AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi: ನಡುರಸ್ತೆಯಲ್ಲಿ ಯುವತಿಯನ್ನು ಥಳಿಸಿ, ಬಲವಂತವಾಗಿ ಕ್ಯಾಬ್​ಗೆ ಹತ್ತಿಸಿದ ವ್ಯಕ್ತಿಯ ವಿಡಿಯೋ ವೈರಲ್

ವ್ಯಕ್ತಿಯೊಬ್ಬ ಯುವತಿಯನ್ನು ನಡು ರಸ್ತೆಯಲ್ಲಿ ಥಳಿಸಿ ಬಲವಂತವಾಗಿ ಕ್ಯಾಬ್​ನೊಳಗೆ ಕೂರಿಸಿ ಕರೆದೊಯ್ದ ಘಟನೆ ದೆಹಲಿಯಲ್ಲಿ ನಡೆದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Delhi: ನಡುರಸ್ತೆಯಲ್ಲಿ ಯುವತಿಯನ್ನು ಥಳಿಸಿ, ಬಲವಂತವಾಗಿ ಕ್ಯಾಬ್​ಗೆ ಹತ್ತಿಸಿದ ವ್ಯಕ್ತಿಯ ವಿಡಿಯೋ ವೈರಲ್
ಕ್ಯಾಬ್Image Credit source: NDTV
Follow us
ನಯನಾ ರಾಜೀವ್
|

Updated on:Mar 19, 2023 | 12:22 PM

ವ್ಯಕ್ತಿಯೊಬ್ಬ ಯುವತಿಯನ್ನು ನಡು ರಸ್ತೆಯಲ್ಲಿ ಥಳಿಸಿ ಬಲವಂತವಾಗಿ ಕ್ಯಾಬ್​ನೊಳಗೆ ಕೂರಿಸಿ ಕರೆದೊಯ್ದ ಘಟನೆ ದೆಹಲಿಯಲ್ಲಿ ನಡೆದಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಈ ಘಟನೆ ನಡೆಯುವಾಗ ಹಲವು ಮಂದಿ ವೀಕ್ಷಿಸುತ್ತಿದ್ದರೇ ವಿನಃ ಯುವತಿಯ ಸಹಾಯಕ್ಕೆ ಯಾರೂ ಬಾರದಿರುವುದೇ ವಿಪರ್ಯಾಸ.

ಇದೀಗ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ದೆಹಲಿಯ ಮಂಗೋಲ್ಪುರಿ ಮೇಲ್ಸೇತುವೆ ಬಳಿ ಘಟನೆ ನಡೆದಿದೆ. ವಿವರವಾದ ವರದಿಯನ್ನು ಇನ್ನೂ ನಿರೀಕ್ಷಿಸಲಾಗುತ್ತಿದೆ, ಯುವತಿಯನ್ನು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು  ಕ್ರಮ ಕೈಗೊಂಡಿದ್ದಾರೆ.

ಕ್ಯಾಬ್ ಮಾಲೀಕನ ವಿಳಾಸ ಗುರುಗ್ರಾಮ ಆಗಿದ್ದು, ಪೊಲೀಸ್ ತಂಡವನ್ನು ಅಲ್ಲಿಗೆ ಕಳುಹಿಸಲಾಗಿದೆ. ವಾಹನ ಮತ್ತು ಚಾಲಕನನ್ನು ಪತ್ತೆಹಚ್ಚಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ:Bengaluru Crime: ಕುಡಿತ ಬಿಟ್ಟು ಕೆಲಸಕ್ಕೆ ಹೋಗು ಎಂದಿದಕ್ಕೆ ಹೆಂಡತಿಯನ್ನು ಗೋಡೆಗೆ ಹೊಡೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಾಫ್ಟ್‌ವೇರ್ ಗಂಡ‌

ಇಬ್ಬರು ಹುಡುಗರು ಮತ್ತು ಒಬ್ಬ ಹುಡುಗಿ ರೋಹಿಣಿಯಿಂದ ವಿಕಾಸಪುರಿಗೆ ಊಬರ್ ಮೂಲಕ ವಾಹನವನ್ನು ಬುಕ್ ಮಾಡಿದ್ದರು. ಮಾರ್ಗಮಧ್ಯೆ ಇಬ್ಬರ ನಡುವೆ ವಾಗ್ವಾದ, ಹೊಡೆದಾಟ ನಡೆದಿದೆ. ಜಗಳದ ನಂತರ ಹುಡುಗಿ ಅಲ್ಲಿಂದ ಹೊರಡಲು ಬಯಸಿದ್ದಳು. ಬಾಲಕ ಬಾಲಕಿಯನ್ನು ಬಲವಂತವಾಗಿ ಕಾರಿನೊಳಗೆ ತಳ್ಳಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದಲ್ಲದೇ ಶನಿವಾರ ತಡರಾತ್ರಿ 11:30ರ ಸುಮಾರಿಗೆ ಗುರುಗ್ರಾಮ್‌ನ ಇಫ್ಕೋ ಚೌಕ್‌ನಲ್ಲಿ ಈ ಕ್ಯಾಬ್ ಕಾಣಿಸಿಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಅದರ ಸಿಸಿಟಿವಿ ದೃಶ್ಯಾವಳಿಯೂ ಪೊಲೀಸರಿಗೆ ಸಿಕ್ಕಿದೆ. ರಾತ್ರಿ ಕ್ಯಾಬ್ ಚಲಾಯಿಸುತ್ತಿದ್ದ ಚಾಲಕನನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 am, Sun, 19 March 23

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಆನೇಕಲ್​ನಲ್ಲಿ ನಿಗೂಢ ಸ್ಫೋಟ: ಕಾಂಕ್ರೀಟ್ ರಸ್ತೆ ಛಿದ್ರ
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ