AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇದೀಗ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ
ಸಂಜಯ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Dec 22, 2023 | 4:59 PM

Share

ದೆಹಲಿ, ಡಿ.22: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಎಎಪಿ ನಾಯಕ ಸಂಜಯ್ ಸಿಂಗ್ (sanjay singh) ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್​ ಇಂದು ವಜಾಗೊಳಿಸಿದೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ರಾಜ್ಯಸಭಾ ಸಂಸದ ಸಿಂಗ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇನ್ನು ಈ ಪ್ರಕರಣದ ವಿಚಾರಣೆ ವೇಳೆ ಸಂಜಯ್​​​ ಸಿಂಗ್ ಅವರ ವಕೀಲರು ವಾದ ಮಂಡಿಸುವ ವೇಳೆ ಸಂಜಯ್​​​ ಸಿಂಗ್ ಅವರಿಗೆ ಲಂಚ ನೀಡುವ ಕುರಿತು ಆರೋಪಿ ದಿನೇಶ್ ಅರೋರಾ ಮತ್ತು ಇತರ ಸಾಕ್ಷಿಗಳ ಹೇಳಿಕೆಗಳಲ್ಲಿ ವಿರೋಧಾಭಾಸಗಳಿವೆ ಎಂದು ಹೇಳಿದರು.

ಇನ್ನು ಸಂಜಯ್​​​ ಸಿಂಗ್​​ ಅವರ ಜಾಮೀನಿ ಅರ್ಜಿಯನ್ನು ಇಡಿ ವಿರೋಧಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು. ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಇಡಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ರಾಜ್ಯಸಭಾ ಸಂಸದ ಸಂಜಯ್​​ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಲಾಭದಾಯಕವಾಗಿರುವ 2021-2022 ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿದರು. ಆದರೆ ಈ ಬಗ್ಗೆ ಸಂಜಯ್​​​ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Fri, 22 December 23

Follow Us
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿಕೆಶಿ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ನಿರುದ್ಯೋಗಿ ಯುವಕ ಯುವತಿಯರೇ ಟಾರ್ಗೆಟ್: ಈತನ ಮೊಬೈಲ್​​​ನಲ್ಲಿ ಶಾಕಿಂಗ್ ಅಂಶ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಕೃಷ್ಣ ಜನ್ಮಾಷ್ಟಮಿ; ಗೋಪೂಜೆ ಸಲ್ಲಿಸಿದ ಬಿಜೆಪಿ ಅಧ್ಯಕ್ಷ ವಿಜಯೇಂದ್ರ
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
ಲಕ್ಷ್ಮೇಶ್ವರ ತಾಲೂಕು ಘೋಷಣೆಯಾಗಿ 9 ವರ್ಷ ಕಳೆದರೂ ಜನರಿಗೆ ತಪ್ಪದ ಪರದಾಟ!
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
15 ಸಾವಿರ ಶಿಕ್ಷಕರ ನೇಮಕಾತಿ: ಸರ್ವರ್ ಸಮಸ್ಯೆಯಿಂದ ಆಕಾಂಕ್ಷಿಗಳ ಪರದಾಟ
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
4ನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಬಳ್ಳಾರಿ ಚಲೋ, ಮುಸ್ಲಿಮರ ಸಾಥ್!
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಮೈಸೂರು ದಸರಾ 2026: ಶ್ರೀಕಂಠ ಪಟ್ಟದ ಆನೆ, ಏಕಲವ್ಯ ನಿಶಾನೆ ಆನೆಯಾಗಿ ಆಯ್ಕೆ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿಯ ಸಂಭ್ರಮ ಹೇಗಿದೆ ನೋಡಿ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ರೈತರಿಗೆ ವಿದ್ಯುತ್ ಕೊಡಲು ಸೋಲಾರ್ ಪ್ಲಾಟ್ ಸ್ಥಾಪಿಸುತ್ತಿದೆ ಎಂಇಐಎಲ್ ಕಂಪನ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ
ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್ ಕೇಂದ್ರಗಳಲ್ಲಿನ ಮಹೋತ್ಸವದ ವಿವರ