AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ

Delhi liquor policy case ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ
ಕೆ. ಕವಿತಾ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Feb 27, 2023 | 7:55 PM

Share

ತಿರುಪತಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao)ಅವರ ಪುತ್ರಿ ಕೆ ಕವಿತಾ (K Kavitha) ಅವರನ್ನು ಸಿಬಿಐ (CBI) ಶೀಘ್ರದಲ್ಲೇ ಬಂಧಿಸಲಿದೆ ಎಂದು ಬಿಜೆಪಿ (BJP) ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ಒಂದು ದಿನದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಎಂಎಲ್‌ಸಿ ಕವಿತಾ ಬಗ್ಗೆ ತೆಲಂಗಾಣ ಬಿಜೆಪಿ ನಾಯಕ ವಿವೇಕ್ ಹೇಳಿಕೆ ನೀಡಿದ್ದಾರೆ. ಮದ್ಯ ಹಗರಣದಲ್ಲಿ ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಯಿದೆ. ಕವಿತಾ ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಬಿಜೆಪಿ ನಾಯಕ ಹೇಳಿದ್ದು, ಪಂಜಾಬ್ ಮತ್ತು ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕವಿತಾ ₹ 150 ಕೋಟಿ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಇದನ್ನೂ ಓದಿ: Manish Sisodia: ಮಾರ್ಚ್ 4ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿಗೆ

ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ವಿವೇಕ್, ತೆಲಂಗಾಣ ರಾಜ್ಯದಲ್ಲಿ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆರಂಭಿಸಿದಾಗ ಪಕ್ಷಕ್ಕೆ ಹಣ ಇರಲಿಲ್ಲ. ಈಗ ಪಕ್ಷವು ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಹೆಚ್ಚು ಠೇವಣಿ ಹೊಂದಿದೆ ಹಣದ ಮೂಲಗಳೇನು ಎಂದು ಪ್ರಶ್ನಿಸಿದ ಅವರು, ‘ಚುನಾವಣೆ ವೇಳೆ ನೀಡಿದ ಒಂದೇ ಒಂದು ಭರವಸೆಯನ್ನು ಕೆಸಿಆರ್ ಈಡೇರಿಸಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಂಟು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಸಿಬಿಐ ಬಂಧಿಸಿದ್ದು, ಮಾರ್ಚ್ 4ರ ವರೆಗೆ ಅವರು ಸಿಬಿಐ ಕಸ್ಟಡಿಯಲ್ಲಿರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Mon, 27 February 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ