AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Municipal Corporation Election: ದೆಹಲಿ ಮಹಾನಗರ ಪಾಲಿಕೆ ಮತದಾನ ಆರಂಭ, ಚುನಾವಣಾ ಕರ್ತವ್ಯಕ್ಕಾಗಿ ಲಕ್ಷ ಸಿಬ್ಬಂದಿ ನಿಯೋಜನೆ

ದೆಹಲಿ ಎಂಸಿಡಿ ಚುನಾವಣೆಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್ ಅವರು ರಾಜೌರಿ ಗಾರ್ಡನ್‌ನಲ್ಲಿರುವ ಮತಗಟ್ಟೆಗೆ ಆಗಮಿಸಿದ್ದಾರೆ.

Delhi Municipal Corporation Election: ದೆಹಲಿ ಮಹಾನಗರ ಪಾಲಿಕೆ ಮತದಾನ ಆರಂಭ, ಚುನಾವಣಾ ಕರ್ತವ್ಯಕ್ಕಾಗಿ ಲಕ್ಷ ಸಿಬ್ಬಂದಿ ನಿಯೋಜನೆ
ಮತದಾನ ಮಾಡಿದ ಕಾಂಗ್ರೆಸ್ ಮುಖಂಡ ಅಜಯ್ ಮಾಕನ್
TV9 Web
| Edited By: |

Updated on:Dec 04, 2022 | 8:45 AM

Share

MCD Elections 2o22: ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್​ಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 8ರಿಂದ ಸಂಜೆ 5.30ರವರೆಗೆ ಮತದಾನ ನಡೆಯಲಿದ್ದು ಈಗಾಗಲೇ ಅನೇಕರು ತಮ್ಮ ಮತ ಚಲಾಯಿಸಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಮತದಾನ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. 40 ಸಾವಿರ ಪೊಲೀಸರು, 20 ಸಾವಿರ ಹೋಮ್​ಗಾರ್ಡ್ಸ್, 108 ಕಂಪನಿಗಳ ಅರೆಸೇನಾಪಡೆ, ಸಶಸ್ತ್ರ ಮೀಸಲು ಪಡೆ ನಿಯೋಜನೆ ಮಾಡಲಾಗಿದೆ. ಹಾಗೂ ಸೂಕ್ಷ್ಮ & ಅತಿಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್​ ಮೂಲಕ ಕಣ್ಗಾವಲು ಇರಿಸಲಾಗಿದೆ.

ಎಂಸಿಡಿ ಚುನಾವಣೆಗೆ ಒಟ್ಟು 1,349 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇಂದು ಮತದಾನಕ್ಕಾಗಿ 68 ಪಿಂಕ್ ಬೂತ್ ಸೇರಿದಂತೆ 13,655 ಬೂತ್​ಗಳ ಸ್ಥಾಪನೆ ಮಾಡಲಾಗಿದೆ. 1.46 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಚುನಾವಣಾ ಕರ್ತವ್ಯಕ್ಕಾಗಿ ಒಂದು ಲಕ್ಷ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಇನ್ನು ಮತದಾನದ ವೇಳೆ ಕೋಮು ಗಲಭೆ ನಡೆಯದಂತೆ ಎಚ್ಚರಿಕೆ ವಹಿಸುವುದು, ಅಭ್ಯರ್ಥಿಗಳು ಮತದಾರರಿಗೆ ಆಮಿಷವೊಡ್ಡದಂತೆ ತಡೆಯುವುದು ಪೊಲೀಸರು ಮುಖ್ಯ ಗುರಿಯಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಡಿಸೆಂಬರ್‌ 7ರಂದು ಮತಎಣಿಕೆ ನಡೆಯಲಿದೆ.

ಮತದಾರರು ಮತ ಚಲಾಯಿಸುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮನವಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಮತ ಚಲಾಯಿಸುವಂತೆ ದೆಹಲಿಯ ಜನತೆಗೆ ಮನವಿ ಮಾಡಿದರು. ಈ ಕುರಿತು ಟ್ವೀಟ್ ಮಾಡಿರುವ ಕೇಜ್ರಿವಾಲ್, “ಇಂದು ದೆಹಲಿಯನ್ನು ಸ್ವಚ್ಛ ಮತ್ತು ಸುಂದರವಾಗಿಸಲು ಮತದಾನ ನಡೆಯುತ್ತಿದೆ, ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ಮಾಡಲು ಮತದಾನ ನಡೆಯುತ್ತಿದೆ. ಇಂದು ನಿಮ್ಮ ಮತವನ್ನು ಚಲಾಯಿಸಲು ಹೋಗಿ ಎಂದು ಎಲ್ಲಾ ದೆಹಲಿಯ ಜನತೆಗೆ ಮನವಿ ಮಾಡಿದ್ದಾರೆ.

ಮತದಾನ ಮಾಡಿದ ಕಾಂಗ್ರೆಸ್ ಮುಖಂಡ ಅಜಯ್ ಮಾಕನ್

ದೆಹಲಿ ಎಂಸಿಡಿ ಚುನಾವಣೆಗೆ ಮತ ಚಲಾಯಿಸಲು ಕಾಂಗ್ರೆಸ್ ಮುಖಂಡ ಅಜಯ್ ಮಾಕೆನ್ ಅವರು ರಾಜೌರಿ ಗಾರ್ಡನ್‌ನಲ್ಲಿರುವ ಮತಗಟ್ಟೆಗೆ ಆಗಮಿಸಿದ್ದಾರೆ.

Published On - 8:41 am, Sun, 4 December 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್