AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ

Delhi liquor policy case ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಮದ್ಯ ನೀತಿ ಪ್ರಕರಣದಲ್ಲಿ ಕೆಸಿಆರ್ ಪುತ್ರಿ ಕವಿತಾರನ್ನು ಶೀಘ್ರದಲ್ಲೇ ಬಂಧಿಸುವ ಸಾಧ್ಯತೆ: ಬಿಜೆಪಿ ನಾಯಕ
ಕೆ. ಕವಿತಾ
TV9 Web
| Edited By: |

Updated on:Feb 27, 2023 | 7:55 PM

Share

ತಿರುಪತಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (K Chandrasekhar Rao)ಅವರ ಪುತ್ರಿ ಕೆ ಕವಿತಾ (K Kavitha) ಅವರನ್ನು ಸಿಬಿಐ (CBI) ಶೀಘ್ರದಲ್ಲೇ ಬಂಧಿಸಲಿದೆ ಎಂದು ಬಿಜೆಪಿ (BJP) ನಾಯಕರೊಬ್ಬರು ಸೋಮವಾರ ಹೇಳಿದ್ದಾರೆ. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ಒಂದು ದಿನದ ನಂತರ ಭಾರತ್ ರಾಷ್ಟ್ರ ಸಮಿತಿ (BRS) ಎಂಎಲ್‌ಸಿ ಕವಿತಾ ಬಗ್ಗೆ ತೆಲಂಗಾಣ ಬಿಜೆಪಿ ನಾಯಕ ವಿವೇಕ್ ಹೇಳಿಕೆ ನೀಡಿದ್ದಾರೆ. ಮದ್ಯ ಹಗರಣದಲ್ಲಿ ಇನ್ನೂ ಕೆಲವರನ್ನು ಬಂಧಿಸುವ ಸಾಧ್ಯತೆಯಿದೆ. ಕವಿತಾ ಅವರನ್ನೂ ಶೀಘ್ರದಲ್ಲೇ ಬಂಧಿಸಲಾಗುವುದು” ಎಂದು ಬಿಜೆಪಿ ನಾಯಕ ಹೇಳಿದ್ದು, ಪಂಜಾಬ್ ಮತ್ತು ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಕವಿತಾ ₹ 150 ಕೋಟಿ ನೀಡಿದ್ದರು ಎಂದು ಆರೋಪಿಸಿದ್ದಾರೆ.

ಈ ಹಿಂದೆ, ಜಾರಿ ನಿರ್ದೇಶನಾಲಯವು ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಕವಿತಾ ಅವರನ್ನು ಹೆಸರಿಸಿತ್ತು. ಅವರು ಮದ್ಯದ ಕಂಪನಿಯಲ್ಲಿ ಶೇಕಡಾ 65 ರಷ್ಟು ಪಾಲನ್ನು ಹೊಂದಿದ್ದಾರೆ ಎಂದು ಆರೋಪವಿದೆ.

ಇದನ್ನೂ ಓದಿ: Manish Sisodia: ಮಾರ್ಚ್ 4ರವರೆಗೆ ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿಗೆ

ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದ ವಿವೇಕ್, ತೆಲಂಗಾಣ ರಾಜ್ಯದಲ್ಲಿ ಪಕ್ಷ ತನ್ನ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದರು. ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆರಂಭಿಸಿದಾಗ ಪಕ್ಷಕ್ಕೆ ಹಣ ಇರಲಿಲ್ಲ. ಈಗ ಪಕ್ಷವು ದೇಶದ ಎಲ್ಲಾ ರಾಜಕೀಯ ಪಕ್ಷಗಳಿಗಿಂತ ಹೆಚ್ಚು ಠೇವಣಿ ಹೊಂದಿದೆ ಹಣದ ಮೂಲಗಳೇನು ಎಂದು ಪ್ರಶ್ನಿಸಿದ ಅವರು, ‘ಚುನಾವಣೆ ವೇಳೆ ನೀಡಿದ ಒಂದೇ ಒಂದು ಭರವಸೆಯನ್ನು ಕೆಸಿಆರ್ ಈಡೇರಿಸಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಎಂಟು ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಭಾನುವಾರ ಸಿಬಿಐ ಬಂಧಿಸಿದ್ದು, ಮಾರ್ಚ್ 4ರ ವರೆಗೆ ಅವರು ಸಿಬಿಐ ಕಸ್ಟಡಿಯಲ್ಲಿರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 pm, Mon, 27 February 23

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ