AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಮಾಜಿ ಆಡಿಟರ್ ಬುಚ್ಚಿ ಬಾಬು ಅವರನ್ನು ಸಿಬಿಐ ಬಂಧಿಸಿದೆ.

Delhi Liquor Policy Case: ದೆಹಲಿ ಅಬಕಾರಿ ನೀತಿ ಹಗರಣ: ತೆಲಂಗಾಣ ಸಿಎಂ ಪುತ್ರಿ ಕವಿತಾರ ಮಾಜಿ ಆಡಿಟರ್ ಬಂಧನ
ಕೆಸಿಆರ್ ಪುತ್ರಿ ಕವಿತಾ
ನಯನಾ ರಾಜೀವ್
|

Updated on:Feb 08, 2023 | 9:59 AM

Share

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅವರ ಮಾಜಿ ಆಡಿಟರ್ ಬುಚ್ಚಿ ಬಾಬು ಅವರನ್ನು ಸಿಬಿಐ ಬಂಧಿಸಿದೆ. ಇದಕ್ಕೂ ಮೊದಲು, ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸೆಂಬರ್ 12 ರಂದು ಹೈದರಾಬಾದ್‌ನಲ್ಲಿ ಸಿಬಿಐ ತಂಡವು ಕೆ ಕವಿತಾ ಅವರನ್ನು ಏಳು ಗಂಟೆಗಳ ಕಾಲ ವಿಚಾರಣೆ ನಡೆಸಿತ್ತು. ಹೈದರಾಬಾದ್ ಮೂಲದ ಚಾರ್ಟರ್ಡ್​ ಅಕೌಂಟೆಂಟ್ ಬುಚ್ಚಿಬಾಬು ಗೋರಂಟ್ಲಾ ಎಂಬುವವರನ್ನು ಸಿಬಿಐ ಬಂಧಿಸಿದೆ. ಇದರಿಂದ ಸಗಟು ಹಾಗೂ ಚಿಲ್ಲರೆ ಪರವಾನಗಿದಾರರಿಗೆ ಹೊಸ ನೀತಿಯಿಂದಾಗಿ ಲಾಭ ಉಂಟು ಮಾಡಿಕೊಡಲಾಗಿದೆ.

2021-22ರ ದೆಹಲಿ ಮದ್ಯ ಮಾರಾಟ ನೀತಿಯಲ್ಲಿ ಅಕ್ರಮವಾಗಿ ಲೈಸೆನ್ಸ್ ಮತ್ತು ಮಾರಾಟದಲ್ಲಿ ಹೆಚ್ಚಿನ ಲಾಭವನ್ನು ದೊರಕಿಸಿಕೊಡಲಾಗಿದೆ ಎಂದು ಸಿಬಿಐ ಹೇಳಿದೆ.

ಆರ್ಥಿಕ ಅಪರಾಧಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಕೆ ಕವಿತಾ ಅವರು ಮದ್ಯ ನೀತಿ ಪ್ರಕರಣದಲ್ಲಿ ಕಿಕ್‌ಬ್ಯಾಕ್‌ನಿಂದ ಲಾಭ ಪಡೆದ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪ್ರತಿನಿಧಿಯಾಗಿರುವ ರಾಜಧಾನಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಸಿಬಿಐ ತನಿಖೆಗೆ ಆದೇಶಿಸಿದ ನಂತರ ಎಎಪಿ ಸರ್ಕಾರವು ಕಳೆದ ವರ್ಷ ನೀತಿಯನ್ನು ಹಿಂಪಡೆದಿತ್ತು. ಸೌತ್ ಕಾರ್ಟೆಲ್ ನ ಭಾಗವಾಗಿದ್ದರು ಎಂದು ಆರೋಪಿಸಿದ್ದಾರೆ.

ಮತ್ತಷ್ಟು ಓದಿ: ದೆಹಲಿ ಅಬಕಾರಿ ನೀತಿ ಪ್ರಕರಣ: 8 ಆರೋಪಿಗಳ ವಿರುದ್ಧ ಲುಕೌಟ್ ಸುತ್ತೋಲೆ ಹೊರಡಿಸಿದ ಸಿಬಿಐ

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿದ ಪೂರಕ ಚಾರ್ಜ್​ ಶೀಟ್​ ಅನ್ನು ದೆಹಲಿಯ ಅವೆನ್ಯೂ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ಪೂರಕ ಚಾರ್ಜ್​ ಶೀಟ್​ನಲ್ಲಿ ವಿಜಯ್ ನಾಯರ್, ಶರತ್​ ರೆಡ್ಡಿ, ಅಭಿಷೇಕ್ ಹಾಗೂ ಅಮಿತ್ ಅರೋರಾ ಹೆಸರಿದ್ದು, ಆದರೆ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೆಸರು ಇರಲಿಲ್ಲ ಎಂಬುದು ತಿಳಿದುಬಂದಿದೆ.

ಪ್ರಕರಣದ ಎಲ್ಲಾ ಐದು ಆರೋಪಿಗಳಿಗೆ ಸಮನ್ಸ್ ನೀಡಿದ್ದು, ಫೆ.23ರಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ 2021-22ನೇ ಸಾಲಿನ ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ವೇಳೆ 468 ಖಾಸಗಿ ಬಾರ್​ಗಳಿಗೆ ಅನುಮತಿ ನೀಡಲಾಗಿತ್ತು. ಆದರೆ ಈ ನೀತಿಯ ಜಾರಿಯ ವೇಳೆ ಹಲವಾರು ಅಕ್ರಮಗಳು ನಡೆದಿವೆ ಎಂದು ವಿಕೆ ಸಕ್ಸೇನಾ ಕಳೆದ ತಿಂಗಳು ಸಿಬಿಐಗೆ ಶಿಫಾರಸು ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:59 am, Wed, 8 February 23

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ