AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್
ಆಯೇಷಾ ಬಾನು
| Edited By: |

Updated on: Jan 26, 2021 | 2:00 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಮಣ್ಣಿನ ಮಕ್ಕಳ ಸಮರ ಹಿಂಸಾಚಾರಕ್ಕೆ ತಿರುಗುತ್ತಿದೆ. ಸಾವಿರಾರು ರೈತರು ಟ್ರಾಕ್ಟರ್​ಗಳ ಮೂಲಕ ಪೊಲೀಸರ ಭದ್ರತೆಯನ್ನು ಭೇದಿಸಿ ಪಾರ್ಲಿಮೆಂಟ್​ನತ್ತ ನುಗ್ಗುತ್ತಿದ್ದಾರೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ.

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ಟ್ರಾಕ್ಟರ್​ಗಳ ಮೂಲಕ ಬ್ಯಾರಿಕೇಡ್​ಗಳನ್ನು ಉಡಾಯಿಸಿ ರೈತರು ದೊಣ್ಣೆ, ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ರೆ, ಪೊಲೀಸರು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ ಮಾಡ್ತಿದ್ದಾರೆ. ಒಬ್ಬರನೊಬ್ಬರು ತಡೆಯಲು ಹರ ಸಾಹಸಗಳೇ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನದಂತೆ ರಾಜಧಾನಿ ರಣರಂಗವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ 11 ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್ ಆಗಿವೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ಬಂದ್ ಮಾಡಲಾಗಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!