Delhi Liquor Case: ಕೆ.ಕವಿತಾಗೆ ಇಡಿ ಸಮನ್ಸ್‌ ತಡೆ ನೀಡಲು ನಿರಾಕರಿಸಿದ ಸುಪ್ರೀಂ, ಮಾ. 24ಕ್ಕೆ ಅರ್ಜಿ ವಿಚಾರಣೆ

|

Updated on: Mar 15, 2023 | 2:12 PM

ದೆಹಲಿ ಮಧ್ಯನೀತಿ ಪ್ರಕರಣಕ್ಕೆ ಸಂಬಂಧಿದಂತೆ ಕೆ.ಕವಿತಾ ಅವರಿಗೆ ಇಡಿ ಸಮನ್ಸ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ . ಮಾರ್ಚ್ 24 ರಂದು ಅರ್ಜಿಯನ್ನು ವಿಚಾರಣೆ

Delhi Liquor Case: ಕೆ.ಕವಿತಾಗೆ ಇಡಿ ಸಮನ್ಸ್‌ ತಡೆ ನೀಡಲು ನಿರಾಕರಿಸಿದ ಸುಪ್ರೀಂ, ಮಾ. 24ಕ್ಕೆ ಅರ್ಜಿ ವಿಚಾರಣೆ
ಸಾಂದರ್ಭಿಕ ಚಿತ್ರ
Follow us on

ದೆಹಲಿ: ದೆಹಲಿ ಮಧ್ಯನೀತಿ ಪ್ರಕರಣಕ್ಕೆ (Delhi Liquor Case) ಸಂಬಂಧಿದಂತೆ ಕೆ.ಕವಿತಾ ಅವರಿಗೆ ಇಡಿ ಸಮನ್ಸ್‌ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ . ಮಾರ್ಚ್ 24 ರಂದು ಅರ್ಜಿಯನ್ನು ವಿಚಾರಣೆ ಮಾಡುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಇದೀಗ ಕೆ.ಕವಿತಾ ನಾಳೆ ED ಮುಂದೆ ಹಾಜರಾಗಲಿದ್ದಾರೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ತನಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿ ಬಿಆರ್‌ಎಸ್ ಎಂಎಲ್‌ಸಿ ಕವಿತಾ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಕೊಂಡಿದೆ. ಆದರೆ ಈ ವಿಚಾರದಲ್ಲಿ ಆಕೆಗೆ ಮಧ್ಯಂತರ ಪರಿಹಾರ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮಾರ್ಚ್ 24 ರಂದು ನ್ಯಾಯಾಲಯವು ಅವರ ಮನವಿಯನ್ನು ಆಲಿಸಲಿದೆ.

ಇದನ್ನೂ ಓದಿ: Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ಪ್ರತಿಪಕ್ಷ ನಾಯಕರು ನವದೆಹಲಿಯ ಜಾರಿ ನಿರ್ದೇಶನಾಲಯದ ಕಚೇರಿಗೆ ತಮ್ಮ ಮೆರವಣಿಗೆಯನ್ನು ಪ್ರಾರಂಭಿಸಿದ ಕೆಲವೇ ಕ್ಷಣಗಳಲ್ಲಿ, ಪೊಲೀಸ್ ಅಧಿಕಾರಿಗಳು ವಿಜಯ್ ಚೌಕ್ ಪ್ರದೇಶದಲ್ಲಿ CrPC ಯ ಸೆಕ್ಷನ್ 144 ಅನ್ನು ವಿಧಿಸುತ್ತಿರುವುದಾಗಿ ಘೋಷಿಸಿದರು. ಅದಾನಿ ವಿಷಯದ ಕುರಿತು ತನಿಖಾ ಸಂಸ್ಥೆಗೆ ದೂರು ನೀಡಲು ವಿರೋಧ ಪಕ್ಷದ ನಾಯಕರು ಪ್ರತಿಭಟನಾ ಮೆರವಣಿಗೆಗೆ ಕರೆ ನೀಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:42 pm, Wed, 15 March 23