲ್ಲದೆ ಬರುವ ಮಹಿಳೆಯರಿಗೆ ನಿಷೇಧ; ವಿವಾದಾತ್ಮಕ ಆದೇಶಕ್ಕೆ ಭಾರೀ ವಿರೋಧ
ಜಾಮಾ ಮಸೀದಿ
TV9 Web
| Edited By: |

Updated on: Nov 24, 2022 | 3:09 PM

Share

ನವದೆಹಲಿ: ದೆಹಲಿಯ ಜಾಮಾ ಮಸೀದಿಗೆ (Jama Masjid) ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ವಿಷಯದ ಕುರಿತು ದೆಹಲಿ ಮಹಿಳಾ ಆಯೋಗವು (Delhi Woman Commission) ಮಸೀದಿಯ ಇಮಾಮ್‌ಗೆ ನೋಟಿಸ್ ನೀಡಲು ನಿರ್ಧರಿಸಿದೆ. ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲಾ ಟ್ವೀಟ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಜಾಮಾ ಮಸೀದಿಗೆ ಮಹಿಳೆಯರ ಪ್ರವೇಶವನ್ನು ತಡೆಯುವ ನಿರ್ಧಾರ ಸಂಪೂರ್ಣವಾಗಿ ತಪ್ಪು. ಪುರುಷನಿಗೆ ಪ್ರಾರ್ಥನೆ ಮಾಡುವ ಹಕ್ಕು ಎಷ್ಟು ಇದೆಯೋ ಅಷ್ಟೇ ಹಕ್ಕು ಮಹಿಳೆಗೂ ಇದೆ. ನಾನು ಜಾಮಾ ಮಸೀದಿಯ ಇಮಾಮ್‌ಗೆ ನೋಟಿಸ್ ನೀಡುತ್ತಿದ್ದೇನೆ. ಈ ರೀತಿ ಮಹಿಳೆಯರ ಪ್ರವೇಶವನ್ನು ನಿಷೇಧಿಸುವ ಹಕ್ಕು ಯಾರಿಗೂ ಇಲ್ಲ.’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಜಾಮಾ ಮಸೀದಿಯ ಎಲ್ಲಾ 3 ಪ್ರವೇಶ ದ್ವಾರಗಳ ಮೇಲೆ ಸೂಚನಾ ಫಲಕವನ್ನು ಹಾಕಲಾಗಿದೆ. ಅದರಲ್ಲಿ ‘ಜಾಮಾ ಮಸೀದಿಗೆ ಹುಡುಗಿಯರು ಅಥವಾ ಮಹಿಳೆಯರು ಏಕಾಂಗಿಯಾಗಿ ಬರುವಂತಿಲ್ಲ’ ಎಂದು ಬರೆಯಲಾಗಿದೆ.

ಇದನ್ನೂ ಓದಿ: ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ ಮತ್ತೆ ಮುನ್ನೆಲೆಗೆ: ಹೈಕೋರ್ಟ್​​ಗೆ ಬಜರಂಗಸೇನೆ ಕಾರ್ಯಕರ್ತರಿಂದ ಪಿಐಎಲ್​ ಸಲ್ಲಿಕೆ

ಮಾಧ್ಯಮ ವರದಿಗಳ ಪ್ರಕಾರ, ಯುವತಿಯರು ತಮ್ಮ ಗೆಳೆಯರೊಂದಿಗೆ ಮಸೀದಿಗೆ ಬರುತ್ತಾರೆ ಎಂಬ ದೂರುಗಳು ಬರುತ್ತಿವೆ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಸೈಯದ್ ಅಹ್ಮದ್ ಬುಖಾರಿ ಹೇಳುತ್ತಾರೆ. ಈ ಕಾರಣಕ್ಕಾಗಿ ಅಂತಹ ಮಹಿಳೆಯರು ಒಂಟಿಯಾಗಿ ಬರುವುದಕ್ಕೆ ನಿರ್ಬಂಧ ಹೇರಲಾಗಿದೆ. ಒಂದುವೇಳೆ ಮಹಿಳೆ ಜಾಮಾ ಮಸೀದಿಗೆ ಬರಲು ಬಯಸಿದರೆ ಆಕೆ ತನ್ನ ಕುಟುಂಬ ಅಥವಾ ಪತಿಯೊಂದಿಗೆ ಮಾತ್ರ ಬರಬೇಕು ಎಂದು ಶಾಹಿ ಇಮಾಮ್ ಹೇಳಿದ್ದಾರೆ. ಆದರೆ, ನಮಾಜ್ ಮಾಡಲು ಬರುವ ಮಹಿಳೆಯನ್ನು ನಾವು ತಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಈ ಆದೇಶವನ್ನು ಖಂಡಿಸಿತ್ತು. ಇದನ್ನು ಮಹಿಳಾ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗವನ್ನು ವಿಎಚ್​ಪಿ ಒತ್ತಾಯಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ