Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 4ನೇ ಹಂತದ ಮೆಟ್ರೋ ಮಾರ್ಗ, ದೇಶದಲ್ಲಿ 1000 ಕಿಮೀ ಮೆಟ್ರೋ ಸಂಚಾರ, ದಾಖಲೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೆಹಲಿ ಮೆಟ್ರೋದ ನಾಲ್ಕನೇ ಹಂತದ ಜನಕಪುರಿ-ಕೃಷ್ಣಾ ಪಾರ್ಕ್ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಇದೇ ವೇಳೆ, ರಿಥಾಲಾ-ಕುಂಡ್ಲಿ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುತ್ತದೆ. ಈ ಮೂಲಕ ಭಾರತ 1000 ಕಿಮೀ ಮೆಟ್ರೋ ರೈಲು ಮಾರ್ಗವನ್ನು ಹೊಂದಿದ ವಿಶ್ವದ ಮೂರನೇ ದೇಶವಾಗಿದೆ.

ದೆಹಲಿಯಲ್ಲಿ 4ನೇ ಹಂತದ ಮೆಟ್ರೋ ಮಾರ್ಗ, ದೇಶದಲ್ಲಿ 1000 ಕಿಮೀ ಮೆಟ್ರೋ ಸಂಚಾರ, ದಾಖಲೆ
ನರೇಂದ್ರ ಮೋದಿ
Follow us
ವಿವೇಕ ಬಿರಾದಾರ
|

Updated on:Jan 05, 2025 | 11:33 AM

ನವದೆಹಲಿ, ಜನವರಿ 05: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ರವಿವಾರ (ಜ.05) ದೆಹಲಿ ಮೆಟ್ರೋದ ನಾಲ್ಕನೇ ಹಂತ (Delhi Metro 4th Phase) ಜನಕಪುರಿ ಮತ್ತು ಕೃಷ್ಣಾ ಪಾರ್ಕ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಸುಮಾರು 1,200 ಕೋಟಿ ರೂ. ಮೌಲ್ಯದ ಯೋಜನೆ ಇದಾಗಿದೆ. ಇದೇ ವೇಳೆ, ದೆಹಲಿ ಮೆಟ್ರೋ 4ನೇ ಹಂತದ 26.5 ಕಿಲೋಮೀಟರ್ ರಿಥಾಲಾ-ಕುಂಡ್ಲಿ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಇದರ ಅಂದಾಜು ವೆಚ್ಚ 6,230 ಕೋಟಿ ರೂ. ಆಗಿದೆ. ಹೊಸ ಕಾರಿಡಾರ್ ದೆಹಲಿಯ ರಿಥಾಲಾವನ್ನು ಹರಿಯಾಣದ ನಾಥುಪುರ್ (ಕುಂಡ್ಲಿ) ಗೆ ಸಂಪರ್ಕಿಸುತ್ತದೆ.

ದೇಶದಲ್ಲಿ 1000 ಕಿಮೀ ಮೆಟ್ರೋ ರೈಲು ಸಂಚಾರ

ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ 23 ನಗರಗಳಲ್ಲಿ ಒಟ್ಟು 1000 ಕಿಮೀನಷ್ಟು ಮೆಟ್ರೋ ರೈಲು ಸಂಚರಿಸುತ್ತಿದೆ. ಈ ಮೂಲಕ ಭಾರತವು ವಿಶ್ವದ 3ನೇ ಅತಿದೊಡ್ಡ ಮೆಟ್ರೋ ಮಾರ್ಗ ಹೊಂದಿದ ದೇಶವಾಗಿ ಹೊರಹೊಮ್ಮಿದೆ. ಚೀನಾ ಮತ್ತು ಅಮೆರಿಕದ ನಂತರ ಭಾರತ ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ರೈಲು ಮಾರ್ಗವನ್ನು ಹೊಂದಿರುವ ದೇಶವಾಗಿದೆ.

2014ರಲ್ಲಿ ದೇಶದ ಐದು ನಗರಗಳಲ್ಲಿ 248 ಕಿಮೀ ಮಾತ್ರ ಮೆಟ್ರೋ ರೈಲು ಸಂಚರಿಸುತ್ತಿತ್ತು. 10 ವರ್ಷಗಳ ನಂತರ ಅಂದರೆ 2025ರ ಹೊತ್ತಿಗೆ ನಾಲ್ಕು ಪಟ್ಟು ಹೆಚ್ಚಾಗಿದ್ದು, 23 ನಗರಗಳಲ್ಲಿ 1000 ಕಿಮೀ ಮೆಟ್ರೋ ರೈಲು ಸಂಚರಿಸುತ್ತಿದೆ. 26 ನಗರಗಳಲ್ಲಿ 1000 ಕಿಮೀ ಮೆಟ್ರೋ ಕಾಮಗಾರಿ ಪ್ರಗತಿಯಲ್ಲಿದೆ.

ಟ್ವಿಟರ್​ ಪೋಸ್ಟ್​

ಇದನ್ನೂ ಓದಿ: ರಷ್ಯಾ-ಉಕ್ರೇನ್ ಕದನ ವಿರಾಮಕ್ಕೆ ಭಾರತ ಮಧ್ಯಸ್ಥಿಕೆ ವಹಿಸುವ ಸಾಧ್ಯತೆ

ಪ್ರಧಾನಿ ಮೋದಿ ರವಿವಾರ ಒಟ್ಟು 12,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟನೆ ಮಾಡಲಿದ್ದು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಭಾರತದಲ್ಲಿ ಮೆಟ್ರೊ ನಿರ್ಮಾಣಕ್ಕೆ ಪ್ರತಿ ಕಿಲೋಮೀಟರ್‌ಗೆ ಸರಾಸರಿ 407 ಕೋಟಿ ರೂ. ತಗಲುತ್ತದೆ ಎಂದು ವರದಿಯಾಗಿದೆ. ಭಾರತೀಯ ಮೆಟ್ರೋಗಳಲ್ಲಿ ಪ್ರತಿದಿನ 10 ಮಿಲಿಯನ್ ಪ್ರಯಾಣಿಕರು ಸಂಚರಿಸುತ್ತಾರೆ ಎಂದು ತಿಳಿದುಬಂದಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:27 am, Sun, 5 January 25

ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡ ಡಿಕೆ ಶಿವಕುಮಾರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
ದರ್ಶನ್​ನಿಂದ ಸಿಕ್ಕ ಬೆಸ್ಟ್ ಗಿಫ್ಟ್ ಯಾವುದು? ವಿವರಿಸಿದ ಧನ್ವೀರ್
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ