AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ

ದೆಹಲಿಯ ಆದರ್ಶನಗರದಲ್ಲಿರುವ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಜೀವ ದಹನವಾಗಿದ್ದಾರೆ. ಬೆಳಗಿನ ಜಾವ 2.39ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಮನೆಯ ವಸ್ತುಗಳು ಇದ್ದ ಕೋಣೆಯಲ್ಲಿ ಬೆಂಕಿ ವ್ಯಾಪಿಸಿದೆ. ಅಗ್ನಿಶಾಮಕ ದಳವು ಬೆಂಕಿಯನ್ನು ನಿಯಂತ್ರಿಸಿದೆ. ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ.

ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಅಗ್ನಿ ಅವಘಡ, ಬಾಲಕಿ ಸೇರಿ ಮೂವರು ಸಜೀವ ದಹನ
ಅಗ್ನಿ ಅವಘಡ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jan 06, 2026 | 10:38 AM

Share

ನವದೆಹಲಿ, ಜನವರಿ 06: ದೆಹಲಿಯ ಮೆಟ್ರೋ ಸಿಬ್ಬಂದಿ ವಸತಿಗೃಹದಲ್ಲಿ ಭಾರಿ ಅಗ್ನಿ ಅವಘಡ(Fire Accident) ಸಂಭವಿಸಿದ್ದು, ಬಾಲಕಿ ಸೇರಿ ಮೂವರು ಸಜೀವದಹನವಾಗಿದ್ದಾರೆ.ದೆಹಲಿಯ ಆದರ್ಶನಗರದಲ್ಲಿರುವ ವಸತಿಗೃಹದಲ್ಲಿ ಈ ಘಟನೆ ನಡೆದಿದೆ. ಪತಿ, ಪತ್ನಿ ಮತ್ತು ಬಾಲಕಿ ದುರಂತವಾಗಿ ಸಾವನ್ನಪ್ಪಿದ್ದಾರೆ.ಮೂವರ ಮೃತದೇಹಗಳನ್ನು ಸುಟ್ಟು ಕರಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಅಗ್ನಿ ಶಾಮಕದಳದ ಸಿಬ್ಬಂದಿ ನೀಡಿರುವ ಮಾಹಿತಿ ಪ್ರಕಾರ, ಬೆಳಗಿನ ಜಾವ 2.39ಕ್ಕೆ ಡಿಎಂಆರ್‌ಸಿ ಕ್ವಾರ್ಟರ್‌ನಲ್ಲಿರುವ ಗೃಹೋಪಯೋಗಿ ವಸ್ತುವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿ ಮಾಡಲಾಗಿತ್ತು, ನಂತರ ಆರು ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು. ಐದನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಗ್ನಿಶಾಮಕ ದಳದವರು ಬಂದಾಗ, ಮೂವರ ಸುಟ್ಟು ಕರಕಲಾದ ಶವಗಳು ಕಣ್ಣಿಗೆ ಬಿದ್ದಿದ್ದವು.

ಮೃತರನ್ನು ಅಜಯ್ (42), ನೀಲಂ (38) ಮತ್ತು ಜಾನ್ಹವಿ (10) ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಡಿಎಂಆರ್‌ಸಿ ಕ್ವಾರ್ಟರ್ಸ್ ಮಜ್ಲಿಸ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಇದೆ. ಪತಿ, ಪತ್ನಿ ಮತ್ತು ಬಾಲಕಿ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಎಲ್ಲರೂ ಒಂದೇ ಕೋಣೆಯಲ್ಲಿ ಮಲಗಿದ್ದರು.

ಮತ್ತಷ್ಟು ಓದಿ: ಆಂಧ್ರಪ್ರದೇಶದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ಅವಘಡ; ಸ್ಥಳೀಯ ನಿವಾಸಿಗಳ ಸ್ಥಳಾಂತರ

ಬೆಳಗ್ಗೆ 6.40 ರ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಮನೆಯ ವಸ್ತುಗಳು ಇದ್ದ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಳಗೆ ಮೂರು ಸುಟ್ಟ ದೇಹಗಳು ಪತ್ತೆಯಾಗಿವೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯನ್ನು ನಂದಿಸುವಾಗ ಅಗ್ನಿಶಾಮಕ ದಳದ ಸಿಬ್ಬಂದಿ ರಾಕೇಶ್ ಅವರ ಕೈಗೆ ಗಾಯವಾಗಿದ್ದು, ಅವರನ್ನು ಜಗಜೀವನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಪ್ರಥಮ ಚಿಕಿತ್ಸೆಯ ನಂತರ ಬಿಡುಗಡೆ ಮಾಡಲಾಯಿತು.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು