AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ಪ್ರವೇಶ ನಿಷೇಧ: ನೋಟಿಸ್​ ಬೆನ್ನಲ್ಲೇ ವಿವಾದಾತ್ಮಕ ನಾಮಫಲಕ ತೆರವುಗೊಳಿಸಿದ ದೆಹಲಿ ಜಾಮಾ ಮಸೀದಿ

ಮಸೀದಿಯೊಳಗೆ ಮಹಿಳೆಯರಿಗೆ ಪ್ರವೇಶ ಇಲ್ಲ ಎಂದು ಹಾಕಿದ್ದ ವಿವಾದಾತ್ಮಕ ನಾಮಫಲಕವನ್ನು ದೆಹಲಿಯ ಜಾಮಾ ಮಸೀದಿ ಹಿಂಪಡೆದುಕೊಂಡಿದೆ.

ಮಹಿಳೆಯರ ಪ್ರವೇಶ ನಿಷೇಧ: ನೋಟಿಸ್​ ಬೆನ್ನಲ್ಲೇ ವಿವಾದಾತ್ಮಕ ನಾಮಫಲಕ ತೆರವುಗೊಳಿಸಿದ ದೆಹಲಿ ಜಾಮಾ ಮಸೀದಿ
ಜಾಮಾ ಮಸೀದಿ
TV9 Web
| Edited By: |

Updated on: Nov 24, 2022 | 6:59 PM

Share

ನವದೆಹಲಿ: ಮಸೀದಿಯೊಳಗೆ ಮಹಿಳೆಯರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಹಾಕಲಾಗಿದ್ದ ನಾಮಫಲಕವನ್ನು ಕೊನೆಗೂ ದೆಹಲಿಯ ಜಾಮಾ ಮಸೀದಿಯ(Delhi Jama Masjid) ಆಡಳಿತ ಮಂಡಳಿ ತೆರವುಗೊಳಿಸಿದೆ. ದೆಹಲಿ ಮಹಿಳಾ ಆಯೋಗ ನೋಟಿಸ್​ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಾಮಾ ಮಸೀದಿಯ ಆಡಳಿತ ಮಂಡಳಿ, ಮಹಿಳೆಯರಿಗೆ ಪ್ರವೇಶವಿಲ್ಲ ಎಂದು ಹಾಕಲಾಗಿದ್ದ ಬೋರ್ಡ್​ನ್ನು ತೆಗೆದುಹಾಕಿದೆ.

ದೆಹಲಿಯ ಜಾಮಾ ಮಸೀದಿಗೆ ಪುರುಷರಿಲ್ಲದೆ ಬರುವ ಮಹಿಳೆಯರಿಗೆ ನಿಷೇಧ; ವಿವಾದಾತ್ಮಕ ಆದೇಶಕ್ಕೆ ಭಾರೀ ವಿರೋಧ

ಜಾಮಾ ಮಸೀದಿಗೆ ಒಂಟಿ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಕುಟುಂಬದ ಪುರುಷ ಸದಸ್ಯರ ಜೊತೆ ಬರಬೇಕೆಂದು ಇಂದು(ನವೆಂಬರ್ 24) ದೆಹಲಿಯ ಜಾಮಾ ಮಸೀದಿ ಪ್ರವೇಶ ದ್ವಾರದಲ್ಲಿ ನಾಮಫಲಕ ಹಾಕಲಾಗಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿವಾದದ ಹೆಚ್ಚಾಗುತ್ತಿದ್ದಂತೆಯೇ ದೆಹಲಿ ಮಹಿಳಾ ಆಯೋಗ ಎಂಟ್ರಿ ಕೊಟ್ಟಿದ್ದು, ಇಂತಹ ನಿಷೇಧವನ್ನು ಹೊರಡಿಸುವ ಹಕ್ಕು ಯಾರಿಗೂ ಇಲ್ಲ ಎಂದು ಮಸೀದಿಗೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ನೋಟಿಸ್ ನೀಡಿದ್ದರು.

ಇದರಿಂದ ಕೊನೆಗೆ ಎಚ್ಚೆತ್ತುಕೊಂಡಿರುವ ದೆಹಲಿಯ ಜಾಮಾ ಮಸೀದಿಯ ಆಡಳಿತ ಮಂಡಳಿ, ಮಹಿಳೆಯರಿಗೆ ಮಸೀದಿಯೊಳಗೆ ಪ್ರವೇಶವಿಲ್ಲ ಎನ್ನುವ ನಾಮಫಲಕವನ್ನು ತೆರವುಗೊಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸಹ ಈ ಆದೇಶವನ್ನು ಖಂಡಿಸಿತ್ತು. ಇದನ್ನು ಮಹಿಳಾ ವಿರೋಧಿ ಕೃತ್ಯ ಎಂದು ಬಣ್ಣಿಸಿತ್ತು. ಈ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗವನ್ನು ವಿಎಚ್​ಪಿ ಒತ್ತಾಯಿಸಿತ್ತು.

ನೂತನ ಆದೇಶ ತೀವ್ರ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಧ್ಯಪ್ರವೇಶಿಸಿದ್ದ ಆಡಳಿತ ಮಂಡಳಿ ಸದಸ್ಯ ಶಾಹಿ ಇಮಾಮ್, ಯುವತಿಯರು ತಮ್ಮ ಗೆಳೆಯರೊಂದಿಗೆ ಮಸೀದಿಗೆ ಬರುತ್ತಾರೆ ಎಂಬ ದೂರುಗಳು ಬರುತ್ತಿವೆ. ಈ ಕಾರಣಕ್ಕಾಗಿ ಅಂತಹ ಮಹಿಳೆಯರು ಒಂಟಿಯಾಗಿ ಬರುವುದಕ್ಕೆ ನಿರ್ಬಂಧ ಹೇರಲಾಗಿದೆ. ಒಂದು ವೇಳೆ ಮಹಿಳೆ ಜಾಮಾ ಮಸೀದಿಗೆ ಬರಲು ಬಯಸಿದರೆ ಆಕೆ ತನ್ನ ಕುಟುಂಬ ಅಥವಾ ಪತಿಯೊಂದಿಗೆ ಮಾತ್ರ ಬರಬೇಕು ಎಂದು ಶಾಹಿ ಇಮಾಮ್ ಹೇಳಿದ್ದರು. ಆದರೆ, ನಮಾಜ್ ಮಾಡಲು ಬರುವ ಮಹಿಳೆಯನ್ನು ನಾವು ತಡೆಯುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ