AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ನೀತಿ ಹಗರಣ: ಮಧ್ಯಂತರ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ.

ಅಬಕಾರಿ ನೀತಿ ಹಗರಣ: ಮಧ್ಯಂತರ ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ಮನೀಶ್ ಸಿಸೋಡಿಯಾ
ನಯನಾ ರಾಜೀವ್
|

Updated on:Aug 04, 2023 | 11:51 AM

Share

ದೆಹಲಿಯ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ(Manish Sisodia) ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದೂಡಿದೆ. ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 4 ರವರೆಗೆ ಮುಂದೂಡಿದೆ. ಸಿಸೋಡಿಯಾ ಅವರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ತಮ್ಮ ಪತ್ನಿಯ ವೈದ್ಯಕೀಯ ಸ್ಥಿತಿಯನ್ನು ತನ್ನ ಬಿಡುಗಡೆಗೆ ಕಾರಣವೆಂದು ಉಲ್ಲೇಖಿಸಿದ್ದರು.

ಆದಾಗ್ಯೂ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠ, ಸಿಸೋಡಿಯಾ ಅವರ ಪತ್ನಿಯ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ ನಂತರ, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Manish Sisodia: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಇತರ ಆರೋಪಿಗಳ ಆಸ್ತಿ ಜಪ್ತಿ

ಪ್ರಕರಣಗಳಲ್ಲಿ ಸಿಸೋಡಿಯಾ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿಗಳಿಗೆ ತಮ್ಮ ಪ್ರತಿಕ್ರಿಯೆಯನ್ನು ನೀಡುವಂತೆ ಜುಲೈ 14 ರಂದು ಸುಪ್ರೀಂ ಕೋರ್ಟ್ ಸಿಬಿಐ ಮತ್ತು ಇಡಿಗೆ ಮನವಿ ಮಾಡಿತ್ತು.

ಮದ್ಯ ನೀತಿಯಲ್ಲಿನ ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಫೆಬ್ರವರಿ 2 ರಂದು ದೆಹಲಿಯ ಉಪಮುಖ್ಯಮಂತ್ರಿ ಮತ್ತು ಅಬಕಾರಿ ಸಚಿವರಾಗಿದ್ದ ಸಿಸೋಡಿಯಾ ಅವರನ್ನು ಬಂಧಿಸಿತ್ತು. ಅಂದಿನಿಂದ ಅವರು ಬಂಧನದಲ್ಲಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:45 am, Fri, 4 August 23

Follow Us
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ