AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Liquor Policy Case: 8 ಗಂಟೆಗಳ ವಿಚಾರಣೆ ಬಳಿಕ ಮನೀಶ್ ಸಿಸೋಡಿಯಾರನ್ನು ಬಂಧಿಸಿದ್ದು ಏಕೆ, ಸಿಬಿಐ ಹೇಳಿದ್ದಿಷ್ಟು

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸುಮಾರು 8 ಗಂಟೆಗಳ ಕಾಲ ವಿಚಾರಣೆ ಮಾಡಿದ ಬಳಿಕ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಸಿಬಿಐ ಬಂಧಿಸಿದೆ. ಮನೀಶ್ ಸಿಸೋಡಿಯಾ ಅವರು ಭಾನುವಾರ ಅಬಕಾರಿ ನೀತಿ ಹಗರಣದ ಸಿಬಿಐ ತನಿಖೆ ಎದುರಿಸಿದ್ದರು.

Liquor Policy Case: 8 ಗಂಟೆಗಳ ವಿಚಾರಣೆ ಬಳಿಕ ಮನೀಶ್ ಸಿಸೋಡಿಯಾರನ್ನು ಬಂಧಿಸಿದ್ದು ಏಕೆ, ಸಿಬಿಐ ಹೇಳಿದ್ದಿಷ್ಟು
ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ
ನಯನಾ ರಾಜೀವ್
|

Updated on: Feb 27, 2023 | 11:18 AM

Share

ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಸುಮಾರು 8 ಗಂಟೆಗಳ ಕಾಲ ವಿಚಾರಣೆ ಮಾಡಿದ ಬಳಿಕ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾರನ್ನು ಸಿಬಿಐ ಬಂಧಿಸಿದೆ.  ಮನೀಶ್ ಸಿಸೋಡಿಯಾ ಅವರು ಭಾನುವಾರ ಅಬಕಾರಿ ನೀತಿ ಹಗರಣದ ಸಿಬಿಐ ತನಿಖೆ ಎದುರಿಸಿದ್ದರು. ಬೆಳಗ್ಗೆ 11.10ಕ್ಕೆ ಸಿಬಿಐ ಕೇಂದ್ರ ಕಚೇರಿ ತಲುಪಿದರು. ತನಿಖೆ ಶುರುವಾಗುವ ಮೊದಲು, ಅವರು ಇತರ ಪಕ್ಷದ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಅವರೊಂದಿಗೆ ಪೂಜೆ ಸಲ್ಲಿಸಲು ರಾಜ್‌ಘಾಟ್‌ಗೆ ತೆರಳಿದರು.

ಇಂದು ಮತ್ತೊಮ್ಮೆ ಸಿಬಿಐ ಕೇಂದ್ರ ಕಚೇರಿಗೆ ಹೋಗುತ್ತಿದ್ದೇನೆ, ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ ಎಂದು ಸಿಸೋಡಿಯಾ ಟ್ವೀಟ್ ಮಾಡಿದ್ದರು. ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾದ ದಿನೇಶ್ ಅರೋರಾ ಮತ್ತು ಇತರ ಆರೋಪಿಗಳೊಂದಿಗೆ ಆಪಾದಿತರ ಸಂಪರ್ಕ, ಮತ್ತು ಬೇರೆ ಬೇರೆ ಫೋನ್‌ಗಳಿಂದ ಸಂದೇಶ ವಿನಿಮಯದ ವಿವರಗಳು ಸೇರಿದಂತೆ ಅಬಕಾರಿ ನೀತಿಯ ವಿವಿಧ ಅಂಶಗಳ ಆಧಾರದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ತನಿಖೆಗೆ ಒಳಪಡಿಸಿದ್ದರು.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾರನ್ನು ಬಂಧಿಸಿದ ಸಿಬಿಐ

ಸಿಸೋಡಿಯಾ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಲು ಕಸ್ಟಡಿ ವಿಚಾರಣೆ ಅಗತ್ಯ ಎಂದು ಭಾವಿಸಲಾಗಿದೆ ಹೀಗಾಗಿ ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. 2021 ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಆಪಾದಿತರ ಅಕ್ರಮಗಳ ಬಗ್ಗೆ ತನಿಖೆಗಾಗಿ ಉಪಮುಖ್ಯಮಂತ್ರಿ ಮತ್ತು ಉಸ್ತುವಾರಿ ಅಬಕಾರಿ ಸಚಿವ, ದೆಹಲಿಯ ಜಿಎನ್‌ಸಿಟಿಡಿ ಮತ್ತು ಇತರ 14 ಜನರ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಸಿಬಿಐ ಹೇಳಿಕೆಯಲ್ಲಿ ತಿಳಿಸಿದೆ.

ದೆಹಲಿ ಸಚಿವರನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಿಬಿಐ ತಿಳಿಸಿದೆ. ತನ್ನ ವಿರುದ್ಧದ ಪ್ರಕರಣವನ್ನು ಸುಳ್ಳು ಎಂದು ಕರೆದಿರುವಸಿಸೋಡಿಯಾ, ಏಳೆಂಟು ತಿಂಗಳ ಜೈಲು ಶಿಕ್ಷೆಗೆ ಸಿದ್ಧ ಎಂದು ಈ ಹಿಂದೆ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ