AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilli Ka Ladka: ಕೇಜ್ರಿವಾಲ್ ಸರ್ಕಾರದ ವೈಫಲ್ಯಗಳನ್ನು ತೋರಿಸಲು ಬಿಜೆಪಿಯಿಂದ ಕಾರ್ಟೂನ್ ಸರಣಿ ಬಿಡುಗಡೆ

ದೆಹಲಿಯಲ್ಲಿ ಎಂಸಿಡಿ ಚುನಾವಣೆಗೆ ಕೆಲವೇ ದಿನಗಳ ಮೊದಲು ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೇಲೆ ಇನ್ನಷ್ಟು ದಾಳಿಗಳನ್ನು ಮುಂದುವರೆಸಿದೆ.

Dilli Ka Ladka: ಕೇಜ್ರಿವಾಲ್ ಸರ್ಕಾರದ ವೈಫಲ್ಯಗಳನ್ನು ತೋರಿಸಲು ಬಿಜೆಪಿಯಿಂದ ಕಾರ್ಟೂನ್ ಸರಣಿ ಬಿಡುಗಡೆ
ದಿಲ್ಲಿ ಕಾ ಲಡ್ಕಾ ಕಾರ್ಟೂನ್ ಸರಣಿ
TV9 Web
| Edited By: |

Updated on: Nov 28, 2022 | 1:09 PM

Share

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸುವ ಉದ್ದೇಶದಿಂದ ಬಿಜೆಪಿ ಭಾನುವಾರ ‘ದಿಲ್ಲಿ ಕಾ ಲಡ್ಕಾ’ (Dilli Ka Ladka) ಎಂಬ ಕಾರ್ಟೂನ್ ಸರಣಿಯನ್ನು ಬಿಡುಗಡೆ ಮಾಡಿದೆ. ದೆಹಲಿಯ ನಾಗರಿಕ ಸಂಸ್ಥೆ ಚುನಾವಣೆಗೆ (MCD) ಒಂದು ವಾರ ಮುಂಚಿತವಾಗಿ ಈ ಕಾರ್ಟೂನ್ ಬಿಡುಗಡೆ ಮಾಡಲಾಗಿದೆ.

ದೆಹಲಿಯಲ್ಲಿ ಎಂಸಿಡಿ ಚುನಾವಣೆಗೆ ಕೆಲವೇ ದಿನಗಳ ಮೊದಲು ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜಧಾನಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಮೇಲೆ ಇನ್ನಷ್ಟು ದಾಳಿಗಳನ್ನು ಮುಂದುವರೆಸಿದೆ. ಕಾರ್ಟೂನ್ ಸರಣಿಯ ಹೊರತಾಗಿ ಜೈಲಿನಲ್ಲಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಮೇಲೆ ಬಿಜೆಪಿ ಹಲವಾರು ಅನಿಮೇಷನ್‌ಗಳು ಮತ್ತು ಕಾರ್ಟೂನ್‌ಗಳನ್ನು ಪೋಸ್ಟ್ ಮಾಡುತ್ತಿದೆ. ಜೈಲಿನೊಳಗೆ ಸತ್ಯೇಂದ್ರ ಜೈನ್ ಅವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದನ್ನು ಸಾಬೀತುಪಡಿಸುವ ಅನೇಕ ಸಿಸಿಟಿವಿ ವಿಡಿಯೋಗಳನ್ನು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ತಿಹಾರ್ ಜೈಲಿನಲ್ಲಿ ಆಪ್ ಸಚಿವ ಸತ್ಯೇಂದ್ರ ಜೈನ್​ಗೆ ವಿಐಪಿ ಉಪಚಾರ; ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್

ಒಂದು ದೃಶ್ಯದಲ್ಲಿ ವ್ಯಕ್ತಿಯೊಬ್ಬ ಸತ್ಯೇಂದ್ರ ಜೈನ್‌ಗೆ ತನ್ನ ಜೈಲಿನ ಕೊಠಡಿಯೊಳಗೆ ಕಾಲು ಮಸಾಜ್ ಮಾಡುವುದನ್ನು ಕಾಣಬಹುದು. ಆ ವ್ಯಕ್ತಿ ರಿಂಕು ಎಂದು ಹೇಳಲಾಗಿದ್ದು, ಆತ ತನ್ನ ಸ್ವಂತ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಖೈದಿಯಾಗಿದ್ದಾನೆ. ಈ ರೀತಿಯ ಇನ್ನೂ ಕೆಲವು ವಿಡಿಯೋಗಳು ಕೂಡ ವೈರಲ್ ಆಗಿವೆ.

ಈ ಕಾರ್ಟೂನ್ ಸರಣಿಯನ್ನು ಮತದಾನದ ಮೊದಲು ವೈರಲ್ ಮಾಡಲು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪೋಸ್ಟ್ ಮಾಡಲಾಗುತ್ತದೆ. ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (MCD)ಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು