AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ರಣರಂಗವಾದ ದೆಹಲಿ.. ಹಸಿರು ಮಾರ್ಗದ ಮೆಟ್ರೋ ಸಂಚಾರ ಬಂದ್
ಆಯೇಷಾ ಬಾನು
| Updated By: Lakshmi Hegde|

Updated on: Jan 26, 2021 | 2:00 PM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಮಣ್ಣಿನ ಮಕ್ಕಳ ಸಮರ ಹಿಂಸಾಚಾರಕ್ಕೆ ತಿರುಗುತ್ತಿದೆ. ಸಾವಿರಾರು ರೈತರು ಟ್ರಾಕ್ಟರ್​ಗಳ ಮೂಲಕ ಪೊಲೀಸರ ಭದ್ರತೆಯನ್ನು ಭೇದಿಸಿ ಪಾರ್ಲಿಮೆಂಟ್​ನತ್ತ ನುಗ್ಗುತ್ತಿದ್ದಾರೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ.

ಬಾವುಟ ಕೈಯಲ್ಲಿ ಹಿಡಿದು ದೇಶದ ಬಗ್ಗೆ ಹೆಮ್ಮೆ ಪಡಬೇಕಿದ್ದ ದಿನದಂದೆ ದೇಶದಲ್ಲೊಂದು ಭಯಾನಕ ಘಟನೆ ನಡೆಯುತ್ತಿದೆ. ಸರ್ಕಾರ, ರೈತ, ಪೊಲೀಸರ ನಡುವೆ ಕಾಳಗ ಶುರುವಾಗಿದೆ. ಕೃಷಿ ಕಾಯ್ದೆಯನ್ನು ಹಿಂಪಡೆಯಲು ಒತ್ತಾಯಿಸಿ ರೈತರು ದೆಹಲಿಗೆ ಕಾಲಿಟ್ಟಿದ್ದಾರೆ. ಆದ್ರೆ ಪೊಲೀಸರು ರೈತರ ಯೋಜನೆಯನ್ನು ವಿಫಲ ಮಾಡಲು ಪಣತೊಟ್ಟಿದ್ದಾರೆ. ಈ ನಡುವೆ ಪೊಲೀಸರು ಮತ್ತು ರೈತರ ನಡುವೆ ಭಾರಿ ಸಂಘರ್ಷ ಉಂಟಾಗುತ್ತಿದೆ.

ಟ್ರಾಕ್ಟರ್​ಗಳ ಮೂಲಕ ಬ್ಯಾರಿಕೇಡ್​ಗಳನ್ನು ಉಡಾಯಿಸಿ ರೈತರು ದೊಣ್ಣೆ, ಮಾರಕಾಸ್ತ್ರ ಹಿಡಿದು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ರೆ, ಪೊಲೀಸರು ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ ಮಾಡ್ತಿದ್ದಾರೆ. ಒಬ್ಬರನೊಬ್ಬರು ತಡೆಯಲು ಹರ ಸಾಹಸಗಳೇ ನಡೆಯುತ್ತಿದೆ. ಗಣರಾಜ್ಯೋತ್ಸವ ದಿನದಂತೆ ರಾಜಧಾನಿ ರಣರಂಗವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ 11 ಮೆಟ್ರೋ ನಿಲ್ದಾಣಗಳು ಸಂಪೂರ್ಣ ಬಂದ್ ಆಗಿವೆ. ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹಸಿರು ಮಾರ್ಗದ ಮೆಟ್ರೋ ಬಂದ್ ಮಾಡಲಾಗಿದೆ.

ತೀವ್ರ ಸ್ವರೂಪ ಪಡೆದ ಪ್ರತಿಭಟನೆ.. ರೈತರ ಮೇಲೆ ಅಶ್ರುವಾಯು, ಲಾಠಿಚಾರ್ಜ್‌, ಜಲಫಿರಂಗಿ ಪ್ರಯೋಗ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!