AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂಗಿ ಬಗ್ಗೆ ಅಸೂಯೆ, ಬುರ್ಖಾ ಧರಿಸಿ ಬಂದು ಮನೆಯಲ್ಲೇ ಆಭರಣಗಳನ್ನು ಕದ್ದ ಸಹೋದರಿ

ನವದೆಹಲಿಯ ಮೋಹನನಗರ ಬಡಾವಣೆಯಲ್ಲಿ ಮಹಿಳೆಯೊಬ್ಬರು ಸಾಲ ತೀರಿಸಲು ಸ್ವಂತ ಮನೆಯಲ್ಲೇ ಕಳ್ಳತನ ಮಾಡಿದ್ದಾರೆ. ಮಹಿಳೆ ಬುರ್ಖಾ ಧರಿಸಿ ಈ ಕೃತ್ಯ ಎಸಗಿದ್ದು, ಆಕೆಯ ಕುಟುಂಬಸ್ಥರು ಆಕೆಯನ್ನು ಗುರುತಿಸುವುದಿಲ್ಲ ಎಂದು ನಂಬಿದ್ದಳು.

ತಂಗಿ ಬಗ್ಗೆ ಅಸೂಯೆ, ಬುರ್ಖಾ ಧರಿಸಿ ಬಂದು ಮನೆಯಲ್ಲೇ ಆಭರಣಗಳನ್ನು ಕದ್ದ ಸಹೋದರಿ
ಪೊಲೀಸ್​Image Credit source: ABP Live
ನಯನಾ ರಾಜೀವ್
|

Updated on:Feb 05, 2024 | 9:15 AM

Share

ದೆಹಲಿಯ ಉತ್ತಮ್ ನಗರದಲ್ಲಿ ಮಹಿಳೆಯೊಬ್ಬರು ತನ್ನ ಸ್ವಂತ ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಿಳೆ ಬುರ್ಖಾ ಧರಿಸಿ ದರೋಡೆ ನಡೆಸಲು ಮನೆಗೆ ನುಗ್ಗಿದ್ದಳು.  ಮಧ್ಯಾಹ್ನ 2ರಿಂದ 2.30ರ ನಡುವೆ ಮನೆಯಲ್ಲಿದ್ದ ಲಕ್ಷ ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 25 ಸಾವಿರ ನಗದು ಕಳ್ಳತನವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ದೂರು ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆದರೆ, ಮನೆಯಲ್ಲಿ ಬಲವಂತವಾಗಿ ಪ್ರವೇಶಿಸಿದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಮುಖ್ಯ ಬಾಗಿಲು ಮತ್ತು ಬೀಗ ಯಥಾಸ್ಥಿತಿಯಲ್ಲಿವೆ ಎಂದು ಪೊಲೀಸರನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ನಂತರ ಪೊಲೀಸರು ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ವೀಡಿಯೋದಲ್ಲಿ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮನೆಯೊಳಗೆ ಬರುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕಮಲೇಶ್ ಅವರ ಹಿರಿಯ ಪುತ್ರಿ ಶ್ವೇತಾಳನ್ನು ಬಂಧಿಸಿದ್ದಾರೆ.

 ಅಸೂಯೆಯಿಂದ ದರೋಡೆ ನಡೆಸಿದ್ದಾಳೆ ವಿಚಾರಣೆ ವೇಳೆ, ಶ್ವೇತಾ ತನ್ನ ತಾಯಿ ತನ್ನ ತಂಗಿಯನ್ನು ಹೆಚ್ಚು ಪ್ರೀತಿಸುತ್ತಿದ್ದರಿಂದ ದರೋಡೆ ನಡೆಸಿದ್ದೇನೆ ಎಂದು ಹೇಳಿದ್ದಾಳೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸಾಲವಿದ್ದು, ಬಾಕಿ ತೀರಿಸಲು ದರೋಡೆಗೆ ಯೋಜನೆ ರೂಪಿಸಿದ್ದಳು. ದರೋಡೆಯ ದಿನದಂದು, ಶ್ವೇತಾ ತನ್ನ ತಾಯಿಯ ಬಳಿ ಕೀಗಳನ್ನು ತೆಗೆದುಕೊಂಡಿದ್ದಳು. ಪ್ರವೇಶ ಪಡೆಯುವ ಮೊದಲು ಸಾರ್ವಜನಿಕ ಶೌಚಾಲಯದಲ್ಲಿ ಬುರ್ಖಾವನ್ನು ಧರಿಸಿದ್ದಳು. ಕದ್ದ ಕೀಗಳನ್ನು ಬಳಸಿ, ಮನೆಗೆ ಬಂದು ಒಡವೆಗಳನ್ನು ಕದ್ದು ಪರಾರಿಯಾಗಿದ್ದಳು.

ಮತ್ತಷ್ಟು ಓದಿ: ಸಾಲ ತೀರಿಸೋಕೆ ರೈಲ್ವೆ ಪ್ರಯಾಣಿಕರ ವಸ್ತು ಕಳ್ಳತನ ಮಾಡ್ತಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್ ಅರೆಸ್ಟ್

ಶ್ವೇತಾ ತನ್ನ ತಾಯಿಯ ಕಳ್ಳತನದ ಬಗ್ಗೆ ಕಳವಳ ವ್ಯಕ್ತಪಡಿಸುವ ಮೂಲಕ ಅನುಮಾನದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಹೊರತಾಗಿಯೂ, ಅಧಿಕಾರಿಗಳು ಕಳ್ಳತನದ ವಸ್ತುಗಳನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾದರು.

ಕೆಲವು ಆಭರಣಗಳನ್ನು ಮಾರಾಟ ಮಾಡಿರುವುದಾಗಿ ಶ್ವೇತಾ ಒಪ್ಪಿಕೊಂಡಿದ್ದರೂ, ಕದ್ದ ಒಡವೆಗಳನ್ನು ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶ್ವೇತಾ ಅವರು ಆಭರಣಗಳನ್ನು ಮಾರಾಟ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಆದರೆ, ಪೊಲೀಸರು ಆಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:15 am, Mon, 5 February 24

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ