ದೆಹಲಿ ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್​ಗೆ ನಾಲ್ಕನೇ ಬಾರಿ ಸಮನ್ಸ್​ ಜಾರಿ ಮಾಡಿದ ಜಾರಿ ನಿರ್ದೇಶನಾಲಯ

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್​(Arvind Kejriwal)ಗೆ 4ನೇ ಬಾರಿಗೆ ಸಮನ್ಸ್​ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್​ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್​ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ದೆಹಲಿ ಮದ್ಯನೀತಿ ಹಗರಣ: ಅರವಿಂದ್ ಕೇಜ್ರಿವಾಲ್​ಗೆ ನಾಲ್ಕನೇ ಬಾರಿ ಸಮನ್ಸ್​ ಜಾರಿ ಮಾಡಿದ ಜಾರಿ ನಿರ್ದೇಶನಾಲಯ
ಅರವಿಂದ್ ಕೇಜ್ರಿವಾಲ್Image Credit source: Timesnow
Follow us
|

Updated on: Jan 13, 2024 | 9:36 AM

ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್​(Arvind Kejriwal)ಗೆ 4ನೇ ಬಾರಿಗೆ ಸಮನ್ಸ್​ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್​ ಅವರಿಗೆ ಇಡಿ ನೀಡಿರುವ ನಾಲ್ಕನೇ ಸಮನ್ಸ್​ ಇದಾಗಿದ್ದು, ಇದಕ್ಕೂ ಮುನ್ನ ನವೆಂಬರ್ 2 ರಂದು, 21ರಂದು ಹಾಗೂ ಜನವರಿ 3 ರಂದು ಮೂರು ಬಾರಿ ಸಮನ್ಸ್​ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

ಈ ನಾಲ್ಕನೇ ಸಮನ್ಸ್​ ಬಳಿಕ ಅರವಿಂದ್ ಕೇಜ್ರಿವಾಲ್ ಇಡಿ ಮುಂದೆ ಹಾಜರಾಗುತ್ತಾರೋ ಇಲ್ಲವೋ ಕಾದುನೋಡಬೇಕಿದೆ. ಕೊನೆಯ ಸಮನ್ಸ್​ ನಂತರ ಆಮ್ ಆದ್ಮಿ ಪಕ್ಷವು ಇಡಿಯೊಂದಿಗೆ ಸಹಕರಿಸಲು ಬಯಸುತ್ತದೆ ಎಂದು ಹೇಳಿತ್ತು. ನಾಲ್ಕನೇ ಸಮನ್ಸ್​ಗೆ ಸಂಬಂಧಿಸಿದಂತೆ ಆಮ್​ ಆದ್ಮಿ ಪಕ್ಷದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಕೇಜ್ರಿವಾಲ್ ಬಂಧಿಸಲು ಎಲ್ಲಾ ತಯಾರಿ ನಡೆಸಲಾಗುತ್ತಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ, ಇಷ್ಟೇ ಅಲ್ಲದೆ ವಿಚಾರಣೆ ನೆಪದಲ್ಲಿ ಅವರನ್ನು ಕರೆಸಿ ಬಂಧಿಸಲು ಇಡಿ ನಿರ್ಧರಿಸಿದೆ ಎಂದಿದೆ.

ದೆಹಲಿ ಸರ್ಕಾರದ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದ ಸಂದೀಪ್ ಪಾಠಕ್ ಅವರು ಎಕ್ಸ್​ನಲ್ಲಿ ಪೋಸ್ಟ್​ವೊಂದನ್ನು ಮಾಡಿದ್ದರು, ಅದರಲ್ಲಿ ಕೇಜ್ರಿವಾಲ್ ಮನೆ ಮೇಲೆ ಇಡಿ ದಾಳಿ ನಡೆಸಬಹುದು ಎಂದು ಬರೆದುಕೊಂಡಿದ್ದರು.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ದಾಳಿ ನಡೆಸಿದ್ದು, ಪಕ್ಷವನ್ನು ಕಾನೂನಿಗಿಂತ ತನ್ನನ್ನು ಹೆಚ್ಚು ಎಂದು ಪರಿಗಣಿಸುತ್ತಾರೆ ಎಂದಿದ್ದಾರೆ. ಕಳೆದ ವರ್ಷ ಏಪ್ರಿಲ್ 16ರಂದು ದೆಹಲಿಯ ಮದ್ಯನೀತಿ ಹಗರಣದಲ್ಲಿ ಇಡಿ ಅರವಿಂದ್ ಕೇಜ್ರಿವಾಲ್​ ಅವರನ್ನು ಸುಮಾರು 9 ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು.

ನವೆಂಬರ್ 2 ರಂದು ವಿಚಾರಣೆಗಾಗಿ ಸಮನ್ಸ್​ ಜಾರಿ ಮಾಡಿತ್ತು, ಆದರೆ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಿರತರಾಗಿರುವ ಕಾರಣ ಹಾಜರಾಗಿರಲಿಲ್ಲ.

ಇದಾದ ಬಳಿಕ ಡಿಸೆಂಬರ್ 18 ರಂದು ಇಡಿ ಮತ್ತೆ ಸಮನ್ಸ್​ ಜಾರಿ ಮಾಡಿತ್ತು, ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಕಳೆದ ವರ್ಷ ಇದೇ ಪ್ರಕರಣದಲ್ಲಿ ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಮನೀಷ್ ಸಿಸೋಡಿಯಾ ಅವರನ್ನು ಇಡಿ ಬಂಧಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್