AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಳ್ಳು ಆರೋಪ ಮಾಡಿರುವ ಆಪ್​​ ನಾಯಕರ ವಿರುದ್ದ ಕಾನೂನು ಕ್ರಮಕೈಗೊಳ್ಳಲು ಮುಂದಾದ ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಸಕ್ಸೇನಾ

ಇದು ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಗಡಿಗರ ಹಾಲ್​​ಮಾರ್ಕ್, ಮೊದಲು ಆರೋಪ ಮಾಡಿ ಆಮೇಲೆ ಓಡಿ ಹೋಗುವುದು. ಸತ್ಯ ಹೊರಬಂದಾಗ ಕ್ಷಮೆಯಾಚಿಸುವುದು ಎಂದು ಸಕ್ಸೇನಾ ಅವರ ಕಚೇರಿ ಹೇಳಿದೆ

ಸುಳ್ಳು ಆರೋಪ ಮಾಡಿರುವ ಆಪ್​​ ನಾಯಕರ ವಿರುದ್ದ ಕಾನೂನು ಕ್ರಮಕೈಗೊಳ್ಳಲು ಮುಂದಾದ ದೆಹಲಿ ಲೆಫ್ಟಿನೆಂಟ್​​ ಗವರ್ನರ್​​ ಸಕ್ಸೇನಾ
ವಿಕೆ ಸಕ್ಸೇನಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 31, 2022 | 5:19 PM

Share

ದೆಹಲಿ: ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ (VK Saxena )ಅವರು ತಮ್ಮ ವಿರುದ್ಧ ಮಾನನಷ್ಟ ಮತ್ತು ಸುಳ್ಳು ಭ್ರಷ್ಟಾಚಾರ ಆರೋಪಗಳಿಗಾಗಿ ಶಾಸಕರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಸೇರಿದಂತೆ ಆಮ್ ಆದ್ಮಿ ಪಕ್ಷದ (AAP) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. 2016 ರ ನೋಟು ಅಮಾನ್ಯೀಕರಣದ ಸಮಯದಲ್ಲಿ ಸಕ್ಸೇನಾ ಅವರು ಸರ್ಕಾರಿ ಖಾದಿ ಸಂಸ್ಥೆಯ ಅಧ್ಯಕ್ಷರಾಗಿದ್ದಾಗ ₹ 1,400 ಕೋಟಿ ಮೌಲ್ಯದ ನಿಷೇಧಿತ ಕರೆನ್ಸಿ ನೋಟುಗಳನ್ನು ಬದಲಾಯಿಸಿದ್ದಾರೆ ಎಂದು ಎಎಪಿ ಆರೋಪಿಸಿದೆ. ಸಕ್ಸೇನಾ ಅವರು ಎಎಪಿ ಆರೋಪವನ್ನು ಅವರ ಊಹೆ ಎಂದು ನಿರಾಕರಿಸಿದ್ದಾರೆ. ದೆಹಲಿಯ ಸಂವಾದ ಮತ್ತು ಅಭಿವೃದ್ಧಿ ಆಯೋಗದ ಉಪಾಧ್ಯಕ್ಷರಾಗಿರುವ ಜಾಸ್ಮಿನ್ ಶಾ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದು ಅರವಿಂದ ಕೇಜ್ರಿವಾಲ್ ಮತ್ತು ಅವರ ಸಂಗಡಿಗರ ಹಾಲ್​​ಮಾರ್ಕ್, ಮೊದಲು ಆರೋಪ ಮಾಡಿ ಆಮೇಲೆ ಓಡಿ ಹೋಗುವುದು. ಸತ್ಯ ಹೊರಬಂದಾಗ ಕ್ಷಮೆಯಾಚಿಸುವುದು ಎಂದು ಸಕ್ಸೇನಾ ಅವರ ಕಚೇರಿ ಹೇಳಿದೆ. ಈ ಎಎಪಿ ನಾಯಕರು ಮಾಡಿದ  ಸ್ಪಷ್ಟವಾದ ಸುಳ್ಳು, ಮಾನಹಾನಿಕರ ಮತ್ತು ನಿಸ್ಸಂಶಯವಾಗಿ ದಿಕ್ಕು ತಪ್ಪಿಸುವ ಆರೋಪಗಳನ್ನು ಲೆಫ್ಟಿನೆಂಟ್ ಗವರ್ನರ್ ಗಂಭೀರವಾಗಿ ಪರಿಗಣಿಸಿದ್ದು ಎಎಪಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದೆ ಎಂದು ಕಚೇರಿ ಹೇಳಿದೆ.

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ