AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ

ದೆಹಲಿಯ ಮನೆಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳ ತಿಂಗಳ ಬಳಿಕ ಟ್ರಾವೆಲ್​ ಲಾಗ್ಸ್​ ಮೂಲಕ ಸಿಕ್ಕಿಬಿದ್ದಿದ್ದಾನೆ. ಬಿಂದಾಪುರದ ನಿವಾಸಿ ಸಂಜೀವ್ (29) ಜುಲೈ 11 ರಂದು ಉತ್ತಮನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ.

ಚಿನ್ನಾಭರಣ ಲೂಟಿ ಮಾಡಿದ್ದ ಕಳ್ಳ, ತಿಂಗಳ ಬಳಿಕ ಟ್ರಾವೆಲ್​ ವ್ಲಾಗ್ಸ್​ನಿಂದ ಸಿಕ್ಕಿಬಿದ್ದ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Aug 13, 2023 | 9:45 AM

Share

ದೆಹಲಿಯ ಮನೆಯೊಂದರಲ್ಲಿ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದ ಕಳ್ಳ ತಿಂಗಳ ಬಳಿಕ ಟ್ರಾವೆಲ್​ ಲಾಗ್ಸ್​ ಮೂಲಕ ಸಿಕ್ಕಿಬಿದ್ದಿದ್ದಾನೆ. ಬಿಂದಾಪುರದ ನಿವಾಸಿ ಸಂಜೀವ್ (29) ಜುಲೈ 11 ರಂದು ಉತ್ತಮನಗರದ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದ. ತಮ್ಮ ಮನೆಯಿಂದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಮನೆ ಮಾಲೀಕರು ದೂರು ನೀಡಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತನಿಖೆಯ ಸಮಯದಲ್ಲಿ, ಪೊಲೀಸರು ಹತ್ತಿರದ ಸ್ಥಳಗಳ ಸಿಸಿಟಿವಿ ದೃಶ್ಯಗಳ ತನಿಖೆ ನಡೆಸಿದ್ದಾರೆ. ಸಂಜೀವ್ ದೂರುದಾರರ ಮನೆಯಿಂದ ಹೊರಹೋಗುತ್ತಿರುವುದು ಕಂಡುಬಂದಿದೆ. ಉತ್ತರಾಖಂಡದ ಹರಿದ್ವಾರದಲ್ಲಿ ಆತನ ಕೊನೆಯ ಸ್ಥಳವನ್ನು ಪತ್ತೆಹಚ್ಚಲಾಗಿದೆ. ತಾನು ಸಿಕ್ಕಿಹಾಕಿಕೊಳ್ಳಬಾರದೆಂದು ಗಂಟೆಗಳ ಕಾಲ ತನ್ನ ಮೊಬೈಲ್ ಸ್ವಿಚ್ಡ್​ ಆಫ್ ಮಾಡಿದ್ದ.

ಕದ್ದ ಬಳಿಕ ಸಂಜೀವ್ ಜೀವನ್ ಪಾರ್ಕ್​ನಲ್ಲಿರುವ ಚಿನ್ನದ ಸಾಲ ನೀಡುವ ಅಂಗಡಿಗೆ ಹೋಗಿದ್ದ ಅಲ್ಲಿ ಎರಡು ಉಂಗುರಗಳನ್ನು ಕೊಟ್ಟು 20 ಸಾವಿರ ರೂ ಸಾಲ ತೆಗೆದುಕೊಂಡು ಹೋಗಿದ್ದ ಎಂಬುದು ಪೊಲೀಸರು ನಡೆಸಿದ ತನಿಖೆಯಲ್ಲಿ ಬಹಿರಂಗಗೊಂಡಿದೆ.

ಸಂಜೀವ್ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರಯಾಣದ ವೀಡಿಯೊಗಳನ್ನು ಅಪ್ಲೋಡ್ ಮಾಡುವುದನ್ನು ಮುಂದುವರೆಸಿದ್ದ ಅದನ್ನು ಪೊಲೀಸರು ಗಮನಿಸುತ್ತಲೇ ಇದ್ದರು.

ಮತ್ತಷ್ಟು ಓದಿ: ಬೆಂಗಳೂರು: ದ್ವಿಚಕ್ರ ಸವಾರನಿಗೆ ಮಾರಕಾಸ್ತ್ರ ತೋರಿಸಿ ದರೋಡೆ! ಭೀತಿಗೊಳಿಸುವ ವಿಡಿಯೋ ಇಲ್ಲಿದೆ

ಅವನಿಗೂ ಪೊಲೀಸರು ಹುಡುಕುತ್ತಿರುವ ವಿಷಯ ತಿಳಿದಿದ್ದು, ಅವರ ಗಮನ ಬೇರೆಡೆಗೆ ಸೆಳೆಯುವ ಸಲುವಾಗಿ ತಾನು ದುಬೈಗೆ ಹೋಗುತ್ತಿದ್ದೇನೆ ಎಂದು ವ್ಲಾಗ್​ನಲ್ಲಿ ಹೇಳಿದ್ದ.

ಸ್ವಲ್ಪ ಸಮಯದ ಬಳಿಕ ಸಂಜೀವ್ ಮತ್ತೊಂದು ವ್ಲಾಗ್ ಅಪ್​ಲೋಡ್ ಮಾಡಿದ್ದ, ಅದರಲ್ಲಿ ಉತ್ತರ ಪ್ರದೇಶದ ಆಗ್ರಾದಲ್ಲಿದ್ದೇನೆ ಎಂದು ಹೇಳಿದ್ದ.

ಪೊಲೀಸರು ಆಗ್ರಾದಲ್ಲಿರುವ ಎಲ್ಲಾ ಹೋಟೆಲ್​ಗಳ ತಪಾಸಣೆ ನಡೆಸಿದ್ದಾರೆ, ಕೊನೆಗೆ ಕಳ್ಳ ಸಿಕ್ಕಿಬಿದ್ದಿದ್ದಾನೆ.

ಆತನ ಬಳಿಯಿದ್ದ ಒಟ್ಟು 16,000 ರೂ.ವನ್ನು ವಶಪಡಿಸಿಕೊಳ್ಳಲಾಗಿದೆ, ಸಹರಾನ್‌ಪುರದಲ್ಲಿ ದಾಳಿ ನಡೆಸಲಾಯಿತು ಮತ್ತು ಅಬ್ದುಲ್ ಮಲಿಕ್ (65) ಅವರನ್ನು ಮನೆಯಿಂದ ಬಂಧಿಸಲಾಯಿತು. ಕದ್ದ ಚಿನ್ನಾಭರಣವನ್ನು ಸಂಜೀವ್ ಮಲಿಕ್ ಗೆ ಮಾರಾಟ ಮಾಡುತ್ತಿದ್ದ, ಆತನ ಬಳಿಯಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?