AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್​ಗೆ ನಾಲ್ಕನೇ ಬಾರಿ ಸಮನ್ಸ್​ ಜಾರಿ ಮಾಡಿದ ಜಾರಿ ನಿರ್ದೇಶನಾಲಯ

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್​(Arvind Kejriwal)ಗೆ 4ನೇ ಬಾರಿಗೆ ಸಮನ್ಸ್​ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್​ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್​ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ದೆಹಲಿ ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್​ಗೆ ನಾಲ್ಕನೇ ಬಾರಿ ಸಮನ್ಸ್​ ಜಾರಿ ಮಾಡಿದ ಜಾರಿ ನಿರ್ದೇಶನಾಲಯ
ಅರವಿಂದ್ ಕೇಜ್ರಿವಾಲ್Image Credit source: Timesnow
ನಯನಾ ರಾಜೀವ್
|

Updated on: Jan 13, 2024 | 9:36 AM

Share

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್​(Arvind Kejriwal)ಗೆ 4ನೇ ಬಾರಿಗೆ ಸಮನ್ಸ್​ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್​ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್​ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ನಾಲ್ಕನೇ ಸಮನ್ಸ್​ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ. ಕೊನೆಯ ಸಮನ್ಸ್​ ನಂತರ ಆಮ್ ಆದ್ಮಿ ಪಕ್ಷವು ಇಡಿಯೊಂದಿಗೆ ಸಹಕರಿಸಲು ಬಯಸುತ್ತದೆ ಎಂದು ಹೇಳಿತ್ತು. ನಾಲ್ಕನೇ ಸಮನ್ಸ್​ಗೆ ಸಂಬಂಧಿಸಿದಂತೆ ಆಮ್​ ಆದ್ಮಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಇಷ್ಟೇ ಅಲ್ಲದೆ ವಿಚಾರಣೆ ನೆಪದಲ್ಲಿ ಅವರನ್ನು ಕರೆಸಿ ಬಂಧಿಸಲು ಇಡಿ ನಿರ್ಧರಿಸಿದೆ ಎಂದಿದೆ.

ದೆಹಲಿ ಸರ್ಕಾರದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಎಕ್ಸ್​ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದರು, ಅದರಲ್ಲಿ ಕೇಜ್ರಿವಾಲ್ ಮನೆ ಮೇಲೆ ಇಡಿ ದಾಳಿ ನಡೆಸಬಹುದು ಎಂದು ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ದಾಳಿ ನಡೆಸಿದ್ದು, ಪಕ್ಷವನ್ನು ಕಾನೂನಿಗಿಂತ ತನ್ನನ್ನು ಹೆಚ್ಚು ಎಂದು ಪರಿಗಣಿಸುತ್ತಾರೆ ಎಂದಿದ್ದಾರೆ. ಕಳೆದ ವರ್ಷ ಏಪ್ರಿಲ್ 16ರಂದು ದೆಹಲಿಯ ಮದ್ಯನೀತಿ ಹಗರಣದಲ್ಲಿ ಇಡಿ ಅರವಿಂದ್ ಕೇಜ್ರಿವಾಲ್​ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ನವೆಂಬರ್ 2 ರಂದು ವಿಚಾರಣೆಗಾಗಿ ಸಮನ್ಸ್​ ಜಾರಿ ಮಾಡಿತ್ತು, ಆದರೆ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಿರತರಾಗಿರುವ ಕಾರಣ ಹಾಜರಾಗಿರಲಿಲ್ಲ.

ಇದಾದ ಬಳಿಕ ಡಿಸೆಂಬರ್ 18 ರಂದು ಇಡಿ ಮತ್ತೆ ಸಮನ್ಸ್​ ಜಾರಿ ಮಾಡಿತ್ತು, ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಕಳೆದ ವರ್ಷ ಇದೇ ಪ್ರಕರಣದಲ್ಲಿ ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಅವರನ್ನು ಇಡಿ ಬಂಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
ಕೈ ಕೊಟ್ಟ ಮುಂಗಾರು:ಟ್ಯಾಂಕರ್​ ನೀರು ಮೊರೆ ಹೋದ ಅನ್ನದಾತರು
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ