AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ನಡುರಸ್ತೆಯಲ್ಲಿ ಯುವತಿಯನ್ನು ಥಳಿಸಿ, ಬಲವಂತವಾಗಿ ಕ್ಯಾಬ್​ಗೆ ಹತ್ತಿಸಿದ ವ್ಯಕ್ತಿಯ ವಿಡಿಯೋ ವೈರಲ್

ವ್ಯಕ್ತಿಯೊಬ್ಬ ಯುವತಿಯನ್ನು ನಡು ರಸ್ತೆಯಲ್ಲಿ ಥಳಿಸಿ ಬಲವಂತವಾಗಿ ಕ್ಯಾಬ್​ನೊಳಗೆ ಕೂರಿಸಿ ಕರೆದೊಯ್ದ ಘಟನೆ ದೆಹಲಿಯಲ್ಲಿ ನಡೆದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Delhi: ನಡುರಸ್ತೆಯಲ್ಲಿ ಯುವತಿಯನ್ನು ಥಳಿಸಿ, ಬಲವಂತವಾಗಿ ಕ್ಯಾಬ್​ಗೆ ಹತ್ತಿಸಿದ ವ್ಯಕ್ತಿಯ ವಿಡಿಯೋ ವೈರಲ್
ಕ್ಯಾಬ್Image Credit source: NDTV
ನಯನಾ ರಾಜೀವ್
|

Updated on:Mar 19, 2023 | 12:22 PM

Share

ವ್ಯಕ್ತಿಯೊಬ್ಬ ಯುವತಿಯನ್ನು ನಡು ರಸ್ತೆಯಲ್ಲಿ ಥಳಿಸಿ ಬಲವಂತವಾಗಿ ಕ್ಯಾಬ್​ನೊಳಗೆ ಕೂರಿಸಿ ಕರೆದೊಯ್ದ ಘಟನೆ ದೆಹಲಿಯಲ್ಲಿ ನಡೆದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಘಟನೆ ನಡೆಯುವಾಗ ಹಲವು ಮಂದಿ ವೀಕ್ಷಿಸುತ್ತಿದ್ದರೇ ವಿನಃ ಯುವತಿಯ ಸಹಾಯಕ್ಕೆ ಯಾರೂ ಬಾರದಿರುವುದೇ ವಿಪರ್ಯಾಸ.

ಇದೀಗ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ದೆಹಲಿಯ ಮಂಗೋಲ್ಪುರಿ ಮೇಲ್ಸೇತುವೆ ಬಳಿ ಘಟನೆ ನಡೆದಿದೆ. ವಿವರವಾದ ವರದಿಯನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ, ಯುವತಿಯನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು  ಕ್ರಮ ಕೈಗೊಂಡಿದ್ದಾರೆ.

ಕ್ಯಾಬ್ ಮಾಲೀಕನ ವಿಳಾಸ ಗುರುಗ್ರಾಮ ಆಗಿದ್ದು, ಪೊಲೀಸ್ ತಂಡವನ್ನು ಅಲ್ಲಿಗೆ ಕಳುಹಿಸಲಾಗಿದೆ. ವಾಹನ ಮತ್ತು ಚಾಲಕನನ್ನು ಪತ್ತೆಹಚ್ಚಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ:Bengaluru Crime: ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದಿದಕ್ಕೆ ಹೆಂಡತಿಯನ್ನು ಗೋಡೆಗೆ ಹೊಡೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಾಫ್ಟ್‌ವೇರ್ ಗಂಡ‌

ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿ ರೋಹಿಣಿಯಿಂದ ವಿಕಾಸಪುರಿಗೆ ಊಬರ್ ಮೂಲಕ ವಾಹನವನ್ನು ಬುಕ್ ಮಾಡಿದ್ದರು. ಮಾರ್ಗಮಧ್ಯೆ ಇಬ್ಬರ ನಡುವೆ ವಾಗ್ವಾದ, ಹೊಡೆದಾಟ ನಡೆದಿದೆ. ಜಗಳದ ನಂತರ ಹುಡುಗಿ ಅಲ್ಲಿಂದ ಹೊರಡಲು ಬಯಸಿದ್ದಳು. ಬಾಲಕ ಬಾಲಕಿಯನ್ನು ಬಲವಂತವಾಗಿ ಕಾರಿನೊಳಗೆ ತಳ್ಳಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದಲ್ಲದೇ ಶನಿವಾರ ತಡರಾತ್ರಿ 11:30ರ ಸುಮಾರಿಗೆ ಗುರುಗ್ರಾಮ್‌ನ ಇಫ್ಕೋ ಚೌಕ್‌ನಲ್ಲಿ ಈ ಕ್ಯಾಬ್ ಕಾಣಿಸಿಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಅದರ ಸಿಸಿಟಿವಿ ದೃಶ್ಯಾವಳಿಯೂ ಪೊಲೀಸರಿಗೆ ಸಿಕ್ಕಿದೆ. ರಾತ್ರಿ ಕ್ಯಾಬ್ ಚಲಾಯಿಸುತ್ತಿದ್ದ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 am, Sun, 19 March 23

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ