AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ

ದೆಹಲಿಯ ಮನೆಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳ ತಿಂಗಳ ಬಳಿಕ ಟ್ರಾವೆಲ್​ ಲಾಗ್ಸ್​ ಮೂಲಕ ಸಿಕ್ಕಿಬಿದ್ದಿದ್ದಾನೆ. ಬಿಂದಾಪುರದ ನಿವಾಸಿ ಸಂಜೀವ್ (29) ಜುಲೈ 11 ರಂದು ಉತ್ತಮನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ.

ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 13, 2023 | 9:45 AM

Share

ದೆಹಲಿಯ ಮನೆಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳ ತಿಂಗಳ ಬಳಿಕ ಟ್ರಾವೆಲ್​ ಲಾಗ್ಸ್​ ಮೂಲಕ ಸಿಕ್ಕಿಬಿದ್ದಿದ್ದಾನೆ. ಬಿಂದಾಪುರದ ನಿವಾಸಿ ಸಂಜೀವ್ (29) ಜುಲೈ 11 ರಂದು ಉತ್ತಮನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ. ತಮ್ಮ ಮನೆಯಿಂದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಮನೆ ಮಾಲೀಕರು ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಹತ್ತಿರದ ಸ್ಥಳಗಳ ಸಿಸಿಟಿವಿ ದೃಶ್ಯಗಳ ತನಿಖೆ ನಡೆಸಿದ್ದಾರೆ. ಸಂಜೀವ್ ದೂರುದಾರರ ಮನೆಯಿಂದ ಹೊರಹೋಗುತ್ತಿರುವುದು ಕಂಡುಬಂದಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಆತನ ಕೊನೆಯ ಸ್ಥಳವನ್ನು ಪತ್ತೆಹಚ್ಚಲಾಗಿದೆ. ತಾನು ಸಿಕ್ಕಿಹಾಕಿಕೊಳ್ಳಬಾರದೆಂದು ಗಂಟೆಗಳ ಕಾಲ ತನ್ನ ಮೊಬೈಲ್ ಸ್ವಿಚ್ಡ್​ ಆಫ್ ಮಾಡಿದ್ದ.

ಕದ್ದ ಬಳಿಕ ಸಂಜೀವ್ ಜೀವನ್ ಪಾರ್ಕ್​ನಲ್ಲಿರುವ ಚಿನ್ನದ ಸಾಲ ನೀಡುವ ಅಂಗಡಿಗೆ ಹೋಗಿದ್ದ ಅಲ್ಲಿ ಎರಡು ಉಂಗುರಗಳನ್ನು ಕೊಟ್ಟು 20 ಸಾವಿರ ರೂ ಸಾಲ ತೆಗೆದುಕೊಂಡು ಹೋಗಿದ್ದ ಎಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಸಂಜೀವ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರಯಾಣದ ವೀಡಿಯೊಗಳನ್ನು ಅಪ್ಲೋಡ್ ಮಾಡುವುದನ್ನು ಮುಂದುವರೆಸಿದ್ದ ಅದನ್ನು ಪೊಲೀಸರು ಗಮನಿಸುತ್ತಲೇ ಇದ್ದರು.

ಮತ್ತಷ್ಟು ಓದಿ: ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಅವನಿಗೂ ಪೊಲೀಸರು ಹುಡುಕುತ್ತಿರುವ ವಿಷಯ ತಿಳಿದಿದ್ದು, ಅವರ ಗಮನ ಬೇರೆಡೆಗೆ ಸೆಳೆಯುವ ಸಲುವಾಗಿ ತಾನು ದುಬೈಗೆ ಹೋಗುತ್ತಿದ್ದೇನೆ ಎಂದು ವ್ಲಾಗ್​ನಲ್ಲಿ ಹೇಳಿದ್ದ.

ಸ್ವಲ್ಪ ಸಮಯದ ಬಳಿಕ ಸಂಜೀವ್ ಮತ್ತೊಂದು ವ್ಲಾಗ್ ಅಪ್​ಲೋಡ್ ಮಾಡಿದ್ದ, ಅದರಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿದ್ದೇನೆ ಎಂದು ಹೇಳಿದ್ದ.

ಪೊಲೀಸರು ಆಗ್ರಾದಲ್ಲಿರುವ ಎಲ್ಲಾ ಹೋಟೆಲ್​ಗಳ ತಪಾಸಣೆ ನಡೆಸಿದ್ದಾರೆ, ಕೊನೆಗೆ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಆತನ ಬಳಿಯಿದ್ದ ಒಟ್ಟು 16,000 ರೂ.ವನ್ನು ವಶಪಡಿಸಿಕೊಳ್ಳಲಾಗಿದೆ, ಸಹರಾನ್‌ಪುರದಲ್ಲಿ ದಾಳಿ ನಡೆಸಲಾಯಿತು ಮತ್ತು ಅಬ್ದುಲ್ ಮಲಿಕ್ (65) ಅವರನ್ನು ಮನೆಯಿಂದ ಬಂಧಿಸಲಾಯಿತು. ಕದ್ದ ಚಿನ್ನಾಭರಣವನ್ನು ಸಂಜೀವ್ ಮಲಿಕ್ ಗೆ ಮಾರಾಟ ಮಾಡುತ್ತಿದ್ದ, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!