AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇದೀಗ ಅವರ ಜಾಮೀನು ಅರ್ಜಿಯನ್ನು ವಜಾ ಮಾಡಿದ್ದಾರೆ.

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ
ಸಂಜಯ್ ಸಿಂಗ್
ಅಕ್ಷಯ್​ ಪಲ್ಲಮಜಲು​​
|

Updated on:Dec 22, 2023 | 4:59 PM

Share

ದೆಹಲಿ, ಡಿ.22: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಎಎಪಿ ನಾಯಕ ಸಂಜಯ್ ಸಿಂಗ್ (sanjay singh) ಅವರ ಜಾಮೀನು ಅರ್ಜಿಯನ್ನು ದೆಹಲಿ ಕೋರ್ಟ್​ ಇಂದು ವಜಾಗೊಳಿಸಿದೆ. ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅವರನ್ನು ಬಂಧಿಸಲಾಗಿತ್ತು. ವಿಶೇಷ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರು ರಾಜ್ಯಸಭಾ ಸಂಸದ ಸಿಂಗ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಸಂಜಯ್​​​​ ಸಿಂಗ್​​​​ ಅವರ ಜಾಮೀನು ಅರ್ಜಿಯನ್ನು ಗುರುವಾರ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು. ಡಿಸೆಂಬರ್​​​ 22ರಂದು ಅರ್ಜಿಯನ್ನು ವಿಚಾರ ಮಾಡುವುದಾಗಿ ಹೇಳಿತ್ತು. ಇನ್ನು ಈ ಪ್ರಕರಣದ ವಿಚಾರಣೆ ವೇಳೆ ಸಂಜಯ್​​​ ಸಿಂಗ್ ಅವರ ವಕೀಲರು ವಾದ ಮಂಡಿಸುವ ವೇಳೆ ಸಂಜಯ್​​​ ಸಿಂಗ್ ಅವರಿಗೆ ಲಂಚ ನೀಡುವ ಕುರಿತು ಆರೋಪಿ ದಿನೇಶ್ ಅರೋರಾ ಮತ್ತು ಇತರ ಸಾಕ್ಷಿಗಳ ಹೇಳಿಕೆಗಳಲ್ಲಿ ವಿರೋಧಾಭಾಸಗಳಿವೆ ಎಂದು ಹೇಳಿದರು.

ಇನ್ನು ಸಂಜಯ್​​​ ಸಿಂಗ್​​ ಅವರ ಜಾಮೀನಿ ಅರ್ಜಿಯನ್ನು ಇಡಿ ವಿರೋಧಿಸಿತ್ತು. ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ತನಿಖೆಗೆ ಅಡ್ಡಿಯಾಗಬಹುದು. ಸಾಕ್ಷಿಗಳನ್ನು ನಾಶ ಮಾಡಬಹುದು ಎಂದು ಇಡಿ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ರಾಜ್ಯಸಭಾ ಸಂಸದ ಸಂಜಯ್​​ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಸದ ಸಂಜಯ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ ಲಾಭದಾಯಕವಾಗಿರುವ 2021-2022 ರ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಪ್ರಮುಖ ಪಾತ್ರವಹಿಸಿದರು. ಆದರೆ ಈ ಬಗ್ಗೆ ಸಂಜಯ್​​​ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:55 pm, Fri, 22 December 23

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!