AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Mayor Election: ಎಎಪಿ, ಬಿಜೆಪಿ ಮಹಿಳಾ ಕೌನ್ಸಿಲರ್​ಗಳ ನಡುವೆ ಘರ್ಷಣೆ, ಪರಸ್ಪರ ಪೆಟ್ಟಿಗೆಗಳನ್ನು ಎಸೆದು ಗದ್ದಲ, ಮಾತಿನೇಟು

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಎಎಪಿ ಹಾಗೂ ಬಿಜೆಪಿ ಮಹಿಳಾ ಕೌನ್ಸಿಲರ್​ಗಳ ನಡುವೆ ಘರ್ಷಣೆ ಶುರುವಾಗಿದೆ. ಬುಧವಾರ ಐದನೇ ಬಾರಿಗೆ ಸದನವನ್ನು ಮುಂದೂಡಲಾಗಿತ್ತು.

ನಯನಾ ರಾಜೀವ್
| Updated By: ಅಕ್ಷಯ್​ ಪಲ್ಲಮಜಲು​​|

Updated on:Feb 23, 2023 | 10:29 AM

Share

ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್​ನಲ್ಲಿ ಎಎಪಿ ಹಾಗೂ ಬಿಜೆಪಿ ಮಹಿಳಾ ಕೌನ್ಸಿಲರ್​ಗಳ ನಡುವೆ ಘರ್ಷಣೆ ಶುರುವಾಗಿದೆ. ಬುಧವಾರ ಐದನೇ ಬಾರಿಗೆ ಸದನವನ್ನು ಮುಂದೂಡಲಾಗಿತ್ತು. ದೆಹಲಿ ಮೇಯರ್ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಅಭ್ಯರ್ಥಿ ಶೆಲ್ಲಿ ಒಬೆರಾಯ್ ಭರ್ಜರಿ ಗೆಲುವು ಸಾಧಿಸಿದ್ದರು. ಎಎಪಿಯು 150 ಮತ ಗಳಿಸುವ ಮೂಲಕ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಅಂತ್ಯಗೊಳಿಸಿತ್ತು.

ಚುನಾವಣೆ ವೇಳೆ ಕೌನ್ಸಿಲರ್​ಗಳು ಮೊಬೈಲ್ ಮೂಲಕ ಮತ ಯಂತ್ರಗಳ ಚಿತ್ರವನ್ನು ತೆಗೆಯುತ್ತಿದ್ದರು, ಇದು ಮತದಾನ ಉಲ್ಲಂಘನೆಯಾದಂತಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಆಗ ಗದ್ದಲ ಶುರುವಾಗಿತ್ತು, ಹಾಗಾಗಿ ಈ ಮತಗಳನ್ನು ತಿರಸ್ಕರಿಸಿ ಹೊಸದಾಗಿ ಚುನಾವಣೆ ನಡೆಸಿ ಎಂದು ಒತ್ತಾಯಿಸಿದೆ.

ಮತ್ತಷ್ಟು ಓದಿ: Delhi Mayor Polls: ಫೆ.22ಕ್ಕೆ ಮೇಯರ್ ಚುನಾವಣೆ ಘೋಷಣೆ

250 ವಾರ್ಡ್​ಗಳಿಗೆ ನಡೆದಿದ್ದ ದೆಹಲಿ ಚುನಾವಣೆಯಲ್ಲಿ ಎಎಪಿ 134, ಬಿಜೆಪಿ 104, ಕಾಂಗ್ರೆಸ್ 9 ಇತರರು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಗದ್ದಲ, ಗಲಾಟೆಯ ಹಿನ್ನೆಲೆಯಲ್ಲಿ 4 ಬಾರಿ ದೆಹಲಿ ಮೇಯರ್ ಚುನಾವಣೆಯನ್ನು ಮುಂದೂಡಲಾಗಿತ್ತು. ಪಾಲಿಕೆ ಚುನಾವಣೆ ನಡೆದು 2 ತಿಂಗಳ ಬಳಿಕ ಮೇಯರ್ ಆಯ್ಕೆ ಮಾಡಲಾಗಿದೆ.

150 ಮತಗಳನ್ನು ಪಡೆಯುವ ಮೂಲಕ ಆಮ್ ಆದ್ಮಿ ಪಕ್ಷಕ್ಕೆ ಮೇಯರ್ ಪಟ್ಟ ಸಿಕ್ಕಿದೆ. ದೆಹಲಿ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಸದಸ್ಯರಿಗೂ ಮತದಾನದ ಹಕ್ಕು ನೀಡಿದ್ದರು. ಇದೇ ವಿಚಾರಕ್ಕೆ ಪಾಲಿಕೆ ಸಭಾಂಗಣದಲ್ಲಿ ಗದ್ದಲ ನಡೆದಿತ್ತು.

Published On - 10:11 am, Thu, 23 February 23

ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ಇಂದು ಈ ರಾಶಿಯವರು ಎಚ್ಚರಿಕೆಯಿಂದಿರಬೇಕು
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?